ಜೀವ ಉಳಿಸಲು ವೈದ್ಯರೇ ಆಗಬೇಕಿಲ್ಲ; ರಕ್ತದಾನದ ಮೂಲಕವೂ ಜೀವ ಉಳಿಸಬಹುದು: ಸಚಿವ ಗುಂಡೂರಾವ್

Date:

Advertisements

ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಬೆಂಗಳೂರಿನಲ್ಲಿ‌ ಇಂದು ವಿಧಾನ ಸೌಧದಿಂದ ಕಂಠೀರವ ಕ್ರೀಡಾಂಗಣದವರೆಗೆ ರಕ್ತದಾನದ ಕುರಿತು ಜಾಗೃತಿ ಜಾಥಾ ನಡೆಸಲಾಯಿತು. ಜಾಥಾಗೆ ಚಾಲನೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಕ್ತದಾನಿಗಳೊಂದಿಗೆ ಹೆಜ್ಜೆ ಹಾಕಿದರು.

ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಪ್ರತಿ ವರ್ಷ ಜೂನ್ 14ನೇ ರಂದು ಜಗತ್ತಿನಾದ್ಯಂತ 2004 ರಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿವರ್ಷದಂತೆ ಈ ವರ್ಷವೂ ಸಹ ವಿಶ್ವರಕ್ತದಾನಿಗಳ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಜಾಥಾ ಮೂಲಕ ಆಚರಿಸಿ, ಸಾರ್ವಜನಿಕರಲ್ಲಿ ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಯಿತು. ರಕ್ತವನ್ನು ಸಕಾಲದಲ್ಲಿ ಪೂರೈಕೆ ಮಾಡುವ ಮುಖಾಂತರ ಜೀವಗಳನ್ನು ಉಳಿಸಬಹುದು.‌ ಈ ನಿಟ್ಟಿನಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ದಾನಿಗಳನ್ನು ಗೌರವಿಸಿ ಇತರರನ್ನು ರಕ್ತದಾನ ಮಾಡುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಇಂದು ಆರೋಗ್ಯ ಇಲಾಖೆ ಹಾಗೂ KSAPS ಸಂಸ್ಥೆಯಿಂದ ಜಾಥಾ ಹಮ್ಮಿಕೊಳ್ಳಲಾಗಿತ್ತು.‌

“20 ವರ್ಷಗಳ ರಕ್ತದಾನದ ಸಂಭ್ರಮಾಚರಣೆ ಸಂದರ್ಭದಲ್ಲಿ ಧನ್ಯವಾದ ರಕ್ತದಾನಿಗಳೇ, “Your Gift of Life is Priceless” ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ರಕ್ತದಾನಿಗಳ ದಿನಾಚರಣೆಯನ್ನ ಆಚರಿಸಲಾಯಿತು.

Advertisements

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, “ಒಬ್ಬರ ಜೀವ ಉಳಿಸಲು ವೈದ್ಯರೇ ಆಗಬೇಕಿಲ್ಲ. ರಕ್ತದಾನ ಮಾಡುವ ಮೂಲಕವು ಒಬ್ಬರ ಜೀವ ಉಳಿಸಬಹುದು. ರಕ್ತದಾನ ಮಾಡುವ ಮೂಲಕ ಹಲವರ ಜೀವನದಲ್ಲಿ ಬದಲಾವಣೆ ತರಬಹುದು” ಎಂದು ಹೇಳಿದರು.

“ದೇಶದಲ್ಲಿ ರಕ್ತಕ್ಕಿರುವ ಬೇಡಿಕೆಯನ್ನ ಗಮನದಲ್ಲಿಟ್ಟುಕೊಂಡು ರಕ್ತದಾನಕ್ಕೆ ನಾವೆಲ್ಲರೂ ಮುಂದಾಗಬೇಕಿದೆ. ಹೆಚ್ಚು ರಕ್ತದಾನದ ಅಗತ್ಯತೆ ಇದೆ” ಎಂದು ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು.

ಇದನ್ನು ಓದಿದ್ದೀರಾ? ಪೋಕ್ಸೋ ಪ್ರಕರಣ | ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್‌ ಮಧ್ಯಂತರ ಆದೇಶ

ರಕ್ತದಾನದ ಕುರಿತು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವತ್ತ ಆರೋಗ್ಯ ಇಲಾಖೆ ಹಾಗೂ ಕರ್ನಾಟಕ ಸ್ಟೇಟ್ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಅವರು ಹಮ್ಮಿಕೊಂಡಿದ್ದ ಈ ರೀತಿಯ ಜಾಥಾ ಕಾರ್ಯಕ್ರಮಗಳು ಉತ್ತಮವಾದವು ಎಂದರು. ಜಾಥಾದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಸ್ವಯಂ ಸೇವಕರು ರಕ್ತದಾನ ಮಾಡುವ ಕುರಿತು ಪ್ರತಿಜ್ಞೆ ಸ್ವೀಕರಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X