ಈ ದಿನ ಕವಿತೆ | ಚಂದಿರ- ಮೊಸಾಬ್ ಅಬು ತೋಹಾ

Date:

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಇಂದು ಪ್ಯಾಲೆಸ್ತೀನಿನ ಕವಿ ಮೊಸಾಬ್ ಅಬು ತೋಹಾ ಅವರ ʼಚಂದಿರʼ ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಹೆಚ್‌ ಭಾಗ್ಯ.

- Advertisement -

ಅವಳು ಡಾಂಬರು ರಸ್ತೆಯ ಮೇಲೆ ಬಿದ್ದಿರುವಳು.
ಅವಳ ಪುಟಾಣಿ ಹೊಟ್ಟೆ, ಪುಟ್ಟ ಎದೆ, ಹಣೆ, ಕೈಗಳು, ಥಣ್ಣನೆಯ ಪಾದಗಳು ಹಾಗೆ ಹಾಗೇ ಬಿದ್ದಿವೆ.
ಹಸಿದ ಬೆಕ್ಕೊಂದು ಎದುರಾಗಿದೆ.
ಸುತ್ತಮುತ್ತಲ ಮನೆಗಳಿಗೆ ಬಾಂಬ್ ಬಿದ್ದಿದ್ದು
ಲೋಹದ ಚೂರುಗಳು ಅಲ್ಲೇ ರಿಂಗಣಗುಣಿದಿವೆ.
ಹಸಿದ ಬೆಕ್ಕು ಅವಳನ್ನು ನಿಟ್ಟಿಸುತ್ತಿದೆ.
ಅವಳ ಗಾಯಗಳಿನ್ನೂ ಹಸಿಯಾಗಿವೆ.
ಹಸಿವೋ ಹಸಿವು.
ಅವಳ ತಂದೆ ಅವಳ ಪಕ್ಕದಲ್ಲೇ ಅಂಗಾತ ಬಿದ್ದಿದ್ದಾನೆ.
ಅವನ ಬ್ಯಾಕ್ ಪ್ಯಾಕ್ ನಲ್ಲಿ
ಆ ಹುಡುಗಿಯ ಅಚ್ಚುಮೆಚ್ಚಿನ ಕ್ಯಾಂಡಿ ಹಾಗೂ ಗೊಂಬೆ ಇದೆ.
ಅವಳು ಅಲ್ಲಿ ಲಾಲಿಪಪ್ ತಿನ್ನಲು ಕಾಯುತ್ತಿದ್ದಳು‌.
ಬೆಕ್ಕು ಸಮೀಪಿಸುತ್ತಿದೆ
ಮಾಂಸ ನೆಕ್ಕಲು,
ರಸ್ತೆಯನ್ನೂ ಬಾಂಬ್ ಉಡಾಯಿಸಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮಾಂಸವೂ ಇಲ್ಲ,ಹುಡುಗಿಯೂ ಇಲ್ಲ
ತಂದೆಯೂ ಇಲ್ಲ, ಬೆಕ್ಕೂ ಇಲ್ಲ.

ಯಾರೂ ಹಸಿದಿಲ್ಲ.

ಮೇಲಿರುವ ಚಂದಿರ
ಚಂದಿರನೇ ಅಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...