ಮುಸ್ಲಿಂ ಸಮುದಾಯದ ವಿರುದ್ಧ ಮುಂದುವರೆದ ಬಿಜೆಪಿ ನಾಯಕರ ದ್ವೇಷ: ನಿರ್ಲಕ್ಷ್ಯವೊಂದೆ ಪರಿಹಾರ

Date:

Advertisements
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದಕ್ಕೆ ವಿರೋಧ, ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ನಮಾಜ್ ಮಾಡಿದರೆ ಆಕ್ಷೇಪ, ವಕ್ಫ್ ಆಸ್ತಿಯ ಮೂಲಕ ದೇಶದ ಆಸ್ತಿಯನ್ನು ನಮ್ಮಿಂದ ಕಬಳಿಸುತ್ತಿದ್ದಾರೆ ಎಂದು ಅಪಪ್ರಚಾರ, ಅಮಾಯಕರ ಆಸ್ತಿಯನ್ನು ಬುಲ್ಡೋಜರ್‌ ಮೂಲಕ ನಾಶಪಡಿಸುವುದು- ಇವೆಲ್ಲವೂ ಮುಸ್ಲಿಂ ದ್ವೇಷ ಹರಡುವ ತಂತ್ರಗಾರಿಕೆಯ ಭಾಗವೇ ಹೊರತು, ಆಕಸ್ಮಿಕವಲ್ಲ...

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕಳೆದ ಹತ್ತು ವರ್ಷಗಳಿಂದ ದೇಶದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಕಿಡಿಕಾರುವುದು, ದ್ವೇಷ ಹುಟ್ಟು ಹಾಕುವುದು ವಿಪರೀತವಾಗಿ ಹೆಚ್ಚಾಗುತ್ತಲೇ ಇದೆ. ಕೇಂದ್ರದ ಜೊತೆ ಬಿಜೆಪಿ ಆಡಳಿತ ನಡೆಸುತ್ತಿರುವ ಹಾಗೂ ವಿಪಕ್ಷ ಸ್ಥಾನದಲ್ಲಿರುವ ರಾಜ್ಯಗಳಲ್ಲಿ ಕೂಡ ಮುಸ್ಲಿಮರು ಈ ದೇಶದ ಪ್ರಜೆಗಳೇ ಅಲ್ಲದ ರೀತಿಯಲ್ಲಿ ಭಾರತೀಯ ಜನತಾ ಪಕ್ಷದ ನಾಯಕರು ನಡೆದುಕೊಳ್ಳುತ್ತಿದ್ದಾರೆ. ಇದಕ್ಕೆ ಇತ್ತೀಚಿನ ಉದಾಹರಣೆ ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಬಿಜೆಪಿಯ ಸುವೇಂದು ಅಧಿಕಾರಿಯ ವಿವಾದಾತ್ಮಕ ಮಾತು. ಈ ವ್ಯಕ್ತಿ ಮುಂಬರುವ 2026ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದು ರಾಜ್ಯದಲ್ಲಿ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರದಬ್ಬುತ್ತೇವೆ ಎಂದು ಹೇಳಿರುವುದು ಎಲ್ಲೆಡೆಯಿಂದಲೂ ಆಕ್ರೋಶ ವ್ಯಕ್ತವಾಗಿದೆ.

ಭಾರತದ ಸಂವಿಧಾನದ ಅನ್ವಯ ಚುನಾಯಿತ ಪ್ರತಿನಿಧಿ ಮಾತ್ರವಲ್ಲದೆ ಸಾಮಾನ್ಯ ಜನತೆ ಕೂಡ ಇಂತಹ ಪ್ರಚೋದನಕಾರಿ ಭಾಷೆಯನ್ನು ಬಳಸುವುದು ಯೋಗ್ಯವಲ್ಲ ಎಂಬುದನ್ನು ಇಲ್ಲಿಯವರೆಗೂ ಬಿಜೆಪಿ ನಾಯಕರು ಮನವರಿಕೆ ಮಾಡಿಕೊಂಡಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಆಡಳಿತ ನಡೆಸುವ ಹಾಗೂ ಉಸ್ತುವಾರಿ ವಹಿಸಿಕೊಂಡಿರುವ ಮುಖಂಡರು ತಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಅಧೀನ ನಾಯಕರಿಂದ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷವನ್ನು ಎತ್ತಿಕಟ್ಟುನ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತ ಸಮುದಾಯ ಮಾತ್ರವಲ್ಲದೆ ಶೋಷಿತ ಸಮುದಾಯಗಳ ಅಭಿವೃದ್ಧಿ ಹಾಗೂ ಅವರ ಜೀವನ ಮಟ್ಟ ಸುಧಾರಣೆಗಾಗಿ ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಚರ್ಚೆಗಳು ಮತ್ತು ವಾದಗಳು ನಡೆಯುತ್ತಿರುತ್ತವೆ. ಆದರೆ ಬಿಜೆಪಿಯ ನಾಯಕರು ಧರ್ಮದ ಆಧಾರದ ಮೇಲೆ ಮುಸ್ಲಿಂ ಸಮುದಾಯದವರನ್ನು ಗುರಿಯಾಗಿಸಿಕೊಳ್ಳುತ್ತಿರುವುದು ಸಂವಿಧಾನದ ತತ್ವಗಳಿಗೆ ವಿರುದ್ಧವಾಗಿದೆ. ಇದು ಪ್ರಚೋದನಕಾರಿ, ಅಪಾಯಕಾರಿ ಮತ್ತು ಕ್ರಿಮಿನಲ್ ಕೃತ್ಯ ಎಂಬುದರ ಅರಿವಿದ್ದರೂ ಮುಸ್ಲಿಮರ ವಿರುದ್ಧ ಕೋಮುದ್ವೇಷದ ಭಾಷಣಗಳು ಎಗ್ಗಿಲ್ಲದೆ ಸಾಗುತ್ತಲೆ ಇವೆ.

ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ವಿವಾದಾತ್ಮಕ ಹೇಳಿಕೆ ಇದೇ ಮೊದಲ ಸಲವೇನಲ್ಲ. ಹಲವಾರು ಬಾರಿ ಈ ರೀತಿಯ ಬೆಂಕಿಯುಗುಳುವ ನುಡಿಗಳನ್ನು ಮುಸ್ಲಿಂ ಸಮುದಾಯದ ವಿರುದ್ಧ ಪ್ರಯೋಗಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಿರೀಕ್ಷಿತ ಸ್ಥಾನಗಳನ್ನು ಪಡೆಯಲು ವಿಫಲವಾದ ನಂತರ ‘ನಾವು ನಮ್ಮೊಂದಿಗಿರುವವರೊಂದಿಗೆ ಮಾತ್ರ ಇದ್ದೇವೆ. ನಮಗೆ ಯಾವುದೇ ಅಲ್ಪಸಂಖ್ಯಾತರ ಬೆಂಬಲ ಅಗತ್ಯವಿಲ್ಲ’ ಎಂದು ಹೇಳಿದ್ದರು. ಈ ಹೇಳಿಕೆಯ ವಿರುದ್ಧ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿತ್ತು. ಕೇಸರಿ ಪಕ್ಷದ ಪ್ರಮುಖ ನಾಯಕರು ಸುವೇಂದು ಹೇಳಿಕೆಯಿಂದ ದೂರ ಉಳಿದಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಹುಲ್ ಸುತ್ತಮುತ್ತ ‘ದಿಬ್ಬಣದ ಕುದುರೆಗಳು’ ಇವೆ ಎಂಬ ದೂರೂ ಇದೆಯಲ್ಲ?

ಭಾರತದ ಜಾತ್ಯತೀತ ಸಂವಿಧಾನದಲ್ಲಿ ಧರ್ಮದ ಹೆಸರಿನಲ್ಲಿ ತಾರತಮ್ಯ ಮಾಡಲು ಸಾಧ್ಯವಿಲ್ಲ ಎನ್ನುವುದನ್ನು ಬಿಜೆಪಿ ನಾಯಕರು ಮರೆತಂತಿದೆ. ಕೇಂದ್ರ ಸರ್ಕಾರವು ದಿನದಿಂದ ದಿನಕ್ಕೆ ನಾಗರಿಕರ ಹಕ್ಕುಗಳನ್ನು ದುರ್ಬಲಗೊಳಿಸುತ್ತಿದೆ. ಭಾರತ ದೇಶದ ಪ್ರಜೆಯಾಗಿ ಯಾವುದೇ ಧರ್ಮೀಯರ ಹಕ್ಕುಗಳನ್ನು ಕಸಿದುಕೊಳ್ಳುವುದು ಸಾಧ್ಯವಿಲ್ಲ. ಎಲ್ಲ ಧರ್ಮೀಯರಿಗೆ ಇರುವಷ್ಟೆ ಸಂವಿಧಾನದತ್ತವಾದ ಸೌಲಭ್ಯಗಳು ಮುಸ್ಲಿಂ ಸಮುದಾಯಕ್ಕೂ ಇದೆ. ನಮ್ಮದು ಜಾತ್ಯತೀತ, ಬಹುತ್ವವಾದಿ ರಾಷ್ಟ್ರ. ಪ್ರತಿಯೊಬ್ಬರಿಗೂ ಅವರ ಧರ್ಮವನ್ನು ಆಚರಿಸುವ ಹಕ್ಕಿದೆ. ಅಲ್ಪಸಂಖ್ಯಾತರನ್ನು ರಕ್ಷಿಸುವುದು ಬಹುಸಂಖ್ಯಾತರ ಕರ್ತವ್ಯ. ಪ್ರತಿಯೊಬ್ಬರು ದೇಶದ ಸಾರ್ವಭೌಮತ್ವ ಮತ್ತು ಜಾತ್ಯತೀತತೆಯನ್ನು ರಕ್ಷಿಸಬೇಕು. ಆದರೆ ಇವೆಲ್ಲವನ್ನು ಬಿಟ್ಟು ಸರ್ವಾಧಿಕಾರಿ ಧೋರಣೆ ಮುನ್ನೆಲೆಗೆ ಬರುತ್ತಿದೆ.

ಇದೇ ಸಂದರ್ಭದಲ್ಲಿ ಹೋಳಿ ಹಾಗೂ ರಂಜಾನ್‌ ವಿಚಾರದಲ್ಲೂ ಬಿಜೆಪಿ ನಾಯಕರು ಧರ್ಮ ಹಾಗೂ ಮುಸ್ಲಿಂ ಸಮುದಾಯವನ್ನು ಎಳೆದು ತಂದಿದ್ದಾರೆ. ಉತ್ತರ ಪ್ರದೇಶದ ಸಚಿವ ರಘುರಾಜ್‌ ಸಿಂಗ್‌, ”ಹೋಳಿ ಹಬ್ಬದಂದು ಪ್ರಾರ್ಥನೆಗೆ ಹೊರಡುವಾಗ ಬಣ್ಣಗಳನ್ನು ಎರಚುವುದನ್ನು ತಪ್ಪಿಸಲು ಮುಸ್ಲಿಂ ಪುರುಷರು ಟಾರ್ಪಾಲಿನ್‌ನಿಂದ ಮುಚ್ಚಿಕೊಳ್ಳಬೇಕು. ಸನಾತನ ಧರ್ಮದ ಅನುಯಾಯಿಗಳಿಗೆ ಹೋಳಿ ಹಬ್ಬವು ವರ್ಷಕ್ಕೊಮ್ಮೆ ಮಾತ್ರ ಬರುತ್ತದೆ. ಮಸೀದಿಗಳ ಸಮೀಪವಿರುವ ಕೆಲವು ಪ್ರದೇಶಗಳಲ್ಲಿ ಹೋಳಿ ಆಡಬಾರದು ಎಂದು ನಿರೀಕ್ಷಿಸುವುದು ಸರಿಯಲ್ಲ. ಮುಸ್ಲಿಂ ಮಹಿಳೆಯರು ಮುಸುಕುಗಳಿಂದ ಮುಚ್ಚಿಕೊಳ್ಳುತ್ತಾರೆ ಮತ್ತು ಮುಂಜಾಗ್ರತಾ ಕ್ರಮವಾಗಿ ಕೆಲವೊಮ್ಮೆ ಮಸೀದಿಗಳನ್ನು ಟಾರ್ಪಾಲಿನ್‌ಗಳಿಂದ ಮುಚ್ಚಲಾಗುತ್ತದೆ. ಅದರಂತೆ ಮುಸ್ಲಿಂ ಪುರುಷರು ಬಣ್ಣ ಹಾಕಿಸಿಕೊಳ್ಳುವುದನ್ನು ತಪ್ಪಿಸಲು ಬಯಸಿದರೆ ತಮ್ಮನ್ನು ತಾವು ಟಾರ್ಪಾಲಿನ್‌ಗಳಿಂದ ಮುಚ್ಚಿಕೊಳ್ಳಬಹುದು. ಹೋಳಿಗೆ ಅಡ್ಡಿಪಡಿಸುವವರಿಗೆ ಮೂರು ಆಯ್ಕೆಗಳಿವೆ, ಜೈಲಿಗೆ ಹೋಗಿ, ರಾಜ್ಯವನ್ನು ತೊರೆಯಿರಿ ಇಲ್ಲವೆ ಯಮರಾಜ್ ಬಳಿ ಹೆಸರು ನೋಂದಾಯಿಸಿಕೊಳ್ಳಿ” ಎಂದು ಹೇಳಿರುವುದು ಧರ್ಮಧರ್ಮಗಳ ವಿರುದ್ಧ ಎತ್ತಿಕಟ್ಟುವುದೇ ವಿನಾ ಮತ್ತೇನಿಲ್ಲ. ಇಂತಹ ನಾಯಕರಿಗೆ ಸಾಮರಸ್ಯ, ಸಹಬಾಳ್ವೆ ಬೇಕಿಲ್ಲ. ಮುಸ್ಲಿಂ ಸಮುದಾಯದ ವಿರುದ್ಧ ನೇರವಾಗಿ ಕೆಂಡಕಾರುವ ಇವರು ಹಿಂದೂ ಧರ್ಮದಲ್ಲೇ ಇರುವ ತಳ ಸಮುದಾಯದವರನ್ನು ನೂರಾರು ವರ್ಷಗಳಿಂದ ಶೋಷಣೆ ಮಾಡುತ್ತಿರುವುದರ ಬಗ್ಗೆ ಬಾಯಿ ಬಿಚ್ಚುವುದಿಲ್ಲ.  

ಮುಸ್ಲಿಮರು ಹಿಂದೂಗಳ ಶತ್ರುಗಳು ಎಂದು ಬಿಂಬಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಹಿಂದೆ ಅವರನ್ನು ದಾಳಿಕೋರರು ಎಂದು ತೋರಿಸಲಾಯಿತು. ನಂತರ ಅವರನ್ನು ಹಿಂದುಳಿದವರು ಎಂದು ಹೀಯಾಳಿಸಲಾಯಿತು. ಈಗ ದೇಶ ವಿರೋಧಿಗಳು ಎಂಬಂತೆ ತೋರಿಸುವ ಪ್ರಯತ್ನಗಳು ನಡೆಯುತ್ತಿವೆ. ‘ಲವ್ ಜಿಹಾದ್’, ‘ಶೈಕ್ಷಣಿಕ ಜಿಹಾದ್’ ಎಂಬ ಹೆಸರುಗಳನ್ನು ಇಟ್ಟು ಅವರ ವಿರುದ್ಧ ಹಿಂದೂಗಳನ್ನು ಎತ್ತಿಕಟ್ಟಲಾಗುತ್ತಿದೆ. ‘ಜಿಹಾದ್’ ಪದವನ್ನು ಎಷ್ಟೊಂದು ಒತ್ತಾಯಪೂರ್ವಕವಾಗಿ ತುರುಕಲಾಗುತ್ತಿದೆ ಎಂದರೆ, ಅದನ್ನು ಕೇಳುವ ವ್ಯಕ್ತಿ ಮುಸ್ಲಿಂ ವಿರೋಧಿ ನಿಲುವನ್ನು ತಾಳಬೇಕು. ಅಂತಹ ಸ್ಥಿತಿ ಸಮಾಜದಲ್ಲಿ ನಿರ್ಮಾಣವಾಗಿದೆ.

ಹಿಂದೂ ಯುವತಿಯನ್ನು ಮುಸ್ಲಿಂ ಯುವಕರು ಪ್ರೀತಿಸಿ ಮದುವೆಯಾಗಿ ನಂತರ ನಡುನೀರಿನಲ್ಲಿ ಕೈಬಿಡುತ್ತಾರೆ ಎಂದು ಅಪನಂಬಿಕೆ ಮೂಡಿಸುವುದು, ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದಕ್ಕೆ ವಿರೋಧ ವ್ಯಕ್ತಪಡಿಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ನಮಾಜ್ ಮಾಡಿದರೆ, ಅದಕ್ಕೆ ಅಕ್ಷೇಪ ವ್ಯಕ್ತಪಡಿಸುವುದು, ವಕ್ಫ್‌ ಆಸ್ತಿಯ ಮೂಲಕ ದೇಶದ ಆಸ್ತಿಯನ್ನು ನಮ್ಮಿಂದ ಕಬಳಿಸುತ್ತಿದ್ದಾರೆ ಎಂದು ಅಪಪ್ರಚಾರ ನಡೆಸುವುದು, ಅಮಾಯಕರ ಆಸ್ತಿಯನ್ನು ಬುಲ್ಡೋಜರ್‌ ಮೂಲಕ ನಾಶಪಡಿಸುವುದು. ಇವೆಲ್ಲವೂ ಮುಸ್ಲಿಂ ದ್ವೇಷ ಹರಡುವ ತಂತ್ರಗಾರಿಕೆಯ ಭಾಗವೇ ಹೊರತು, ಆಕಸ್ಮಿಕವಲ್ಲ.

ಶಾಂತಿ ಕದಡುವುದೆ ಬಿಜೆಪಿ ನಾಯಕರ ಗುಪ್ತ ತಂತ್ರವಾಗಿದೆ. ಹಿಜಾಬ್, ಹಲಾಲ್, ಅಜಾನ್‌ನಂತಹ ವಿವಾದಗಳ ಜೊತೆಗೆ ವ್ಯಾಪಾರಕ್ಕೂ ತೊಂದರೆ ಕೊಡುವ ಪ್ರಯತ್ನಗಳು ನಡೆದವು. ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶವಿಲ್ಲ ಎಂಬ ಅಭಿಯಾನ ನಿರಂತರವಾಗಿ ಸಾಗಿತು. ಇಂತಹ ಕೊಳಕು ಮನಸ್ಥಿತಿಗಳ ವಿರುದ್ಧ ಸಾಮಾನ್ಯ ಜನರು ಎಚ್ಚೆತ್ತುಕೊಳ್ಳಬೇಕಿದೆ. ಮುಸ್ಲಿಮರ ಕುರಿತ ಅಪಪ್ರಚಾರಗಳಿಂದ ದೂರ ಉಳಿಯುವುದನ್ನು ರೂಢಿಸಿಕೊಳ್ಳಬೇಕು. ದ್ವೇಷ ಸಾರುವವರ ವಿರುದ್ಧ ಉದಾಸೀನ ಪ್ರವೃತ್ತಿಯನ್ನು ತೋರುವುದರಿಂದ ಮಾತ್ರ ದೇಶವನ್ನು ದ್ವೇಷದ ಬೆಂಕಿಯಿಂದ ಕಾಪಾಡಬಹುದಾಗಿದೆ. ಇದಕ್ಕೆ ನಿರ್ಲಕ್ಷ್ಯವೊಂದೆ ಪರಿಹಾರ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

6 COMMENTS

  1. ಇಂತಹ ವಿಷಯ ಗಳನ್ನು ಬರೆದು ಕೋಮು ದ್ವೇಷ ಹರಡುತ್ತಿರುವ ನಿಮ್ಮಂಥ ವರಿಗೆ ಧಿಕ್ಕಾರ

  2. ಇದಣ್ಣಾ ಕೋಮುವಾದ್ ಅಂತ ಬಿಟ್ಟರಿಸುವ್ ನಿಮ್ಮಂಟ್ ಪತ್ರಕರ್ತರಿಗ್ರ್ ಮೊದಲ್ ಧಿಕ್ಕರ್. ನೀನು ಕಾಂಗ್ರೆಸ್ ಹಾಕಿಟ್ ಬಿಸ್ಕಿಟ್ ತಿನ್ನೋ ನಾಯಿಗಳು. ನಿಮಗೆ ಕಾಶ್ಮೀರ ಕೇರಳ ಬಂಗಲ್ ಜಾರ್ಖಂಡ್ ಕಾಣೋದಿಲ್ಲ.. ಬರೀ ಬಿಜೆಪಿ ನಾಯಕರು ಆಡಿದ್ ಮಾತುಗಳು ಕಾನಟವೇ.

  3. This news writer is mad, let him survey the neighboring countries & what you say about Hindus condition there, what we have to say about that. You r taking about only non blood incidents, you r literally not a balanced person.

  4. According to writer doing namaz on public place by a large crowd inconveniencing thousands of public is not wrong. It is their right!!
    Violent attacks on GanPathi procession in Nelamangala and Davangere while passing Infront of their religious place is not wrong!
    r
    Only Hindus should follow seclarism and tolerance.it is not applicable to minorities!!!

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ವಿರುದ್ಧ ತೊಡೆ ತಟ್ಟಿದ ಇಂಡಿಯಾ ಒಕ್ಕೂಟ: ಕೆಟ್ಟ ವ್ಯವಸ್ಥೆಯ ವಿರುದ್ಧ ಹೋರಾಟ

ಭಾರತದ ಪ್ರಜಾಪ್ರಭುತ್ವದ ಭವಿಷ್ಯಕ್ಕೆ ಒಂದು ನಿರ್ಣಾಯಕ ಘಟ್ಟವಾಗಿದೆ. ಇದು ಕೇವಲ ಒಂದು...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

ಧರ್ಮಸ್ಥಳ ಪ್ರಕರಣ | ಬಿಜೆಪಿಯವರು ನ್ಯಾಯಕ್ಕಾಗಿ ಧ್ವನಿ ಎತ್ತಿದ್ದಕ್ಕಿಂತ ವಿತಂಡವಾದದಲ್ಲಿ ಮುಳುಗಿದ್ದೇ ಹೆಚ್ಚು!

ಧರ್ಮಸ್ಥಳದಲ್ಲಿ ಅನ್ಯಾಯವಾಗಿ ಶವವಾಗಿರುವ ಅದೆಷ್ಟೋ ಜನರು ಹಿಂದುಗಳು ಎನ್ನಲಾಗುತ್ತಿದೆ. ಹಿಂದೂ ಧರ್ಮದ...

ರಾಜ್ಯ ಶಿಕ್ಷಣ ನೀತಿ ಆಯೋಗ: ಶಾಲಾ ಶಿಕ್ಷಣ ಕುರಿತ ಹೊಸ ಅಂಶಗಳೇನು?

ಎನ್‌ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) ಎಂಬುದು ಭಾರತೀಯ ಜ್ಞಾನದ ನೆಲೆಯಲ್ಲಿ ರೂಪಿಸಲಾಗಿದೆ....

Download Eedina App Android / iOS

X