ಸಿಂಗಾಪುರ | ವಿಶ್ವದ ಪ್ರಮುಖ ಗುಪ್ತಚರ ಸಂಸ್ಥೆಗಳ ಮುಖ್ಯಸ್ಥರ ರಹಸ್ಯ ಸಮಾವೇಶ ; ವರದಿ

Date:

  • ಸಿಂಗಾಪುರ ದೇಶದಲ್ಲಿ ಶಾಂಗ್ರಿ-ಲಾ ಭದ್ರತಾ ಸಂಸ್ಥೆಗಳ ಸಂವಾದ ಸಭೆ ನಂತರ ಸಮಾವೇಶ
  • ರಹಸ್ಯ ಸಮಾವೇಶದ ಬಗ್ಗೆ ಮಾಹಿತಿ ಇಲ್ಲ ಎಂದ ಅಮೆರಿಕ ರಾಯಭಾರ ಕಚೇರಿ

ಸಿಂಗಾಪುರ ದೇಶದಲ್ಲಿ ಭಾನುವಾರ (ಜೂನ್‌ 4) ಶಾಂಗ್ರಿ-ಲಾ ಭದ್ರತಾ ಸಂಸ್ಥೆಗಳ ಸಂವಾದ ಸಭೆಯ ನಂತರ ಪ್ರತ್ಯೇಕ ಸ್ಥಳದಲ್ಲಿ ವಿಶ್ವದ ಪ್ರಮುಖ ಗುಪ್ತಚರ ಸಂಸ್ಥೆಗಳ ಸುಮಾರು 20ಕ್ಕೂ ಹೆಚ್ಚು ಹಿರಿಯ ಅಧಿಕಾರಿಗಳು ರಹಸ್ಯ ಸಮಾವೇಶ ನಡೆಸಿದ್ದಾರೆ ಎಂದು ರಾಯಿಟರ್ಸ್‌ ಸುದ್ದಿಸಂಸ್ಥೆ ವರದಿ ಮಾಡಿದೆ.

ಇಂತಹ ರಹಸ್ಯ ಸಭೆಗಳನ್ನು ಸರ್ಕಾರ ಆಯೋಜಿಸಿದೆ. ಹಲವಾರು ವರ್ಷಗಳಿಂದ ಭದ್ರತಾ ಶೃಂಗಸಭೆಯ ಜೊತೆಗೆ ಪ್ರತ್ಯೇಕ ಸ್ಥಳದಲ್ಲಿ ಇಂತಹ ರಹಸ್ಯ ಸಮಾವೇಶ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆದರೆ ಈ ಹಿಂದೆ ರಹಸ್ಯ ಸಭೆಗಳು ವರದಿಯಾಗಿಲ್ಲ ಎಂದು ಹೇಳಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಮೆರಿಕ ದೇಶದ ಪರವಾಗಿ ಅಲ್ಲಿಯ ರಾಷ್ಟ್ರೀಯ ಗುಪ್ತಚರ ನಿರ್ದೇಶಕ ಅವ್ರಿಲ್ ಹೈನ್ಸ್ ಸಿಂಗಾಪುರ ದೇಶದಲ್ಲಿನ ಗುಪ್ತಚರ ಮುಖ್ಯಸ್ಥರ ರಹಸ್ಯ ಸಮಾವೇಶದಲ್ಲಿ ಭಾಗವಹಿಸಿದ್ದರು. ಉದ್ವಿಗ್ನತೆಯ ಹೊರತಾಗಿಯೂ ಚೀನಾದ ಗುಪ್ತಚರ ನಿರ್ದೇಶಕರು ಉಪಸ್ಥಿತರಿದ್ದರು.

ಸಂಶೋಧನೆ ಮತ್ತು ವಿಶ್ಲೇಷಣಾ ಘಟಕವಾದ ಭಾರತದ ಸಾಗರೋತ್ತರ ಗುಪ್ತಚರ ಸಂಗ್ರಹಣಾ ಸಂಸ್ಥೆಯ ಮುಖ್ಯಸ್ಥ ಸಮಂತ್ ಗೋಯೆಲ್ ಕೂಡ ಭಾಗವಹಿಸಿದ್ದರು ಎಂದು ಭಾರತೀಯ ಮಾಧ್ಯಮಗಳು ವರದಿ ಮಾಡಿವೆ.

ಸಿಂಗಾಪುರ ದೇಶದ ಅಮೆರಿಕ ರಾಯಭಾರ ಕಚೇರಿಯು ಗುಪ್ತಚರ ಅಧಿಕಾರಿಗಳ ರಹಸ್ಯ ಭೇಟಿಯ ಬಗ್ಗೆ ಯಾವುದೇ ಮಾಹಿತಿ ಹೊಂದಿಲ್ಲ ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ರೈಲು ದುರಂತ : ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಒಡಿಶಾ ಸರ್ಕಾರ

ಈ ಬಗ್ಗೆ ಚೀನಾ ಮತ್ತು ಭಾರತ ಸರ್ಕಾರಗಳು ಸದ್ಯ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

“ಗುಪ್ತಚರ ಸಮಾವೇಶವು ಅಂತಾರಾಷ್ಟ್ರೀಯ ಕಾರ್ಯಸೂಚಿಯ ಒಂದು ಪ್ರಮುಖ ಭಾಗವಾಗಿದೆ” ಎಂದು ಗುಪ್ತಚರ ಸಭೆಯ ಆಯೋಜನೆಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.

“ರಹಸ್ಯ ಸಮಾವೇಶದಲ್ಲಿ ಗುಪ್ತಚರ ಸಂಸ್ಥೆ ಅಧಿಕಾರಿಗಳು ಕೆಲವು ಸಂಕೇತಗಳ ಮೂಲಕ ಚರ್ಚೆ ನಡೆಸಿದರು. ಇದು ಔಪಚಾರಿಕ ಮತ್ತು ಮುಕ್ತ ರಾಜತಾಂತ್ರಿಕತೆ ಕಠಿಣವಾಗುವ ಸಂದರ್ಭದಲ್ಲಿ ಅನುಕೂಲವಾಗುತ್ತದೆ” ಎಂದು ಅಧಿಕಾರಿಯೊಬ್ಬರು ಹೇಳಿದರು.

ಯಾವ ವಿಷಯದ ಕುರಿತು ಚರ್ಚೆ ನಡೆಸಲಾಯಿತು ಎಂದು ಬಹಿರಂಗಪಡಿಸಲು ಅಧಿಕಾರಿ ನಿರಾಕರಿಸಿದರು ಎಂದು ವರದಿಯಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಡ ಸೇರಿ 5 ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪ್ರೊಪಗ್ಯಾಂಡಗಳ ವಿರುದ್ಧ ಟೊಂಕಕಟ್ಟಿ ನಿಂತಿರುವ ದೇಶದ...

ಪಶ್ಚಿಮ ಬಂಗಾಳ| ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ; ಪೂರ್ವ ಯೋಜಿತ ಎಂದ ಮಮತಾ

ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪೋರ್ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಮೇಲೆ ಕಲ್ಲು...

ಸಿದ್ದರಾಮಯ್ಯ ಸರ್ಕಾರ ನೋಡಿದ್ರೆ ನಾವೀಗ ಪಾಕಿಸ್ತಾನದಲ್ಲಿ ಇದ್ದೀವಾ ಎಂಬ ಅನುಮಾನ ಬರುತ್ತಿದೆ: ಆರ್‌ ಅಶೋಕ್‌

ಬೆಂಗಳೂರಿನಲ್ಲಿ ಜೈಶ್ರೀರಾಮ್‌ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ...

ಭ್ರಷ್ಟ ಸುಧಾಕರ್ ಸೋಲಿಸಿದರೆ ನಿಮ್ಮ ಮತಕ್ಕೆ ಹೆಚ್ಚು ಗೌರವ: ಸಿಎಂ ಸಿದ್ದರಾಮಯ್ಯ

ನೀವೇ ತಿರಸ್ಕರಿಸಿದ ಎನ್‌ಡಿಎ ಅಭ್ಯರ್ಥಿ ಸುಧಾಕರ್ ಮತ್ತೆ ಪ್ರಭಾವ ಬಳಸಿ ಲೋಕಸಭೆಗೆ...