2025ರ ಏಕದಿನ ವಿಶ್ವಕಪ್ ಪಂದ್ಯಗಳು ಬೆಂಗಳೂರಿನಿಂದ ಸ್ಥಳಾಂತರ

Date:

Advertisements

2025 ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ವೇಳಾಪಟ್ಟಿಯಲ್ಲಿ ದೊಡ್ಡ ಬದಲಾವಣೆಯಾಗಿದೆ. ಈ ಮೊದಲೇ ಊಹಿಸಿದಂತೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಲೀಗ್ ಹಂತದ ಹಾಗೂ ಸೆಮಿಫೈನಲ್ ಪಂದ್ಯಗಳನ್ನು ನವಿ ಮುಂಬೈನಲ್ಲಿ ನಡೆಸಲು ಐಸಿಸಿ ನಿರ್ಧರಿಸಿದೆ.

ವಾಸ್ತವವಾಗಿ ಐಸಿಸಿ ನಿರ್ಧಾರಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಉಂಟಾಗಿದ್ದ ಕಾಲ್ತುಳಿತ ದುರಂತವೇ ಪ್ರಮುಖ ಕಾರಣ ಎನ್ನಬಹುದು. ಇದರಿಂದಾಗಿ ವಿಶ್ವಕಪ್ ಪಂದ್ಯಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಬದಲು ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿವೆ.

ಮಹಿಳಾ ವಿಶ್ವಕಪ್‌ನ ಹೊಸ ವೇಳಾಪಟ್ಟಿಯ ಪ್ರಕಾರ, ಐದು ಪಂದ್ಯಗಳು ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿವೆ. ಈ ಪಂದ್ಯಗಳಲ್ಲಿ ಮೂರು ಲೀಗ್ ಪಂದ್ಯಗಳು ಮತ್ತು ಒಂದು ಸೆಮಿಫೈನಲ್ ಸೇರಿವೆ. ಪಾಕಿಸ್ತಾನ ಫೈನಲ್ ತಲುಪದಿದ್ದರೆ, ಪಂದ್ಯಾವಳಿಯ ಫೈನಲ್ ಕೂಡ ಈ ಕ್ರೀಡಾಂಗಣದಲ್ಲಿ ನಡೆಯಲಿದೆ. ನವಿ ಮುಂಬೈ ಜೊತೆಗೆ, ವಿಶ್ವಕಪ್ ಪಂದ್ಯಗಳನ್ನು ಎಸಿಎ ಕ್ರೀಡಾಂಗಣ (ಗುವಾಹಟಿ), ಹೋಳ್ಕರ್ ಕ್ರೀಡಾಂಗಣ (ಇಂದೋರ್), ಎಸಿಎ-ವಿಡಿಸಿಎ ಕ್ರೀಡಾಂಗಣ (ವಿಶಾಖಪಟ್ಟಣ) ಮತ್ತು ಆರ್. ಪ್ರೇಮದಾಸ ಕ್ರೀಡಾಂಗಣ (ಕೊಲಂಬೊ, ಶ್ರೀಲಂಕಾ) ಗಳಲ್ಲಿಯೂ ನಡೆಸಲಾಗುವುದು.

Advertisements

ಹಳೆಯ ವೇಳಾಪಟ್ಟಿಯ ಪ್ರಕಾರ, ಭಾರತ ಮತ್ತು ಶ್ರೀಲಂಕಾ ನಡುವಿನ ಪಂದ್ಯ ಸೆಪ್ಟೆಂಬರ್ 30 ರಂದು ಬೆಂಗಳೂರಿನ ಮೈದಾನದಲ್ಲಿ ನಡೆಯಬೇಕಿತ್ತು. ಈಗ ಅದು ಗುವಾಹಟಿ ಮೈದಾನದಲ್ಲಿ ನಡೆಯಲಿದೆ. ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯವು ಅಕ್ಟೋಬರ್ 3 ರಂದು ಬೆಂಗಳೂರಿನಲ್ಲಿ ನಡೆಯಬೇಕಿತ್ತು, ಈಗ ಅದು ಗುವಾಹಟಿಯಲ್ಲಿ ನಡೆಯಲಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹೇಶ್‌ ಶೆಟ್ಟಿ ತಿಮರೋಡಿ ಬಂಧನ; ಜನರ ಪ್ರಶ್ನೆಗಳಿಗೆ ಸರ್ಕಾರದ ಉತ್ತರ ಏನು?

ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯವು ಅಕ್ಟೋಬರ್ 20 ರಂದು ಕೊಲಂಬೊ ಮೈದಾನದಲ್ಲಿ ನಡೆಯಬೇಕಿತ್ತು, ಈಗ ಅದು ನವಿ ಮುಂಬೈ ಮೈದಾನದಲ್ಲಿ ನಡೆಯಲಿದೆ. ಇವುಗಳು ಮಾತ್ರವಲ್ಲದೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಭಾರತ ಹಾಗೂ ನ್ಯೂಜಿಲೆಂಡ್ (ಅಕ್ಟೋಬರ್ 23) ಮತ್ತು ಭಾರತ ಹಾಗೂ ಬಾಂಗ್ಲಾದೇಶ (ಅಕ್ಟೋಬರ್ 26) ನಡುವಿನ ಲೀಗ್ ಪಂದ್ಯಗಳು ಕೂಡ ನವಿ ಮುಂಬೈ ಮೈದಾನದಲ್ಲಿ ನಡೆಯಲಿವೆ.

ಉಳಿದಂತೆ ಮಹಿಳಾ ವಿಶ್ವಕಪ್ ಫೈನಲ್ ನವೆಂಬರ್ 2 ರಂದು ಕೊಲಂಬೊ ಅಥವಾ ನವಿ ಮುಂಬೈನಲ್ಲಿ ನಡೆಯಲಿದೆ. ಮೊದಲ ಸೆಮಿಫೈನಲ್ ಅಕ್ಟೋಬರ್ 29 ರಂದು ಗುವಾಹಟಿ ಅಥವಾ ಕೊಲಂಬೊದಲ್ಲಿ ಮತ್ತು ಎರಡನೇ ಸೆಮಿಫೈನಲ್ ಅಕ್ಟೋಬರ್ 30 ರಂದು ನವಿ ಮುಂಬೈನಲ್ಲಿ ನಡೆಯಲಿದೆ. ಪಾಕಿಸ್ತಾನ ಅರ್ಹತೆ ಪಡೆದರೆ, ಅದು ಕೊಲಂಬೊದಲ್ಲಿ ಮೊದಲ ಸೆಮಿಫೈನಲ್ ಅನ್ನು ಆಡುತ್ತದೆ. ಆ ಬಳಿಕ ಪಾಕಿಸ್ತಾನ ಫೈನಲ್ ತಲುಪಿದರೆ, ಫೈನಲ್ ಪಂದ್ಯ ಕೊಲಂಬೊದಲ್ಲಿ ನಡೆಯಲಿದೆ. ಪಾಕಿಸ್ತಾನ ಸೆಮಿಫೈನಲ್ ತಲುಪದಿದ್ದರೆ, ಎಲ್ಲಾ ನಾಕೌಟ್ ಪಂದ್ಯಗಳನ್ನು ಭಾರತದಲ್ಲಿ ನಡೆಸಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X