ರಾಮಮಂದಿರ ಉದ್ಘಾಟನೆ ಸಮಾರಂಭಕ್ಕೆ ತೆರಳುವುದಿಲ್ಲ: ಯಡಿಯೂರಪ್ಪ

Date:

Advertisements

ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮಮಂದಿರ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುವುದಿಲ್ಲ. ಉದ್ಘಾಟನೆಯಾದ ಒಂದು ತಿಂಗಳೊಳಗೆ ಅಯೋಧ್ಯೆಗೆ ತೆರಳಿ, ದರ್ಶನ ಮಾಡುತ್ತೇನೆ” ಎಂದು ಹೇಳಿದ್ದಾರೆ.

“ದೇಶಾದ್ಯಂತ ರಾಮ ಪ್ರಾಣ ಪ್ರತಿಷ್ಠಾಪನೆ ವಿಚಾರ ಚರ್ಚೆಯಾಗುತ್ತಿದೆ. ಸಮಾರಂಭ ಯಾವುದೇ ಅಡ್ಡಿಯಿಲ್ಲದೆ ಅದ್ದೂರಿಯಾಗಿ ನಡೆಯುವ ವಿಶ್ವಾಸವಿದೆ” ಎಂದು ಹೇಳಿದ್ದಾರೆ.

Advertisements

“ಪ್ರಧಾನಿ ಮೋದಿ ಅವರು ಎರಡು ದಿನ ಮೊದಲೇ ಅಯೋಧ್ಯೆಗೆ ತೆರಳಲಿದ್ದಾರೆ. ಅವರು ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ” ಎಂದು ತಿಳಿಸಿದ್ದಾರೆ.

ಈ ನಡುವೆ, ಕುಟುಂಬ ಸಮೇತರಾಗಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗುವುದಾಗಿ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X