ವೆಸ್ಟ್‌ ಇಂಡೀಸ್‌ಗೆ 6 ವಿಕೆಟ್ ಜಯ; ಭಾರತ ತಂಡದ ಕಳಪೆ ಪ್ರದರ್ಶನ

Date:

Advertisements

ರೊಮಾರಿಯೋ ಶೆಫರ್ಡ್, ಗುಡಾಕೇಶ್ ಮೋಟಿ ಅವರ ಅಮೋಘ ಬೌಲಿಂಗ್ ಹಾಗೂ ನಾಯಕ ಶಾಯ್‌ ಹೋಪ್ ಮತ್ತು ಕೇಸಿ ಕಾರ್ಟಿ ಅವರ ಸಮಯೋಚಿತ ಬ್ಯಾಟಿಂಗ್‌ ನೆರವಿನಿಂದ ವೆಸ್ಟ್ ಇಂಡೀಸ್‌ ತಂಡ ಭಾರತದ ವಿರುದ್ಧ 6 ವಿಕೆಟ್‌ಗಳ ಅಂತರದಲ್ಲಿ ಗೆಲುವು ಸಾಧಿಸಿತು.

ಬಾರ್ಬಡೋಸ್‌ನ ಬ್ರಿಜ್‌ಟೌನ್‌ನಲ್ಲಿ ನಡೆದ ಎರಡನೆ ಏಕದಿನ ಪಂದ್ಯದಲ್ಲಿ ಭಾರತ ನೀಡಿದ 181 ರನ್‌ಗಳ ಸುಲಭ ಗುರಿಯನ್ನು ಬೆನ್ನಟ್ಟಿದ ವೆಸ್ಟ್ ಇಂಡೀಸ್‌ ತಂಡ 36.4 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಜಯಗಳಿಸಿ ಸರಣಿಯನ್ನು ಸಮಬಲ ಮಾಡಿಕೊಂಡಿದೆ.

181 ರನ್‌ಗಳ ಸುಲಭ ಗುರಿಯೊಂದಿಗೆ ಇನ್ನಿಂಗ್ಸ್‌ ಆರಂಭಿಸಿದ ವಿಂಡೀಸ್ ಆರಂಭಿಕರಾದ​ ಕೈಲ್ ಮೇಯರ್ಸ್ (36) ಮತ್ತು ಬ್ರಾಂಡನ್ ಕಿಂಗ್ (15) ವೇಗದ ಆರಂಭ ನೀಡಿದರು. ಕೇವಲ 8.2 ಓವರ್‌ಗಳಲ್ಲಿ 53 ರನ್‌ಗಳ ಜೊತೆಯಾಟವಾಡಿದರು. ಇವರಿಬ್ಬರ ಜೋಡಿಯನ್ನು ವೇಗಿ ಶಾರ್ದೂಲ್ ಠಾಕೂರ್ 9ನೇ ಓವರ್‌ನಲ್ಲಿ ಮುರಿದರು. ಬಳಿಕ 13 ನೇ ಓವರ್‌ನಲ್ಲಿ ಅಲಿಕ್ ಅಥಾನಾಜ್(6) ಅವರನ್ನು ಪೆವಿಲಿಯನ್‌ಗೆ ಕಳಿಸುವ ಮೂಲಕ ಶಾರ್ದೂಲ್ ಮೂರು ವಿಕೆಟ್ ಕಬಳಿಸಿದರು. ಆ ನಂತರ ಬಂದ ಶಿಮ್ರೋನ್ ಹೆಟ್ಮೆಯರ್(9) ಹೆಚ್ಚು ಹೊತ್ತು ನಿಲ್ಲದೆ ಕುಲದೀಪ್​ ಯಾದವ್​ಗೆ ಔಟಾದರು.

Advertisements

ನಾಲ್ಕು ವಿಕೆಟ್ ಕಳೆದುಕೊಂಡ ವಿಂಡೀಸ್‌ಗೆ ನಾಯಕ ಶಾಯ್ ಹೋಪ್ ಹಾಗೂ ಯುವ ಬ್ಯಾಟ್ಸ್‌ಮನ್ ಕೇಸಿ ಕಾರ್ಟಿ ಅವರ 91 ರನ್‌ಗಳ ಜೊತೆಯಾಟದಿಂದ ತಂಡವನ್ನು ಗೆಲುವಿನ ದಡಕ್ಕೆ ಸೇರಿಸಿದರು. ಶಾಯ್ ಹೋಪ್(80 ಎಸೆತ, ಎರಡು ಬೌಂಡರಿ,ಎರಡು ಸಿಕ್ಸರ್) ಅಜೇಯ 63 ರನ್ ಬಾರಿಸಿದರೆ, ಯುವ ಬ್ಯಾಟ್ಸ್‌ಮನ್ ಕೇಸಿ ಕಾರ್ಟಿ ಕೂಡ ಅಜೇಯ 48(65 ಚೆಂಡು, 4 ಬೌಂಡರಿ) ರನ್​ಗಳ ಕೊಡುಗೆ ನೀಡಿದರು.

ಹಾರ್ದಿಕ್‌ ಪಾಂಡ್ಯ ಸಾರಥ್ಯ

ಇದಕ್ಕೂ ಮೊದಲು ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಅವರ ವಿಶ್ರಾಂತಿಯೊಂದಿಗೆ ತಂಡದ ಸಾರಥ್ಯ ವಹಿಸಿಕೊಂಡ ಹಾರ್ದಿಕ್‌ ಪಾಂಡ್ಯ ಟಾಸ್ ಸೋತು ಬ್ಯಾಟಿಂಗ್ ಜವಾಬ್ದಾರಿ ವಹಿಸಿಕೊಂಡರು.

ಮಧ್ಯ ಪ್ರದೇಶದಲ್ಲಿ ಅತಿ ಹೆಚ್ಚು ಹುಲಿಗಳು; ಕರ್ನಾಟಕಕ್ಕೆ ಎರಡನೇ ಸ್ಥಾನ

ಟೀಂ ಇಂಡಿಯಾ ಪರ ಆರಂಭಿಕರಾಗಿ ಬಂದ ಇಶಾನ್ ಕಿಶನ್ (55) ಅಮೋಘ ಅರ್ಧಶತಕ ಬಾರಿಸಿ, ಗಿಲ್ ಅವರೊಂದಿಗೆ 90 ರನ್‌ಗಳ ಜೊತೆಯಾಟವಾಡಿದರು. ಶುಭಮನ್‌ ಗಿಲ್ (34) ಕೂಡ ಉತ್ತಮ ಆರಂಭ ಪಡೆದುಕೊಂಡರಾದರೂ ದೊಡ್ಡ ಇನ್ನಿಂಗ್ಸ್ ಕಟ್ಟಲು ಸಾಧ್ಯವಾಗಲಿಲ್ಲ. ಗಿಲ್ ಔಟಾದ ನಂತರ ಇಬ್ಬರ ಜೊತೆಯಾಟ ಮುರಿದುಕೊಂಡಿತು. ಇಲ್ಲಿಂದ ಭಾರತ ತಂಡದ ಪೆವಿಲಿಯನ್ ಪರೇಡ್ ಶುರುವಾಯಿತು.

ಹನ್ನೊಂದರ ಬಳಗದಲ್ಲಿ ಅವಕಾಶ ಪಡೆದಿದ್ದ ಸಂಜು ಸ್ಯಾಮ್ಸನ್ ಮತ್ತು ಅಕ್ಷರ್ ಪಟೇಲ್​ಗೆ ಬ್ಯಾಟಿಂಗ್ ಬಡ್ತಿ ಸಿಕ್ಕಿತ್ತು. ಆದರೆ ಇಬ್ಬರು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲಿಲ್ಲ. ಸಂಜು ಸ್ಯಾಮ್ಸನ್ 9 ರನ್ ಗಳಿಸಿ ಔಟಾದರು. ಅಕ್ಷರ್ ಪಟೇಲ್ (1) ಬಂದಷ್ಟೇ ವೇಗವಾಗಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು. ನಾಯಕ ಹಾರ್ದಿಕ್ ಪಾಂಡ್ಯ ಕೂಡ 7 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರೆ, ಸ್ಟಾರ್‌ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ 24 ರನ್ ಗಳಿಸಿ ತಮ್ಮ ವಿಕೆಟ್ ಒಪ್ಪಿಸಿದರು.

ರವೀಂದ್ರ ಜಡೇಜಾ(10) ಮತ್ತು ಶಾರ್ದೂಲ್ ಠಾಕೂರ್(16) ಕೂಡ ಹೆಚ್ಚಿನ ಹೊತ್ತು ನಿಲ್ಲಲಿಲ್ಲ. ಟೀಂ ಇಂಡಿಯಾವನ್ನು ಕಾಡಿದ ವೆಸ್ಟ್ ಇಂಡೀಸ್ ಬೌಲರ್​ಗಳಾದ ಗುಡ್ಕೇಶ್ ಮೋತಿ (36/3) ಮತ್ತು ವೇಗದ ಬೌಲರ್ ರೊಮಾರಿಯೊ ಶೆಫರ್ಡ್ (37/3) ವಿಕೆಟ್ ಪಡೆದರೆ,ಅಲ್ಜಾರಿ ಜೊಸೆಫ್ (35/2) ವಿಕೆಟ್ ಪಡೆದು ಭಾರತ ತಂಡವನ್ನು 181 ರನ್‌ಗಳಿಗೆ ಆಲೌಟ್‌ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X