ನಾಲ್ಕನೇ ಟೆಸ್ಟ್‌ | ಕೈಕೊಟ್ಟ ಬ್ಯಾಟಿಂಗ್: ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾಗೆ ಹೀನಾಯ ಸೋಲು

Date:

Advertisements

ಆಸ್ಟ್ರೇಲಿಯಾ ವಿರುದ್ಧ ಮೆಲ್ಬೋರ್ನ್‌ನ ಎಂಸಿಜಿ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟೆಸ್ಟ್‌ನ ಕೊನೆಯ ದಿನ ಟೀಮ್ ಇಂಡಿಯಾದ ಬ್ಯಾಟಿಂಗ್ ವಿಭಾಗ ಕೈಕೊಟ್ಟ ಪರಿಣಾಮ 184 ರನ್‌ಗಳಿಂದ ಹೀನಾಯ ಸೋಲು ಅನುಭವಿಸಿದೆ.

ನಾಲ್ಕನೇ ಟೆಸ್ಟ್‌ನ ಗೆಲುವಿನೊಂದಿಗೆ ಪ್ಯಾಟ್ ಕಮ್ಮಿನ್ಸ್‌ ನೇತೃತ್ವದ ಆಸ್ಟ್ರೇಲಿಯಾ ತಂಡವು, ಐದು ಟೆಸ್ಟ್‌ ಪಂದ್ಯಗಳ ಸರಣಿಯಲ್ಲಿ 2-1 ಗೆಲುವಿನೊಂದಿಗೆ ಮುನ್ನಡೆ ಕಾಯ್ದುಕೊಂಡಿದೆ. ಕೊನೆಯ ಟೆಸ್ಟ್‌ ಪಂದ್ಯವು ಸಿಡ್ನಿಯಲ್ಲಿ ನಡೆಯಲಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಟೂರ್ನಿಯಲ್ಲಿ ಅರ್ಹತೆ ಗಿಟ್ಟಿಸಿಕೊಳ್ಳಲು ಸಿಡ್ನಿಯಲ್ಲಿ ನಡೆಯಲಿರುವ ಕೊನೆಯ ಟೆಸ್ಟ್‌ ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗವು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಒಂದು ವೇಳೆ ಸೋತರೆ ಅಥವಾ ಡ್ರಾ ಆದರೆ ಅರ್ಹತೆ ಕಳೆದುಕೊಳ್ಳಲಿದೆ.

Advertisements

ಮೆಲ್ಬೋರ್ನ್​ನಲ್ಲಿ ನಡೆದ ಬಾರ್ಡರ್ – ಗವಾಸ್ಕರ್ ಟ್ರೋಫಿ ಸರಣಿಯ ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯದಲ್ಲಿ ಆಸೀಸ್‌ ತನ್ನ ಮೊದಲ ಇನಿಂಗ್ಸ್‌ನಲ್ಲಿ 122.4 ಓವರ್‌ಗಳಲ್ಲಿ 474 ರನ್‌ಗಳಿಗೆ ಆಲೌಟ್ ಆಗಿತ್ತು. 311/6 ರನ್‌ನೊಂದಿಗೆ ಎರಡನೇ ದಿನದಾಟ ಆರಂಭಿಸಿದ್ದ ಆಸ್ಟ್ರೇಲಿಯಾವು ಸ್ಟೀವನ್‌ ಸ್ಮಿತ್‌ ಅವರ ಆಕರ್ಷಕ ಶತಕದ(140) ನೆರವಿನಿಂದಿಗೆ 470ರ ಗಡಿ ದಾಟಿತ್ತು.

ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ರೋಹಿತ್ ಬಳಗವು, ನಿತೀಶ್ ಕುಮಾರ್ ರೆಡ್ಡಿ ಹಾಗೂ ವಾಷಿಂಗ್ಟನ್ ಸುಂದರ್ ಉತ್ತಮ ಆಟವಾಡಿದ್ದರಿಂದ ಫಾಲೋ ಆನ್ ಭೀತಿಯಿಂದ ಪಾರಾಗಿತ್ತು. ಶನಿವಾರ ದಿನದಾಟದ ಕೊನೆಗೆ 9ಕ್ಕೆ 358 ರನ್ ಗಳಿಸಿದ್ದ ಭಾರತ ತಂಡವು ಭಾನುವಾರ ಹೆಚ್ಚು ಹೊತ್ತು ಆಡಲಿಲ್ಲ. ಈ ಮೊತ್ತಕ್ಕೆ 11 ರನ್‌ಗಳು ಸೇರಿದ ನಂತರ ಸ್ಪಿನ್ನರ್ ನೇಥನ್ ಲಯನ್ ಬೌಲಿಂಗ್‌ನಲ್ಲಿ ಮೊದಲ ಶತಕ ಬಾರಿಸಿ ಮಿಂಚಿದ್ದ (114 ರನ್) ನಿತೀಶ್ ಕುಮಾರ್ ರೆಡ್ಡಿ ಔಟಾದರು. ಟೀಮ್ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 369 ರನ್ ದಾಖಲಿಸಿತ್ತು. ಇದರಿಂದಾಗಿ ಆಸ್ಟ್ರೇಲಿಯಾ 105 ರನ್‌ಗಳ ಮುನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿತ್ತು.

ಮೊದಲ ಇನ್ನಿಂಗ್ಸ್‌ನಲ್ಲಿ 105 ರನ್‌ ಮುನ್ನಡೆ ಪಡೆದಿದ್ದ ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ 235 ರನ್‌ಗಳ ಗೆಲುವಿನ ಗುರಿಯನ್ನು ಭಾರತ ತಂಡಕ್ಕೆ ನೀಡಿತು. ಗುರಿ ಬೆನ್ನಟ್ಟಿದ ಭಾರತ 155 ರನ್‌ಗಳಿಗೆ ಸರ್ವ ಪತನವಾಗುವ ಮೂಲಕ ಅವಮಾನಕರ ಸೋಲು ಕಂಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

Download Eedina App Android / iOS

X