ರಾಜ್ಯಸಭಾ ಸ್ಥಾನಕ್ಕೆ ವೈಎಸ್‌ಆರ್‌ ಕಾಂಗ್ರೆಸ್‌ ನಾಯಕ ವಿಜಯಸಾಯಿ ರೆಡ್ಡಿ ರಾಜೀನಾಮೆ

Date:

Advertisements

ರಾಜ್ಯಸಭಾ ಸದಸ್ಯರಾಗಿದ್ದ ಆಂಧ್ರಪ್ರದೇಶದ ವೈಎಸ್‌ಆರ್‌ಸಿಪಿ ನಾಯಕ ವಿ ವಿಜಯಸಾಯಿ ರೆಡ್ಡಿ ಅವರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣದಿಂದಾಗಿ ರಾಜೀನಾಮೆ ನೀಡಿರುವುದಾಗಿ ಹೇಳಿಕೊಂಡಿದ್ದಾರೆ.

ಶನಿವಾರ ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿದ ವಿಜಯಸಾಯಿ ರೆಡ್ಡಿ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ರಾಜೀನಾಮೆಯನ್ನು ಧನಕರ್ ಅಂಗೀಕರಿಸಿದ್ದಾರೆ.

“ನಾನು ರಾಜಕೀಯ ತೊರೆಯುತ್ತಿದ್ದೇನೆ. ಹೀಗಾಗಿ, ರಾಜೀನಾಮೆ ನೀಡಿದ್ದೇನೆ. ಬೇರೆ ಯಾವ ಪಕ್ಷಕ್ಕೆ ಸೇರುವುದಿಲ್ಲ. ಯಾವುದೇ ಸ್ಥಾನ, ಲಾಭದ ಆಮಿಷಕ್ಕೂ ಒಳಗಾಗಿ ರಾಜೀನಾಮೆ ನೀಡಿಲ್ಲ. ವೈಯಕ್ತಿಕ ನಿರ್ಧಾರದಿಂದ ರಾಜೀನಾಮೆ ನೀಡಿದ್ದೇನೆ” ಎಂದು ಅವರು ಹೇಳಿದ್ದಾರೆ.

Advertisements

ಆದಾಗ್ಯೂ, ಪಕ್ಷದ ಏಕತೆಗಾಗಿ ರಾಜಕೀಯದಲ್ಲಿ ಉಳಿಯುವಂತೆ ಮತ್ತು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡದಂತೆ ವಿಜಯಸಾಯಿ ರೆಡ್ಡಿ ಅವರನ್ನು ಮನವೊಲಿಸಲು ವೈಎಸ್‌ಆರ್‌ ಕಾಂಗ್ರೆಸ್‌ನ ನಾಯಕರು ಮುಂದಾಗಿದ್ದರು. ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಕ್ಷದ ನಾಯಕಿ ಮಡ್ಡಿಲ ಗುರುಮೂರ್ತಿ ಮನವಿ ಮಾಡಿದ್ದರು. ಆದರೂ, ವಿಜಯಸಾಯಿ ಅವರು ತಮ್ಮ ನಿರ್ಧಾರವನ್ನು ಬದಲಿಸಿಲ್ಲ. ರಾಜೀನಾಮೆ ನೀಡಿದ್ದಾರೆ.

ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್‌ ಕಾಂಗ್ರೆಸ್‌ನಲ್ಲಿ ಯಾವುದೇ ಆಂತರಿಕ ಸಮಸ್ಯೆಗಳಿಲ್ಲ ಎಂದು ಮಡ್ಡಿಲ ಅವರು ಸ್ಪಷ್ಟಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X