ಐಪಿಎಲ್ 2023 | ಫೈನಲ್‌ನಲ್ಲಿ ಧೋನಿ ಪಡೆಗೆ 215 ಗುರಿ ನೀಡಿದ ಗುಜರಾತ್‌ ಟೈಟಾನ್ಸ್, ಚೆನ್ನೈಗೆ ಮಳೆ ಕಾಟ

Date:

Advertisements

ಸಾಯಿ ಸುದರ್ಶನ್ ಸ್ಫೋಟಕ ಬ್ಯಾಟಿಂಗ್ ಹಾಗೂ ವೃದ್ಧಿಮಾನ್ ಸಾಹ ಆಕರ್ಷಕ ಅರ್ಧ ಶತಕದ ನೆರವಿನಿಂದ ಐಪಿಎಲ್‌ 2023ರ 16ನೇ ಆವೃತ್ತಿಯ ಫೈನಲ್‌ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್ ತಂಡ ಚೆನ್ನೈ ಸೂಪರ್‌ ಕಿಂಗ್ಸ್ ತಂಡಕ್ಕೆ 215 ರನ್‌ ಗುರಿ ನೀಡಿದೆ. ಆಟ ಆರಂಭವಾದರೂ ಚೆನ್ನೈಗೆ ಮಳೆ ಕಾಟ ತಡೆಯೊಡ್ಡಿದೆ.

ಟಾಸ್ ಗೆದ್ದ ನಾಯಕ ಧೋನಿ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಶುಭಮನ್ ಗಿಲ್ ಹಾಗೂ ವೃದ್ದಿಮಾನ್ ಸಾಹ ಜೊತೆಯಾಟಕ್ಕೆ ಚೆನ್ನೈ ಬೌಲರ್‌ಗಳು ಸುಸ್ತಾದರು. ಕಳೆದ ಕೆಲ ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾಗಿದ್ದ ವೃದ್ಧಿಮಾನ್‌ ಸಾಹ ಫೈನಲ್‌ನಲ್ಲಿ ಅಬ್ಬರಿಸಿದರು. 

ಆರಂಭದಲ್ಲಿ 20 ಚೆಂಡುಗಳಲ್ಲಿ 7 ಬೌಂಡರಿಗಳೊಂದಿಗೆ  39  ರನ್ ಸಿಡಿಸಿ ಶುಭಮನ್ ಗಿಲ್, ಧೋನಿ ಮಿಂಚಿನ ಸ್ಟಂಪಿಂಗ್‌ಗೆ ಔಟ್ ಆದರು. ಗಿಲ್ ವಿಕೆಟ್ ಪತನ ಬಳಿಕ ಸಾಹ ಹಾಗೂ ಸಾಯಿ ಸುದರ್ಶನ್ ಆರ್ಭಟ ಆರಂಭಗೊಂಡಿತು. ಸಾಹ 39 ಎಸೆತದಲ್ಲಿ 5 ಬೌಂಡರಿ 1 ಸಿಕ್ಸರ್‌ನೊಂದಿಗೆ 54 ರನ್ ಗಳಿಸಿ ಔಟಾದರು. ಆದರೆ ಸಾಯಿ ಸುದರ್ಶನ್ ಸ್ಫೋಟಕ ಬ್ಯಾಟಿಂಗ್ ಮುಂದುವರೆಸಿದರು. 

Advertisements

ಈ ಸುದ್ದಿ ಓದಿದ್ದೀರಾ? ಐಪಿಎಲ್‌ 2023 | ಫೈನಲ್‌ನಲ್ಲಿ ಮತ್ತೆ ಮಳೆ ಬಂದರೆ ಸೂಪರ್‌ ಓವರ್‌? ನಿಯಮ ಏನು ಹೇಳುತ್ತದೆ?

ಬೌಂಡರಿ , ಸಿಕ್ಸರ್ ಆಟದ ಮೂಲಕ ಚೆನ್ನೈ ಬೌಲರ್‌ಗಳ ಬೆವರಿಳಿಸಿದರು. ಶತಕದ ಸಮೀಪದಲ್ಲಿದ್ದಾಗ ಸಾಯಿ ಸುದರ್ಶನ್ ಪತಿರಾಣ ಬೌಲಿಂಗ್‌ ಎಲ್‌ಬಿ ಬಲೆಗೆ ಬಿದ್ದರು. 47 ಎಸೆತದಲ್ಲಿ 8 ಬೌಂಡರಿ ಹಾಗೂ 6 ಸಿಕ್ಸರ್ ಮೂಲಕ 96 ರನ್ ಸಿಡಿಸಿದರು.

ರಶೀದ್ ಖಾನ್ ಈ ಪಂದ್ಯದಲ್ಲಿ ಅಬ್ಬರಿಸಲಿಲ್ಲ. ಆದರೆ ನಾಯಕ ಹಾರ್ದಿಕ್ ಪಾಂಡ್ಯ 12 ಎಸೆತದಲ್ಲಿ ಅಜೇಯ 21 ರನ್ ಸಿಡಿಸಿದರು. ಅಂತಿಮವಾಗಿ ಗುಜರಾತ್ ಟೈಟಾನ್ಸ್ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್ ಪೇರಿಸಿತು.

ಚೆನ್ನೈ ಬ್ಯಾಟಿಂಗ್ ಆರಂಭಗೊಂಡು ಮೊದಲ ಓವರ್‌ನ ಮೂರು ಎಸೆತದಲ್ಲಿ ನಾಲ್ಕು ರನ್‌ ಗಳಿಸಿತ್ತು. ಅಷ್ಟರಲ್ಲೇ ಮಳೆ ಆರಂಭವಾಗಿ ಪಂದ್ಯವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X