ಎಟಿಕೆ ಮೋಹನ್‌ ಬಗಾನ್‌ ಮಡಿಲಿಗೆ ಚೊಚ್ಚಲ ಐಎಸ್‌ಎಲ್‌ ಕಿರೀಟ, ಶೂಟೌಟ್‌ನಲ್ಲಿ ಮುಗ್ಗರಿಸಿದ ಬೆಂಗಳೂರು

Date:

  • ಪೆನಾಲ್ಟಿ ಶೂಟೌಟ್‌ನಲ್ಲಿ ಮಣಿದ ಸುನಿಲ್‌ ಛೆಟ್ರಿ ಪಡೆ
  • 2ನೇ ಬಾರಿ ಚಾಂಪಿಯನ್‌ ಆಗುವ ಬಿಎಫ್‌ಸಿ ಕನಸು ಭಗ್ನ

ಬೆಂಗಳೂರು ಎಫ್‌ಸಿ ತಂಡವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ ಮಣಿಸಿದ ಎಟಿಕೆ ಮೋಹನ್‌ ಬಗಾನ್‌ ಕ್ಲಬ್‌, 9ನೇ ಆವೃತ್ತಿಯ ಐಎಸ್‌ಎಲ್‌ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಚಾಂಪಿಯನ್‌ ಪಟ್ಟ ಅಲಂಕರಿಸಿದೆ.

ಗೋವಾದ ಫಟೋರ್ಡಾದ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಪ್ರಶಸ್ತಿ ಸುತ್ತಿನ ಹಣಾಹಣಿಯು ತೀವ್ರ ಜಿದ್ದಾಜಿದ್ದಿನಿಂದ ಕೂಡಿತ್ತು. ಎಟಿಕೆ ಪರ ಡಿಮಿಟ್ರಿ ಪೆಟ್ರಾಟೋಸ್ 14 ಮತ್ತು 85ನೇ ನಿಮಿಷದಲ್ಲಿ ಪೆನಾಲ್ಟಿ ಮೂಲಕ ಗೋಲು ದಾಖಲಿಸಿದರೆ, ಬೆಂಗಳೂರು ಪರ ನಾಯಕ ಸುನಿಲ್ ಛೆಟ್ರಿ 45+5ನೇ ನಿಮಿಷ (ಪೆನಾಲ್ಟಿ) ಮತ್ತು 78ನೇ ನಿಮಿಷದಲ್ಲಿ ರಾಯ್ ಕೃಷ್ಣ  ಗೋಲು ದಾಖಲಿಸಿದ್ದರು.

ಪೂರ್ಣಾವಧಿಯ ವೇಳೆಗೆ ಉಭಯ ತಂಡಗಳು 2-2 ಗೋಲುಗಳಿಂದ ಸಮಬಲ ಸಾಧಿಸಿದ್ದರಿಂದ ಪಂದ್ಯ ಹೆಚ್ಚುವರಿ ಅವಧಿಗೆ ಮುಂದೂಡಲ್ಪಟ್ಟಿತು. ಹೆಚ್ಚುವರಿ ಅವಧಿಯ 30 (15+15) ನಿಮಿಷಗಳ ಆಟದಲ್ಲಿ ಯಾವುದೇ ಗೋಲು ದಾಖಲಾಗಲಿಲ್ಲ. ಹೀಗಾಗಿ ಫಲಿತಾಂಶಕ್ಕಾಗಿ ಪೆನಾಲ್ಟಿ ಶೂಟ್‌ಟ್‌ ಮೊರೆ ಹೋಗಲಾಯಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೆನಾಲ್ಟಿ ಶೂಟೌಟ್‌ನಲ್ಲಿ ದೊರೆತ 5 ಅವಕಾಶಗಳಲ್ಲಿ ನಾಲ್ಕನ್ನು ಮೋಹನ್‌ ಬಗಾನ್‌ ಆಟಗಾರರು ಗೋಲಾಗಿ ಪರಿವರ್ತಿಸಿದ್ದರು. ಆದರೆ ಕೇವಲ ಮೂರು ಬಾರಿಯಷ್ಟೇ ಗುರಿ ತಲುಪಲು ಬಿಎಫ್‌ಸಿಗೆ ಸಾಧ್ಯವಾಯಿತು. ಆ ಮೂಲಕ ಕೋಲ್ಕತ್ತಾದ ಎಟಿಕೆ ಮೋಹನ್‌ ಬಗಾನ್‌ ತಂಡದ ಚೊಚ್ಚಲ ಐಎಸ್‌ಎಲ್ ಕಿರೀಟದ ಕನಸು ಗೋವಾದ ಮಣ್ಣಿನಲ್ಲಿ ನನಸಾಯಿತು.

ಮಾರ್ಚ್‌ 12ರಂದು ಕಂಠೀರವ ಸ್ಟೇಡಿಯಂನಲ್ಲಿ ನಡೆದಿದ್ದ ಎರಡನೇ ಚರಣದ ಸೆಮಿಫೈನಲ್‌ ಪಂದ್ಯದಲ್ಲಿ ಮುಂಬೈ ಸಿಟಿ ತಂಡವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ ಮಣಿಸಿ ಬಿಎಫ್‌ಸಿ ನಾಲ್ಕು ವರ್ಷಗಳ ಬಳಿಕ ಒಟ್ಟಾರೆ 3ನೇ ಬಾರಿಗೆ ಐಎಸ್‌ಎಲ್‌ ಫೈನಲ್‌ ಪ್ರವೇಶಿಸಿತ್ತು.

2017-18ನೇ ಆವೃತ್ತಿಯಲ್ಲಿ ಮೊದಲ ಬಾರಿಗೆ ಫೈನಲ್‌ ಪ್ರವೇಶಿಸಿದ್ದ ಬಿಎಫ್‌ಸಿ, ಚೆನ್ನೈ ಎಫ್‌ಸಿ ತಂಡಕ್ಕೆ 2-3 ಗೋಲುಗಳ ಅಂತರದಲ್ಲಿ ಶರಣಾಗಿತ್ತು. ಮುಂದಿನ ಆವೃತ್ತಿಯಲ್ಲಿ (2018-19) ಸತತ ಎರಡನೇ ಬಾರಿ ಫೈನಲ್‌ ಪ್ರವೇಶಿಸಿ, ಗೋವಾ ತಂಡವನ್ನು ಮಣಿಸಿ ಬೆಂಗಳೂರು ಚೊಚ್ಚಲ ಚಾಂಪಿಯನ್‌ ಪಟ್ಟವನ್ನೇರಿತ್ತು. ಆದರೆ ಮೂರನೇ ಬಾರಿ  ಫೈನಲ್‌ ಪ್ರವೇಶಿಸಿ 2ನೇ ಬಾರಿ ಚಾಂಪಿಯನ್‌ ಆಗುವ ಹುಮ್ಮಸ್ಸಿನಲ್ಲಿದ್ದ ಬಿಎಫ್‌ಸಿಗೆ ನಿರಾಸೆಯಾಗಿದೆ.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...

ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ರೀತಿಕಾ ಹೂಡಾ, ಅಂಶು ಮಲಿಕ್

ಕಝಕಿಸ್ತಾನದ ಬಿಸ್ಕೆಕ್‌ನಲ್ಲಿ ನಡೆದ ಏಷ್ಯನ್ ಒಲಿಂಪಿಕ್ಸ್‌ನ ಏಷ್ಯನ್ ಅರ್ಹತಾ ಸುತ್ತಿನ ಪಂದ್ಯಾವಳಿಯಲ್ಲಿ...