ಯಡಿಯೂರಪ್ಪ ಲಿಂಗಾಯತರೋ, ಹಿಂದುವೋ; ಆಯನೂರು ಮಂಜುನಾಥ್ ಪ್ರಶ್ನೆ

Date:

Advertisements

ಜಾತಿಗಣತಿ ವೇಳೆ ಅರ್ಜಿಯ ಧರ್ಮದ ಕಾಲಂನಲ್ಲಿ ‘ವೀರಶೈವ-ಲಿಂಗಾಯತ’ ಎಂದೂ, ಜಾತಿ ಕಾಲಂನಲ್ಲಿ ‘ಒಳಪಂಗಡಗಳ’ ಹೆಸರನ್ನೂ ಉಲ್ಲೇಖಿಸಬೇಕು ಎಂದು ವೀರಶೈವ-ಲಿಂಗಾಯತ ಮಹಾಸಭಾ ತನ್ನ ಅಧಿವೇಶನದಲ್ಲಿ ನಿರ್ಣಯ ಕೈಗೊಂಡಿದೆ. ಈ ನಿರ್ಣಯದ ಬಗ್ಗೆ ತಮ್ಮ ಬದ್ದತೆ ಏನೆಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವೀರಶೈವ-ಲಿಂಗಾಯತ ಮುದಾಯದ ಬಿಜೆಪಿ ನಾಯಕರು ಸ್ಪಷ್ಟಪಡಿಸಬೇಕು. ಅವರು ಧರ್ಮದ ಕಾಲಂನಲ್ಲಿ ’ವೀರಶೈವ-ಲಿಂಗಾಯತ’ ಎಂದು ಬರೆಸುತ್ತೀರೋ ಅಥವಾ ’ಹಿಂದು’ ಎಂದು ಬರೆಸುತ್ತಿರೋ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಒತ್ತಾಯಿಸಿದ್ದಾರೆ.

ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮಂಜುನಾಥ್, “ದಾವಣಗೆರೆಯಲ್ಲಿ ನಡೆದ ವೀರಶೈವ-ಲಿಂಗಾಯತ ಮಹಾಸಭಾದ ಅಧಿವೇಶನದಲ್ಲಿ ವೀರಶೈವ ಲಿಂಗಾಯತ ಧರ್ಮ ಮತ್ತು ಒಳಪಂಗಡಗಳ ಜಾತಿ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ಅದರಲ್ಲಿ ಯಡಿಯೂರಪ್ಪ ಅವರ ಪಾತ್ರವೂ ಇದೆ. ಆದರೆ, ಅಧಿವೇಶನದಲ್ಲಿ ಮಾತನಾಡಿದ ಯಡಿಯೂರಪ್ಪ ನಿರ್ಣಯದ ಬಗ್ಗೆ ತಮ್ಮ ಬದ್ದತೆಯನ್ನು ಗಟ್ಟಿಯಾಗಿ ಹೇಳುವಲ್ಲಿ ತಡವರಿಸಿದ್ದಾರೆ. ಅಲ್ಲದೆ, ಅವರು ಒಂದೆಡೆ ವೀರಶೈವ ಲಿಂಗಾಯತ ಧರ್ಮವೆಂದು ಹೇಳಿಕೊಳ್ಳುತ್ತಾರೆ. ಬಿಜೆಪಿ ಸಮಾವೇಶಗಳಲ್ಲಿ ನಾವೆಲ್ಲ ಹಿಂದು ಎಂದು ಹೇಳುತ್ತಾರೆ. ಅವರ ದ್ವಂದ್ವ ಹೇಳಿಕೆಗಳು ಜನರಲ್ಲಿ ಗೊಂದಲ ಸೃಷ್ಟಿಸುತ್ತಿವೆ. ಅವರು ತಾವು ಯಾವ ಧರ್ಮಕ್ಕೆ ಸೇರಿದವರು ಎಂಬುದನ್ನು ಸ್ಪಷ್ಟವಾಗಿ ಹೇಳಬೇಕು” ಎಂದು ಆಗ್ರಹಿಸಿದ್ದಾರೆ.

“ವೀರಶೈವ ಲಿಂಗಾಯತರು ಮತ್ತು ಹಿಂದುಗಳನ್ನು ದ್ವಂದ್ವಕ್ಕೆ ಸಿಲುಕಿಸುವ ಕೆಲಸವನ್ನು ಯಡಿಯೂರಪ್ಪ ಮತ್ತು ಬಿಜೆಪಿಯ ಲಿಂಗಾಯತ ನಾಯಕರು ಮಾಡಬಾರದು. ಧರ್ಮದ ಕಾಲಂನಲ್ಲಿ ’ವೀರಶೈವ-ಲಿಂಗಾಯತ’ ಎಂದು ಬರೆಯಿಸುವ ಬಗ್ಗೆ ವೀರಶೈವ -ಲಿಂಗಾಯತ ಅಧಿವೇಶನದಲ್ಲಿ ಕೈಗೊಂಡ ನಿರ್ಣಯಕ್ಕೆ ಅವರು ಬದ್ಧರಾಗಿದ್ದಾರಾ ಎಂಬುದನ್ನು ಹೇಳಬೇಕು” ಎಂದು ಹೇಳಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X