ಭಾರತ – ದಕ್ಷಿಣ ಆಫ್ರಿಕಾ ಟೆಸ್ಟ್; ಒಂದೇ ದಿನ 23 ವಿಕೆಟ್ ಪತನ

Date:

Advertisements

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಲ್ಲಿ ಮೂರು ಇನಿಂಗ್ಸ್  ನಡೆದು 23 ವಿಕೆಟ್ ಉರುಳಿವೆ. ಸದ್ಯ 2ನೇ ಇನಿಂಗ್ಸ್ ಆಡುತ್ತಿರುವ ಹರಿಣಿ ಪಡೆ ಮೂರು ವಿಕೆಟ್ ನಷ್ಟಕ್ಕೆ 63 ರನ್ ಗಳಿಸಿ 36 ರನ್ ಗಳ ಹಿನ್ನಡೆ ಅನುಭವಿಸಿದೆ.

ಒಂದೇ ದಿನ 23 ವಿಕೆಟ್ ಉರುಳಿರುವುದು ಇತ್ತೀಚಿನ ವರ್ಷಗಳಲ್ಲಿ  ಕಂಡರಿಯದ ದಾಖಲೆಯಾಗಿದೆ.

ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಬೃಹತ್‌ ಮುನ್ನಡೆ ನಿರೀಕ್ಷೆಯಲ್ಲಿದ್ದ ಟೀಂ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 153 ರನ್‌ಗಳಿಗೆ ಆಲೌಟ್‌ ಆಗಿ 98 ರನ್‌ ಮುನ್ನಡೆ ಪಡೆದಿದೆ.

Advertisements

33 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 153 ರನ್‌ ಗಳಿಸಿದ್ದ ಭಾರತ ತಂಡ 34.5 ಕೇವಲ 11 ಚೆಂಡುಗಳಲ್ಲಿ ಶೂನ್ಯ ರನ್‌ ಗಳಿಸಿ 6 ವಿಕೆಟ್ ಕಳೆದುಕೊಂಡು ಆಲೌಟ್‌ ಆಯಿತು. 34ನೇ ಓವರ್‌ನಲ್ಲಿ ಲುಂಗಿ ಎನ್ಗಿಡಿ ಮೂರು ವಿಕೆಟ್ ಕಬಳಿಸಿದರೆ, 35ನೇ ಓವರ್‌ನಲ್ಲಿ ರಬಾಡ ಎರಡು ವಿಕಿಟ್‌ ಕಿತ್ತರು. ಸಿರಾಜ್‌ ರನೌಟ್‌ ಆದರು.

ಟೀಂ ಇಂಡಿಯಾ ಪರ ವಿರಾಟ್ ಕೊಹ್ಲಿ 46, ನಾಯಕ ರೋಹಿತ್ ಶರ್ಮಾ 39 ಹಾಗೂ ಶುಭಮನ್‌ ಗಿಲ್ 36 ರನ್‌ ಗಳಿಸಿದ್ದು ಬಿಟ್ಟರೆ ಉಳಿದವರು ಬಂದ ಹಾಗೆಯೇ ಪೆವಿಲಿಯನ್‌ ಕಡೆ ತೆರಳಿದರು. 7 ಬ್ಯಾಟ್ಸ್‌ಮನ್‌ಗಳು ಶೂನ್ಯಕ್ಕೆ ಔಟಾದರು.

ದಕ್ಷಿಣ ಆಫ್ರಿಕಾ ಪರ ರಬಾಡ 38/3, ಲುಂಗಿ ಎನ್ಗಿಡಿ 30/3 ಹಾಗೂ ನಾಂದ್ರೆ ಬರ್ಗರ್ 42/3 ವಿಕೆಟ್ ಪಡೆದು ಭಾರತದ ಪತನಕ್ಕೆ ಕಾರಣರಾದರು.

ಸಿರಾಜ್‌ಗೆ 6 ವಿಕೆಟ್

ಈ ಮೊದಲು ಟಾಸ್‌ ಗೆದ್ದ ದಕ್ಷಿಣ ಅಫ್ರಿಕಾ ತಂಡದ ನಾಯಕ ಡೀನ್‌ ಎಲ್ಗರ್ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡರು. ನಾಲ್ಕನೇ ಓವರ್‌ನಿಂದ ಶುರುವಾದ ಹರಿಣಗಳ ತಂಡದ ವಿಕೆಟ್ ಪತನ 23.2 ಓವರ್‌ಗಳಾಗುವಷ್ಟರಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೊಸವರ್ಷದ ಹೊಸ್ತಿಲಲ್ಲಿ ನಮ್ಮನ್ನಗಲಿದ ನಿಜಾಯತಿಯ ಪತ್ರಕರ್ತ ಜಾನ್ ಪಿಲ್ಜರ್

ದಕ್ಷಿಣ ಆಫ್ರಿಕಾ ಪರ ಕೈಲ್ ವೆರ್ರೆನ್ 15 ರನ್ ಗಳಿಸಿದರೆ, ಡೇವಿಡ್ ಬೆಡಿಂಗ್ ಹ್ಯಾಮ್ 12 ರನ್ ಗಳಿಸಿದರು. ಈ ಇಬ್ಬರು ಬ್ಯಾಟರ್‌ಗಳು ಮಾತ್ರ ಎರಡಂಕಿ ಮೊತ್ತ ದಾಟಿದರು.

ಉಳಿದ ನಾಲ್ಕು ವಿಕೆಟ್‌ಗಳಲ್ಲಿ 2 ಜಸ್‌ಪ್ರೀತ್‌ ಬೂಮ್ರಾ ಹಾಗೂ ಉಳಿದ ಎರಡನ್ನು ಮುಖೇಶ್ ಕುಮಾರ್‌ ಕಿತ್ತು ದಕ್ಷಿಣ ಆಫ್ರಿಕಾ ಇನಿಂಗ್ಸ್‌ ಮುಕ್ತಾಯ ಮಾಡಿದರು.

ಟೆಸ್ಟ್‌ ಕ್ರಿಕೆಟ್ ಮಾದರಿಯ ಉತ್ತಮ ಬೌಲಿಂಗ್‌ ಪ್ರದರ್ಶಿಸಿದ ಮೊಹಮದ್‌ ಸಿರಾಜ್‌ 15 ರನ್‌ಗಳಿಗೆ 6 ವಿಕೆಟ್ ಕಬಳಿಸಿದರು. ಸಿರಾಜ್‌  6 ವಿಕೆಟ್ ಗಳಿಕೆಯು ದಕ್ಷಿಣ ಆಫ್ರಿಕಾ ನೆಲದಲ್ಲಿ ಭಾರತೀಯ ಬೌಲರ್‌ ಪ್ರದರ್ಶಿಸಿದ ಮೂರನೇ ಅತ್ಯುತ್ತಮ ಪ್ರದರ್ಶನವಾಗಿದೆ.

ದಕ್ಷಿಣಆಫ್ರಿಕಾ ತಂಡ ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲಿ ಹಾಗೂ ಭಾರತ ತಂಡದ ವಿರುದ್ಧ 55 ರನ್‌ಗಳ ಅತೀ ಕಡಿಮೆ ಮೊತ್ತಕ್ಕೆ ಆಲೌಟ್‌ ಆಗಿರುವುದು ಇದೇ ಮೊದಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X