‘ಮೋದಿ ಮತ್ತೆ ಪ್ರಧಾನಿಯಾದರೆ ಪಿಒಕೆ 6 ತಿಂಗಳಲ್ಲಿ ಭಾರತದ ತೆಕ್ಕೆಗೆ’ ಎಂದಿದ್ದ ಯೋಗಿ; ಕಾಲೆಳೆದ ಟ್ರೋಲಿಗರು

Date:

Advertisements

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾದ ಆರು ತಿಂಗಳಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಭಾರತದ ಭಾಗವಾಗುವುದು ಎಂದು ಹೇಳಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದೀಗ ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹಾಗೆಯೇ ನೆಟ್ಟಿಗರ ಅಪಹಾಸ್ಯಕ್ಕೂ ಯೋಗಿ ವಸ್ತು ವಿಷಯವಾಗಿದ್ದಾರೆ.

ಇದೇ ವರ್ಷದ ಮೇ 18ರಂದು ಮಹಾರಾಷ್ಟ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಲೋಕಸಭೆ ಚುನಾವಣೆ ಪ್ರಚಾರವನ್ನು ನಡೆಸಿದ್ದ ಯೋಗಿ ಆದಿತ್ಯನಾಥ್, “ಮೋದಿ ಪ್ರಧಾನಿಯಾದ ಆರು ತಿಂಗಳಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಭಾಗವಾಗಲಿದೆ” ಎಂದು ಹೇಳಿದ್ದರು.

ಯೋಗಿ ಈ ಭಾಷಣ ಮಾಡಿ ಇಂದಿಗೆ ಆರು ತಿಂಗಳುಗಳಿದ್ದು, ನೆಟ್ಟಿಗರು “ಪಿಒಕೆ ಭಾರತದ ಭಾಗವಾಗುವುದು ಯಾವಾಗ” ಎಂದು ಆದಿತ್ಯನಾಥ್ ಅವರನ್ನು ಪ್ರಶ್ನಿಸಿ, ಅವರ ಕಾಲೆಳೆದಿದ್ದಾರೆ.

Advertisements

ಇದನ್ನು ಓದಿದ್ದೀರಾ? ಬಾಬಾ ಸಿದ್ದೀಕಿಯಂತೆ ಕೊಲ್ಲುತ್ತೇವೆ; ಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ!

ಟ್ರೋಲಿಗರು, ನೆಟ್ಟಿಗರ ಗೇಲಿ

ಈಗಾಗಲೇ ಹಲವು ಬಾರಿ ಸುಳ್ಳು ಭರವಸೆಗಳ ಮೂಲಕ ಟ್ರೋಲ್‌ಗೆ ಗುರಿಯಾಗಿರುವ ಹಿರಿಯ ಬಿಜೆಪಿ ನಾಯಕ ಆದಿತ್ಯನಾಥ್ ಸದ್ಯ ಪಾಕ್ ಆಕ್ರಮಿತ ಕಾಶ್ಮೀರ ವಿಚಾರದಲ್ಲಿ ನೆಟ್ಟಿಗರಿಗೆ ಆಹಾರವಾಗಿದ್ದಾರೆ.

“ಇಂದು ಸಂಜೆಯೊಳಗೆ ಭಾರತದ ಹೊಸ ನಕ್ಷೆ ತಯಾರಾಗಲಿದೆ. ಆ ನಕ್ಷೆಯಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಭಾರತದ ಭಾಗವಾಗಲಿದೆ. ರೈಲ್ವೆ ಸಚಿವರು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ರೈಲು ಕೂಡಾ ಆರಂಭಿಸಲಿದ್ದಾರೆ” ಎಂದು ನೆಟ್ಟಿಗರೊಬ್ಬರು ವ್ಯಂಗ್ಯವಾಡಿದ್ದಾರೆ. ಇನ್ನೋರ್ವ ನೆಟ್ಟಿಗರು “ಯೋಗಿ ಗಡುವು ಈಗಾಗಲೇ ಮುಕ್ತಾಯವಾಗಿದೆ. ತನ್ನ ಈ ಸುಳ್ಳು ಹೇಳಿಕೆಗೆ ರಾಜೀನಾಮೆ ನೀಡಲಿ” ಎಂದು ಆಗ್ರಹಿಸಿದ್ದಾರೆ.

“ಯೋಗಿ ಆದಿತ್ಯನಾಥ್ ಅವರಿಗೆ ಇನ್ನು ಒಂಬತ್ತು ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಆದರೆ ಅವರು ಚುನಾವಣಾ ಪ್ರಚಾರದಲ್ಲಿಯೇ ಬ್ಯುಜಿಯಾಗಿದ್ದಾರೆ” ಎಂದು ನೆಟ್ಟಿಗರೊಬ್ಬರು ಪೋಸ್ಟ್ ಒಂದಕ್ಕೆ ಕಾಮೆಂಟ್‌ ಮಾಡಿದ್ದಾರೆ. ಇನ್ನೂ ಕೆಲವು ನೆಟ್ಟಿಗಳು “ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಪಾಲಾಗುವುದು ಯಾವಾಗ ಎಂದು ಯೋಗಿ ಅವರನ್ನೇ ಕೇಳುವ” ಎಂದು ಯೋಗಿ ಅಧಿಕೃತ ಎಕ್ಸ್ ಖಾತೆಗೆ ಟ್ಯಾಗ್ ಮಾಡಿದ್ದಾರೆ.

“ಜನರು ಇದೇ ಮೊದಲ ಬಾರಿಗೆ ಮೋಸ ಹೋಗುತ್ತಿರುವುದಾ? ಈ ಹಿಂದೆ ಮೋದಿ ಪ್ರಧಾನಿಯಾದರೆ ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ ಜಮೆ ಮಾಡಲಾಗುವುದು ಎಂದು ಹೇಳಿದ್ದರು. ಈಗ ಪಿಒಕೆ ಭಾರತದ ಭಾಗವಾಗಲಿದೆ ಎಂದು ಹೇಳಿಕೊಂಡಿದ್ದಾರೆ. ಮೋಸಕ್ಕೆ ಒಳಗಾಗುತ್ತಿರುವುದು ಜನರ ತಪ್ಪು” ಎಂದು ಜಿಮ್ಮಿ ಎಂಬ ನೆಟ್ಟಿಗರೊಬ್ಬರು ಅಭಿಪ್ರಾಯಿಸಿದ್ದಾರೆ.

ಕಾಮೆಂಟ್ 1

ಈ ನಡುವೆ ಕೆಲವು ಬಿಜೆಪಿ, ಯೋಗಿ ಬೆಂಬಲಿಗರು “ಯೋಗಿ ಹೇಳಿರುವುದು ಮೋದಿ ಪ್ರಧಾನಿಯಾದ ಆರು ತಿಂಗಳಲ್ಲಿ ಪಾಕ್ ಭಾರತದ ಭಾಗವಾಗಲಿದೆ ಎಂದು. ಹಾಗಾಗಿ ನೀವು ಮೇ 18ರ ಬದಲಾಗಿ ಜೂನ್ 4 ಅನ್ನು ಗಡುವಿನ ಆರಂಭದ ದಿನಾಂಕವಾಗಿ ಪರಿಗಣಿಸಿ. ಇನ್ನೂ ಕೂಡಾ 20ಕ್ಕೂ ಅಧಿಕ ದಿನಗಳಿವೆ. ಕಾದು ನೋಡಿ” ಎಂದು ಹೇಳಿಕೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X