ಇಮ್ರಾನ್‌ ಖಾನ್ ಬಂಧನಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ; ಗಂಟೆಯೊಳಗೆ ಮಾಜಿ ಪ್ರಧಾನಿ ಹಾಜರುಪಡಿಸಿದ ಎನ್‌ಎಬಿ

Date:

  • ಬಂಧನಕ್ಕೊಳಪಡಿಸಿದ್ದು ನ್ಯಾಯಾಂಗ ನಿಂದನೆ ಎಂದ ಪಾಕ್‌ನ ಸುಪ್ರೀಂ ಕೋರ್ಟ್
  • ಇಸ್ಲಾಮಾಬಾದ್ ಹೈಕೋರ್ಟ್‌ನ ಆವರಣದಿಂದ ಬಂಧಿಸಿದ್ದ ಎನ್‌ಎಬಿ

ಇಮ್ರಾನ್‌ ಖಾನ್‌ ಅವರನ್ನು ಅಕ್ರಮ ಬಂಧನಕ್ಕೊಳಪಡಿಸಿ ನ್ಯಾಯಾಂಗ ನಿಂದನೆ ಎಸಗಿದ ರಾಷ್ಟ್ರೀಯ ಉತ್ತರದಾಯಿತ್ವ ಬ್ಯೂರೋಗೆ (ಎನ್‌ಎಬಿ)  ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಬೆನ್ನಲ್ಲೆ ಒಂದು ಗಂಟೆಯೊಳಗೆ ಬಿಗಿ ಭದ್ರತೆಯಲ್ಲಿ ಮಾಜಿ ಪ್ರಧಾನಿಯವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಭ್ರಷ್ಟಾಚಾರ ನಿಗ್ರಹ ಸಂಸ್ಥೆಯು ನ್ಯಾಯಾಲಯದ ರಿಜಿಸ್ಟ್ರಾರ್‌ನ ಅನುಮತಿಯಿಲ್ಲದೆ ನ್ಯಾಯಾಲಯದ ಆವರಣಕ್ಕೆ ಪ್ರವೇಶಿಸಿ ಬಂಧಿಸಿದ ನಂತರ ಕೋರ್ಟ್‌ಗೆ ಇಮ್ರಾನ್‌ ಖಾನ್‌ ಮನವಿ ಸಲ್ಲಿಸಿದ್ದರು. ಮನವಿಯನ್ನು ಪುರಸ್ಕರಿಸಿದ ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ ಉಮರ್ ಅತಾ ಬಂಡಿಯಾಲ್, ನ್ಯಾಯಮೂರ್ತಿ ಮುಹಮ್ಮದ್ ಅಲಿ ಮಜರ್ ಮತ್ತು ನ್ಯಾಯಮೂರ್ತಿ ಅಥರ್ ಮಿನಲ್ಲಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಇಮ್ರಾನ್‌ ಖಾನ್‌ ಅವರನ್ನು ಒಂದು ಗಂಟೆಯೊಳಗೆ ಕೋರ್ಟ್‌ಗೆ ಹಾಜರುಪಡಿಸಿ ಎಂದು ನಿರ್ದೇಶನ ನೀಡಿತ್ತು.

ಲಾಹೋರ್‌ಗೆ ಆಗಮಿಸಿದ್ದ 70 ವರ್ಷದ ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್ ಹೈಕೋರ್ಟ್‌ನ ಆವರಣದಿಂದ ಬಂಧಿಸಿದ ಕ್ರಮ ಸರಿಯಿಲ್ಲ ಎಂದು ಪೀಠವು ವಿಚಾರಣೆಯ ಸಮಯದಲ್ಲಿ ಸಿಟ್ಟು ಹೊರಹಾಕಿತ್ತು. 90 ಮಂದಿ ನ್ಯಾಯಾಲಯದ ಆವರಣವನ್ನು ಪ್ರವೇಶಿಸಿದರೆ ಅದರ ಘನತೆ ಏನಾಗಬೇಕು, ಯಾವುದೇ ವ್ಯಕ್ತಿಯನ್ನು ನ್ಯಾಯಾಲಯದ ಆವರಣದಿಂದ ಹೇಗೆ ಬಂಧಿಸಲು ಸಾಧ್ಯ ಎಂದು ಮುಖ್ಯ ನ್ಯಾಯಾಧೀಶರು ಕೇಳಿದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಇಮ್ರಾನ್‌ ಖಾನ್ ಬಂಧನ; ಪಾಕಿಸ್ತಾನದಾದ್ಯಂತ ಭುಗಿಲೆದ್ದ ಆಕ್ರೋಶ

ಈ ಹಿಂದೆ, ನ್ಯಾಯಾಲಯದ ಒಳಗೆ ವಿಧ್ವಂಸಕ ಕೃತ್ಯಕ್ಕಾಗಿ ವಕೀಲರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ, ವ್ಯಕ್ತಿಯೊಬ್ಬರು ನ್ಯಾಯಾಲಯಕ್ಕೆ ಶರಣಾಗಿದ್ದರೆ, ಅವರನ್ನು ಬಂಧಿಸುವುದರ ಅರ್ಥವೇನು ಎಂದು ಕೇಳಿದ್ದು, ರಾಷ್ಟ್ರೀಯ ಉತ್ತರದಾಯಿತ್ವ ಬ್ಯೂರೋ ನ್ಯಾಯಾಂಗ ನಿಂದನೆ ಎಸಗಿದೆ ಎಂದು ಹೇಳಿದೆ. 

ಬಂಧನಕ್ಕೆ ಮುನ್ನ ನ್ಯಾಯಾಲಯದ ರಿಜಿಸ್ಟ್ರಾರ್‌ನಿಂದ ಅನುಮತಿ ಪಡೆಯಬೇಕಿತ್ತು. ನ್ಯಾಯಾಲಯದ ಸಿಬ್ಬಂದಿಯೂ ನಿಂದನೆಗೆ ಒಳಗಾಗಿದ್ದಾರೆ. ನ್ಯಾಯಾಲಯವು ಮತ್ತೆ ಸೇರುವ ಪಾಕಿಸ್ತಾನ ಸ್ಥಳೀಯ ಕಾಲಮಾನದೊಳಗೆ ಹಾಜರುಪಡಿಸುವಂತೆ ನಿರ್ದೇಶಿಸಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ: ಓವೈಸಿ

ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದ ಅಕೋಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ವಂಚಿತ್ ಬಹುಜನ ಅಘಾಡಿ...

ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

"ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ...

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...