ಮಹಿಳಾ ದಿನ | ‘ಬಿಜೆಪಿ ಹಟಾವೋ – ಬೇಟಿ ಬಚಾವೋ’; ಕಾಂಗ್ರೆಸ್‌ ಕರೆ

Date:

Advertisements

ಅಂತರಾಷ್ಟ್ರೀಯ ಮಹಿಳಾ ದಿನದಂದು ಕಾಂಗ್ರೆಸ್ ಶುಕ್ರವಾರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ‘ಬಿಜೆಪಿ ಹಟಾವೋ – ಬೇಟಿ ಬಚಾವೋ’ ಎಂದು ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಮಣಿಪುರಕ್ಕೆ ಏಕೆ ಭೇಟಿ ನೀಡಿಲ್ಲ. ಮಹಿಳಾ ಕುಸ್ತಿಪಟುಗಳ ಮೇಲೆ ಬಿಜೆಪಿ ಸಂಸದನ ಲೈಂಗಿಕ ಕಿರುಕುಳ ಪ್ರಕರಣ ಕುರಿತು ಅವರು ‘ಮೌನ’ವಾಗಿರುವುದು ಯಾಕೆ? ದೇಶಾದ್ಯಂತ ಮಹಿಳೆಯರು ಉತ್ತರಕ್ಕಾಗಿ ಎದುರು ನೋಡುತ್ತಿದ್ದಾರೆ ಎಂದು ಹೇಳಿದೆ.

“ಇಂದು (ಮಾರ್ಚ್‌ 8) ಅಂತಾರಾಷ್ಟ್ರೀಯ ಮಹಿಳಾ ದಿನವಾಗಿದೆ. ಮಹಿಳೆಯರಿಗೆ ಶುಭಾಶಯ ಹೇಳುವುದನ್ನು ಮೀರಿ ಪ್ರಧಾನಿಯವರು ಏನನ್ನೂ ಮಾಡುತ್ತಾರೆ ಎಂದು ನಾವು ನಿರೀಕ್ಷಿಸುವುದಿಲ್ಲ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

“ಅದೇನೇ ಇದ್ದರೂ, ದೇಶಾದ್ಯಂತ ಮಹಿಳೆಯರು ಮೋದಿ ಅವರನ್ನು ಕೇಳುತ್ತಿರುವ ಕೆಲವು ಪ್ರಮುಖ ಪ್ರಶ್ನೆಗಳು ಇಲ್ಲಿವೆ: ಮಣಿಪುರದಲ್ಲಿ ಅಂತರ್ಯುದ್ಧ ನಡೆಯುತ್ತಿದೆ. ಅಲ್ಲಿನ ಮಹಿಳೆಯರು ಹೆಚ್ಚು ಹಿಂಸೆಗೆ ಒಳಗಾಗಿದ್ದಾರೆ. ಮಹಿಳೆಯರನ್ನು ಬೆತ್ತಲೆ ಮಾಡಿ, ಮೆರವಣಿಗೆ ಮಾಡುವ ವಿಡಿಯೋಗಳು ಹರಿದಾಡಿವೆ. ಆದರೆ, ಬಿಜೆಪಿಯೇ ಅಧಿಕಾರದಲ್ಲಿರುವ ಆ ರಾಜ್ಯಕ್ಕೆ ಪ್ರಧಾನಿ ಭೇಟಿ ನೀಡುವು ಬಗ್ಗೆ ಯಾಕೆ ತಲೆಕೆಡಿಸಿಕೊಂಡಿಲ್ಲ” ಎಂದು ಅವರು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

Advertisements

“ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಆ ಬಗ್ಗೆಯೂ ಪ್ರಧಾನಿ ಮೌನವಾಗಿದ್ದಾರೆ. ಈ ಪ್ರಕರಣದಲ್ಲಿ ಪ್ರಧಾನಿಯವರ ನಿಲುವು ಏನು? ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ‘ಮೋದಿ ಕಾ ಪರಿವಾರ್’ ಸದಸ್ಯ ಎಂದು ಮೋದಿ ಪರಿಗಣಿಸುತ್ತಾರೆಯೇ” ಎಂದು ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

“ಆಹಾರ ಮತ್ತು ಅಗತ್ಯ ವಸ್ತುಗಳ ಬೆಲೆಗಳಲ್ಲಿ ಕ್ಷಿಪ್ರ ಏರಿಕೆಯಾಗಿದೆ. ಈ ಬೆಲೆ ಏರಿಕೆಯ ಹೊರೆಯಿಂದ ಮನೆಗಳನ್ನು ರಕ್ಷಿಸುವ ಯೋಜನೆಯನ್ನು ಪ್ರಧಾನಿ ನೀಡುತ್ತಾರೆಯೇ?” ಎಂದಿದ್ದಾರೆ.

 

“‘ಅನ್ಯಾಯ ಕಾಲ’ದ ವಿಶಿಷ್ಟ ಲಕ್ಷಣವೆಂದರೆ ನಿರುದ್ಯೋಗದ ಬಿಕ್ಕಟ್ಟು. ವಿಶೇಷವಾಗಿ, ಉದ್ಯೋಗ ಹುಡುಕುವ ಮಹಿಳಾ ಉದ್ಯೋಗಾಕಾಂಕ್ಷಿಗಳು, ಉದ್ಯೋಗವನ್ನು ಹುಡುಕುವುದನ್ನೇ ಬಿಟ್ಟಿದ್ದಾರೆ. ಅವರು ನಿರುತ್ಸಾಹಗೊಂಡಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಗಿಂತ ಮೋದಿ ಅವಧಿಯಲ್ಲಿ ಕಾರ್ಮಿಕ ಶಕ್ತಿಯಲ್ಲಿ ಮಹಿಳೆಯರ ಸಂಖ್ಯೆ ಶೇ.20ರಷ್ಟು ಕಡಿಮೆಯಾಗಿದೆ. ಇದು ಆರ್ಥಿಕತೆಯ ದೀರ್ಘಾವಧಿಯ ಸಾಮರ್ಥ್ಯವನ್ನು ದುರ್ಬಲಗೊಳಿಸಬಹುದು. ಮಹಿಳೆಯರನ್ನು ಆರ್ಥಿಕ ಮುಖ್ಯವಾಹಿನಿಗೆ ಮರಳಿ ತರಲು ಪ್ರಧಾನಿ ಬಳಿ ಪರಿಹಾರವಿದೆಯೇ” ಎಂದು ಅವರು ಹೇಳಿದ್ದಾರೆ.

“2014ರಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಪ್ರಧಾನಿ ‘ಬೇಟಿ ಬಚಾವೋ – ಬೇಟಿ ಪಢಾವೋ’ ಅಭಿಯಾನ ಆರಂಭಿಸಿದ್ದರು. ಆದರೆ, ನಂತರ ಅಭಿಯಾನದ ಬಜೆಟ್‌ನಲ್ಲಿ ಸುಮಾರು 80%ಅನ್ನು ಜಾಹೀರಾತುಗಳಿಗೆ ವ್ಯಯಿಸಿದರು. ಹೆಣ್ಣು ಶಿಶುಹತ್ಯೆಯನ್ನು ನಿಲ್ಲಿಸಲು ಮತ್ತು ಮಹಿಳಾ ಶಿಕ್ಷಣವನ್ನು ಉತ್ತೇಜಿಸಲು ಪ್ರಧಾನ ಮಂತ್ರಿಗೆ ಹೆಚ್ಚು ಅರ್ಥಪೂರ್ಣವಾದ ದೃಷ್ಟಿ ಇದೆಯೇ? ಭಾರತದ ಮಹಿಳೆಯರು ಹಕ್ಕು ಮತ್ತು ಉತ್ತರಗಳಿಗೆ ಅರ್ಹರು. ‘ಬಿಜೆಪಿ ಹಟಾವೋ, ಬೇಟಿ ಬಚಾವೋ'” ಎಂದು ರಮೇಶ್ ಟ್ವೀಟ್ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X