ದುಬೈ | ಭಾರತ ಮೂಲದ ಅಪಘಾತದ ಗಾಯಾಳುವಿಗೆ ₹11.5 ಕೋಟಿ ಪರಿಹಾರ

Date:

Advertisements

ಟ್ರಾಫಿಕ್‌ ನಿಯಮಗಳು ಕಟ್ಟುನಿಟ್ಟಾಗಿರುವ ದುಬೈನಲ್ಲಿ ನಡೆದ ಅಪಘಾತ ಒಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಮೂಲದ 20 ವರ್ಷದ ವಿದ್ಯಾರ್ಥಿಗೆ ₹11.5 ಕೋಟಿ ಪರಿಹಾರ ದೊರೆತಿದೆ.

ಹೈದರಾಬಾದ್‌ ಮೂಲದ ಇಂಜಿನಿಯರಿಂಗ್‌ ವಿದ್ಯಾರ್ಥಿ ಮುಹಮ್ಮದ್‌ ಬೇಗ್ ಮಿರ್ಝಾಗೆ ದುಬೈನ ಸುಪ್ರೀಂ ಕೋರ್ಟ್‌  5 ಮಿಲಿಯನ್ ದಿರ್ಹಮ್‌ ಮೊತ್ತ ಪರಿಹಾರವನ್ನಾಗಿ ನೀಡಲು ಆದೇಶಿಸಿದೆ.

ಭಾರತೀಯ ಮೂಲದ  ವ್ಯಕ್ತಿಯೊಬ್ಬರು ಯುಎಇನಲ್ಲಿ ಪಡೆಯುತ್ತಿರುವ ಅತಿಹೆಚ್ಚಿನ ಪರಿಹಾರದ ಮೊತ್ತ ಇದಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

Advertisements

2019ರ ಜುಲೈ 6ರಂದು ಒಮಾನ್‌ನಿಂದ ದುಬೈ ತೆರಳುತ್ತಿದ್ದ ಬಸ್‌, ದುಬೈನ ರಾಶಿದೀಯ ಮೆಟ್ರೋ ನಿಲ್ದಾಣ ಸಮೀಪದ ಓವರ್‌ಹೆಡ್ ಹೈಟ್ ಬ್ಯಾರಿಯರ್‌ಗೆ  ಡಿಕ್ಕಿ ಹೊಡೆದಿತ್ತು. ಭೀಕರ ಅಪಘಾತದಲ್ಲಿ 12 ಭಾರತೀಯರು ಸೇರಿದಂತೆ ಒಟ್ಟು 17 ಜನರು ಮೃತಪಟ್ಟಿದ್ದರು.

ಘಟನೆಯಲ್ಲಿ ಮುಹಮ್ಮದ್‌ ಬೇಗ್ ಮಿರ್ಝಾ ತೀವ್ರವಾಗಿ ಗಾಯಗೊಂಡಿದ್ದರು. ಒಮಾನ್ ಮೂಲದ ಚಾಲಕನಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.

DUABI ACCIDENT

ಈ ಸುದ್ದಿ ಓದಿದ್ದೀರಾ?: ನ್ಯಾಟೊ ಸೇರಿದ ಫಿನ್‌ಲ್ಯಾಂಡ್; ರಷ್ಯಾ-ಉಕ್ರೇನ್‌ ಯುದ್ಧದ ಮೇಲೆ ಪ್ರಭಾವ ಸಾಧ್ಯತೆ

ಯುಎಇ ಪ್ರಾಥಮಿಕ ರಾಜಿ ನ್ಯಾಯಾಲಯವು ಆರಂಭದಲ್ಲಿ ಮಿರ್ಝಾ ಅವರಿಗೆ ₹2.25 ಕೋಟಿ ಪರಿಹಾರ ನೀಡಲು ವಿಮಾ ಪ್ರಾಧಿಕಾರಕ್ಕೆ ಆದೇಶಿಸಿತ್ತು. ಆದರೆ ಇದರ ವಿರುದ್ಧ ಮಿರ್ಝಾ ಕುಟುಂಬವು ಮೇಲ್ಮನವಿ ನ್ಯಾಯಾಲಯವನ್ನು ಸಮೀಪಿಸಿತ್ತು.

ʻಅಪಘಾತದಿಂದಾಗಿ ಮಿರ್ಝಾ ಇನ್ನೂ ಸಹ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಅವರ ಶಿಕ್ಷಣವು ಅರ್ಧದಲ್ಲೇ ಮೊಟಕುಗೊಂಡಿದೆʼ ಎಂದು ಮಿರ್ಝಾ ಪರ ವಕೀಲರು ನ್ಯಾಯಲಯದಲ್ಲಿ ವಾದ ಮಂಡಿಸಿದ್ದರು. ಇದನ್ನು ನ್ಯಾಯಾಧೀಶರು ಪುರಸ್ಕರಿಸಿ ಭಾರಿ ಮೊತ್ತದ ಪರಿಹಾರ ನೀಡಲು ಆದೇಶಿಸಿದ್ದಾರೆ.  

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X