ಮೂರನೇ ಟೆಸ್ಟ್‌ | ಶತಕ ಬಾರಿಸಿ ಮಿಂಚಿದ ನಾಯಕ ರೋಹಿತ್ ಶರ್ಮಾ: ಸಾಥ್ ನೀಡಿದ ರವೀಂದ್ರ ಜಡೇಜಾ

Date:

Advertisements

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಇಂದಿನಿಂದ ಆರಂಭಗೊಂಡಿರುವ ಇಂಗ್ಲೆಂಡ್‌ ವಿರುದ್ಧದ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದಿದ್ದ ಭಾರತ ತಂಡ ಬ್ಯಾಟಿಂಗ್‌ ಆಯ್ಕೆ ಮಾಡಿತ್ತು.

ಆರಂಭದಲ್ಲೇ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ನಾಯಕ ರೋಹಿತ್ ಶರ್ಮಾರೊಂದಿಗೆ ಜೊತೆಯಾದ ರವೀಂದ್ರ ಜಡೇಜಾ ಉತ್ತಮ ಸಾಥ್ ನೀಡುವ ಮೂಲಕ ಉತ್ತಮ ಜೊತೆಯಾಟ ನಡೆಸಿದರು.

ಈ ನಡುವೆ ನಾಯಕ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂಗ್ಲೆಂಡ್ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಕರ್ಷಕ ಸೆಂಚುರಿ ಸಿಡಿಸಿದ್ದಾರೆ.

Advertisements

ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಅವರ ಸಮಯೋಚಿತ ಜತೆಯಾಟದ ನೆರವಿನಿಂದ ಟೀಂ ಇಂಡಿಯಾ ಆರಂಭಿಕ ಆಘಾತದಿಂದ ಪಾರಾಗಿದೆ.

ದಿಢೀರ್ ವಿಕೆಟ್ ಪತನದ ಆಘಾತ ಅನುಭವಿಸಿದ ಟೀಂ ಇಂಡಿಯಾ ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಜೊತೆಯಾಟ ಕೈಹಿಡಿಯಿತು. ರೋಹಿತ್ ಶರ್ಮಾ ದಿಟ್ಟ ಹೋರಾಟದ ಮೂಲಕ ಸೆಂಚುರಿ ಸಿಡಿಸಿದರು. ಟೆಸ್ಟ್ ಕ್ರಿಕೆಟ್‌ನಲ್ಲಿ 31ನೇ ಶತಕ ಸಿಡಿಸಿದ ಹೆಗ್ಗಳಿಕೆಗೆ ಪಾತ್ರರಾದರು.

ಈ ಮೂಲಕ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆರಂಭಿಕನಾಗಿ ಗರಿಷ್ಠ ಶತಕ ಸಿಡಿಸಿದ 5ನೇ ಬ್ಯಾಟ್ಸ್‌ಮನ್ ದಾಖಲೆ ಬರೆದರು. ಈ ಶತಕದ ಮೂಲಕ 217 ದಿನಗಳ ಬಳಿಕ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ಶತಕ ಸಿಡಿಸಿದ್ದಾರೆ.

ಸದ್ಯ ಟೀಮ್ ಇಂಡಿಯಾ ನಾಲ್ಕು ವಿಕೆಟ್ ಕಳೆದುಕೊಂಡು 234 ರನ್ ಗಳಿಸಿದೆ. ರೋಹಿತ್ ಶರ್ಮಾ 131 ರನ್ ಗಳಿಸಿ ಔಟ್ ಆದರು. ರವೀಂದ್ರ ಜಡೇಜಾ 78 ರನ್ ಬಾರಿಸಿ ಕ್ರೀಸ್‌ನಲ್ಲಿದ್ದಾರೆ. ಈ ಜೋಡಿಯು 202 ರನ್‌ಗಳ ಜೊತೆಯಾಟ ನಡೆಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

RCBಯದ್ದು ಕಳ್ಳ ಒಪ್ಪಂದ; ಆರ್‌ ಅಶ್ವಿನ್ ಬಹಿರಂಗ ಟೀಕೆ

2025ರ ಐಪಿಎಲ್‌ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

Download Eedina App Android / iOS

X