ಭಾರತ–ಆಸ್ಟ್ರೇಲಿಯ ಏಕದಿನ ಸರಣಿ | ಆಸೀಸ್‌ಗೆ ಸುಲಭ ತುತ್ತಾದ ಟೀಂ ಇಂಡಿಯಾ; ಸರಣಿ ಸಮಬಲ

Date:

Advertisements
  • 117 ರನ್‌ಗಳಿಗೆ ಆಲೌಟ್ ಆದ ಟೀಂ ಇಂಡಿಯಾ ಆಟಗಾರರು
  • ಆಸ್ಟ್ರೇಲಿಯ ಪರ ಮಹತ್ವದ 5 ವಿಕೆಟ್ ಪಟೆದ ಮಿಷೆಲ್ ಸ್ಟಾರ್ಕ್

ಆಸ್ಟ್ರೇಲಿಯ ತಂಡ ಭಾರತದ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ 10 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸುವುದರ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 1-1 ರೊಂದಿಗೆ ಸಮಬಲ ಸಾಧಿಸಿದೆ.

ವಿಶಾಖಪಟ್ಟಣಂನ ಡಾ ವೈ ಎಸ್ ರಾಜಶೇಖರ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ ಅತ್ಯಲ್ಪ 117 ರನ್ನುಗಳ ಸವಾಲನ್ನು ಸ್ಟೀವನ್ ಸ್ಮಿತ್ ನೇತೃತ್ವದ ಆಸೀಸ್ ತಂಡ ಕೇವಲ 11 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಗುರಿ ಮುಟ್ಟಿತು.

ಸ್ಫೋಟಕ ಆಟವಾಡಿದ ಆರಂಭಿಕ ಆಟಗಾರರಾದ ಮಿಷೆಲ್ ಮಾರ್ಷ್ ಹಾಗೂ ಟ್ರಾವಿಸ್ ಹೆಡ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಮಿಷಲ್ ಮಾರ್ಷ್ ಕೇವಲ 36 ಎಸೆತಗಳಲ್ಲಿ 6 ಭರ್ಜರಿ ಸಿಕ್ಸರ್ ಹಾಗೂ 6 ಬೌಂಡರಿಗಳೊಂದಿಗೆ ಅಜೇಯ 66 ರನ್ ಬಾರಿಸಿದರು. ಮಾರ್ಷ್‌ಗೆ ಜೊತೆಯಾದ ಟ್ರಾವೀಸ್ ಹೆಡ್ 30 ಚೆಂಡುಗಳಲ್ಲಿ 10 ಬೌಂಡರಿಗಳೊಂದಿಗೆ 51 ಗಳಿಸುವುದರ ಮೂಲಕ ಅಜೇಯರಾಗಿ ಉಳಿದರು.

Advertisements

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಆಸೀಸ್‌ನ ವೇಗದ ಬೌಲಿಂಗ್ ದಾಳಿಗೆ ಸಿಲುಕಿ 26 ಓವರ್‌ಗಳಲ್ಲಿ 117 ರನ್‌ಗಳಿಗೆ ಆಲೌಟ್ ಆಯಿತು.

ಅಕ್ಷರ್ ಪಟೇಲ್ ಅಜೇಯ 29 ಹಾಗೂ ವಿರಾಟ್ ಕೊಹ್ಲಿ 31 ರನ್ ಕಲೆ ಹಾಕಿದ್ದು ಬಿಟ್ಟರೆ ಉಳಿದ ಆಟಗಾರರು ಯಾರೂ 20ರ ಗಡಿ ದಾಟಲಿಲ್ಲ. ಸೂರ್ಯ ಕುಮಾರ್ ಯಾದವ್ ಎರಡನೇ ಪಂದ್ಯದಲ್ಲೂ ಶೂನ್ಯಕ್ಕೆ ನಿರ್ಗಮಿಸಿದರು. ಹಾರ್ದಿಕ್ ಪಾಂಡ್ಯ 1, ಶುಭ್ಮನ್ ಗಿಲ್ 0, ರಾಹುಲ್ 9, ರೋಹಿತ್ 13, ರವೀಂದ್ರ ಜಡೇಜಾ 16 ಹೀಗೆ ಪ್ರಮುಖ ಆಟಗಾರರು ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಕಡೆ ಪರೇಡ್ ನಡೆಸಿದರು.

5 ವಿಕೆಟ್ ಪಡೆದ ಮಿಷೆಲ್ ಸ್ಟಾರ್ಕ್, ಸಿಯಾನ್ ಅಬ್ಬೋಟ್ 23/3 ಹಾಗೂ ಆಡಂ ಝಂಪಾ 13/2 ವಿಕೆಟ್ ಪಡೆಯುವ ಮೂಲಕ ಟೀಂ ಇಂಡಿಯಾ ಆಟಗಾರರರಿಗೆ ಮುಳುವಾದರು.

ಸರಣಿಯ ಮೂರನೇ ಹಾಗೂ ಮಹತ್ವದ ಅಂತಿಮ ಪಂದ್ಯ ಮಾರ್ಚ್ 22ರಂದು ಚೆನ್ನೈನಲ್ಲಿ ನಡೆಯಲಿದೆ.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X