ಹರಿಯಾಣ ಚುನಾವಣಾ ಫಲಿತಾಂಶ ಒಪ್ಪಲ್ಲ, ಇವಿಎಂ ‘ಮ್ಯಾನಿಪುಲೇಷನ್’ ಆಗಿದೆ: ಕಾಂಗ್ರೆಸ್

Date:

Advertisements

ಹರಿಯಾಣ ವಿಧಾನಸಭೆ ಚುನಾವಣಾ ಫಲಿತಾಂಶವನ್ನು ನಾವು ಒಪ್ಪಿಕೊಳ್ಳುವುದಿಲ್ಲ, ಕೆಲವೆಡೆ ಇವಿಎಂ ‘ಮ್ಯಾನಿಪುಲೇಷನ್’ ಆಗಿದೆ ಎಂದು ಕಾಂಗ್ರೆಸ್ ಹೇಳಿದೆ. ಜೊತೆಗೆ ಈ ಫಲಿತಾಂಶವು ‘ಆಘಾತ’ ಮತ್ತು ‘ಆಶ್ಚರ್ಯ’ ಉಂಟು ಮಾಡಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಸುಮಾರು 14 ಕ್ಷೇತ್ರಗಳಲ್ಲಿ ಎಣಿಕೆ ಪ್ರಕ್ರಿಯೆ ಮತ್ತು ಇವಿಎಂಗಳ (ವಿದ್ಯುನ್ಮಾನ ಮತಯಂತ್ರಗಳು) ಕಾರ್ಯನಿರ್ವಹಣೆಯಲ್ಲಿ ಗಂಭೀರವಾದ ವ್ಯತ್ಯಾಸಗಳನ್ನು ಕಾಂಗ್ರೆಸ್ ಬೊಟ್ಟು ಮಾಡಿದೆ. ಈ ವಿಚಾರದಲ್ಲಿ ಚುನಾವಣಾ ಆಯೋಗವನ್ನು ಸಂಪರ್ಕಿಸುವುದಾಗಿಯೂ ಹೇಳಿದೆ.

ಈ ಬಗ್ಗೆ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಹರಿಯಾಣ ಫಲಿತಾಂಶವು ‘ಮ್ಯಾನಿಪುಲೇಷನ್’ ಗೆಲುವಾಗಿದೆ ಮತ್ತು ಜನರ ಇಚ್ಛೆಯನ್ನು ಬುಡಮೇಲು ಮಾಡಿದೆ. ಇದು ಪಾರದರ್ಶಕ ಮತ್ತು ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳ ಸೋಲು ಎಂದು ಆರೋಪಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ʼಈ ದಿನʼ ವಿಶ್ಲೇಷಣೆ | ಹರಿಯಾಣ ಚುನಾವಣೆ ಕಾಂಗ್ರೆಸ್ ಕೈ ತಪ್ಪಿದ್ದೇಕೆ?

“ಹರಿಯಾಣದಲ್ಲಿ ಫಲಿತಾಂಶಗಳು ಸಂಪೂರ್ಣವಾಗಿ ಅನಿರೀಕ್ಷಿತವಾಗಿದೆ. ಇದು ನೆಲದ ವಾಸ್ತವಕ್ಕೆ ವಿರುದ್ಧವಾಗಿದೆ. ಹರಿಯಾಣದ ಜನರು ಬದಲಾವಣೆ ಮತ್ತು ಪರಿವರ್ತನೆಯ ಮನಸ್ಸು ಮಾಡಿದ್ದಾರೆ. ಇದು ಅದರ ವಿರುದ್ಧವಾಗಿದೆ. ಈ ಪರಿಸ್ಥಿತಿಯಲ್ಲಿ ಇಂದು ಪ್ರಕಟವಾಗಿರುವ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ರಮೇಶ್ ಹೇಳಿದರು.

“ಕನಿಷ್ಠ ಮೂರು ಜಿಲ್ಲೆಗಳಲ್ಲಿ ಎಣಿಕೆ ಪ್ರಕ್ರಿಯೆ ಮತ್ತು ಇವಿಎಂಗಳ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ಕಾಂಗ್ರೆಸ್ ಗಂಭೀರವಾದ ದೂರು ಸ್ವೀಕರಿಸಿದೆ. ಶೇಕಡ 99ರಷ್ಟು ಬ್ಯಾಟರಿ ಹೊಂದಿರುವ ಇವಿಎಂಗಳಲ್ಲಿ ಕಾಂಗ್ರೆಸ್‌ ಸೋಲುತ್ತಿದೆ ಎಂಬ ಫಲಿತಾಂಶ ತೋರಿಸಿದೆ. ಆದರೆ ಅದಕ್ಕಿಂತ ಕಡಿಮೆ ಬ್ಯಾಟರಿ ಇದ್ದ ಯಂತ್ರಗಳು ಕಾಂಗ್ರೆಸ್ ಗೆಲುವಿನತ್ತ ಮುಖ ಮಾಡಿದಂತೆ ತೋರಿಸಿದೆ” ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.

ಹರಿಯಾಣದ ಕೆಲವು ಭಾಗಗಳಲ್ಲಿ ಇವಿಎಂ ದುರ್ಬಳಕೆಯಾಗಿದೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಹೇಳಿದ್ದಾರೆ.

ಇನ್ನು ಮತ ಎಣಿಕೆ ಸಂದರ್ಭದಲ್ಲಿ ಕಾಂಗ್ರೆಸ್ ಚುನಾವಣಾ ಫಲಿತಾಂಶದ ಅಪ್‌ಡೇಟ್ ವಿಳಂಬವಾಗುತ್ತಿರುವ ಬಗ್ಗೆ ಪ್ರಶ್ನೆ ಮಾಡಿದ್ದರು. ಈ ಬಗ್ಗೆ ಎಕ್ಸ್‌ನಲ್ಲಿ ದೂರು ಪ್ರತಿಯನ್ನು ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರ ಜೈರಾಮ್ ರಮೇಶ್, “ಚುನಾವಣಾ ಆಯೋಗಕ್ಕೆ ನಾನು ಪತ್ರ ಬರೆದಿದ್ದೇನೆ. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಟ್ರೆಂಡ್‌ಗಳನ್ನು ಅಪ್‌ಡೇಟ್ ಮಾಡುವಲ್ಲಿ ವಿಳಂಬದ ಬಗ್ಗೆ ನಾನು ಪತ್ರ ಬರೆದಿದ್ದೇನೆ” ಎಂದು ತಿಳಿಸಿದ್ದರು. ಆದರೆ ಚುನಾವಣಾ ಆಯೋಗ ಮಾತ್ರ ಈ ಆರೋಪವನ್ನು ನಿರಾಕರಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X