ಐಪಿಎಲ್‌ 2023 | ಅಬ್ಬರಿಸಿದ ಋತುರಾಜ್, ಕಾನ್ವೆ; ಲಖನೌ ಗೆಲುವಿಗೆ ಸವಾಲಿನ ಮೊತ್ತ

Date:

Advertisements

ಆರಂಭಿಕ ಆಟಗಾರರಾದ ಋತುರಾಜ್‌ ಹಾಗೂ ಡಿವೋನ್‌ ಕಾನ್ವೆ ಅವರ ಭರ್ಜರಿ ಬ್ಯಾಟಿಂಗ್‌ನಿಂದ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಲಖನೌ ಸೂಪರ್‌ ಜೈಂಟ್ಸ್ ವಿರುದ್ಧ 7 ವಿಕೆಟ್ ನಷ್ಟಕ್ಕೆ 217 ರನ್‌ಗಳ ಭರ್ಜರಿ ಮೊತ್ತ ದಾಖಲಿಸಿದೆ.

ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ಲಖನೌ ವಿರುದ್ಧದ ಐಪಿಎಲ್‌ 16ನೇ ಆವೃತ್ತಿಯ ಆರನೇ ಪಂದ್ಯದಲ್ಲಿ ಋತುರಾಜ್‌ ಹಾಗೂ ಕಾನ್ವೆ ಎರಡನೇ ಓವರ್‌ನಿಂದಲೇ ಬ್ಯಾಟ್‌ ಬೀಸಲು ಶುರು ಮಾಡಿದರು. ಕಾನ್ವೆ, ಐದನೇ ಓವರ್‌ನಲ್ಲಂತೂ ಕೆ ಗೌತಮ್‌ ಬೌಲಿಂಗ್‌ನಲ್ಲಿ ಮೂರು ಸಿಕ್ಸರ್‌ ಸ್ಫೋಟಿಸಿದರು.

ಇವರಿಬ್ಬರ ಜೋಡಿ ಮಾರ್ಕ್‌ ವುಡ್‌ ಬೌಲಿಂಗ್‌ನಲ್ಲಿ ಆರನೇ ಓವರ್‌ನಲ್ಲಿ 19 ಹಾಗೂ ಎಂಟನೇ ಓವರ್‌ನಲ್ಲಿ 15 ರನ್‌ ಬಾರಿಸಿದರು. ಹತ್ತನೆ ಓವರ್‌ನಲ್ಲಿ ರವಿ ಬಿಷ್ಣೋಯಿ ಬೌಲಿಂಗ್‌ನಲ್ಲಿ ಔಟಾದ ಋತುರಾಜ್‌ 31 ಎಸೆತಗಳಲ್ಲಿ 4 ಭರ್ಜರಿ ಸಿಕ್ಸರ್ ಮೂರು ಬೌಂಡರಿಗಳೊಂದಿಗೆ 57 ರನ್‌ ಸಿಡಿಸಿದ್ದರು.

Advertisements

ಡಿವೋನ್‌ ಕಾನ್ವೆ ಕೂಡ ತಾವೇನು ಕಡಿಮೆಯಿಲ್ಲದಂತೆ 29 ಚಂಡುಗಳಲ್ಲಿ 5 ಬೌಂಡರಿ, 2 ಅಮೋಘ ಸಿಕ್ಸರ್‌ನೊಂದಿಗೆ 47 ರನ್‌ ಪೇರಿಸಿದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡಲು ಬಂದ ಶಿವಂ ದುಬೆ ಕೇವಲ 16 ಚಂಡುಗಳಲ್ಲಿ 3 ಸೊಗಸಾದ ಸಿಕ್ಸರ್ ಹಾಗೂ ಒಂದು ಬೌಂಡರಿಯೊಂದಿಗೆ 27 ರನ್‌ ಕಲೆ ಹಾಕಿದರು.

ಆರನೇ ಕ್ರಮಾಂಕದಲ್ಲಿ ಆಗಮಿಸಿದ ಅಂಬಾಟಿ ರಾಯುಡು 14 ಚಂಡುಗಳಲ್ಲಿ 2 ಸಿಕ್ಸರ್‌ ಹಾಗೂ 2 ಬೌಂಡರಿ ಮೂಲಕ 27 ರನ್‌ ಗಳಿಸಿ ಕೊನೆಯಲ್ಲಿ ಪ್ರೇಕ್ಷಕರಿಗೆ ರಸದೌತಣ ನೀಡಿದರು. ನಾಯಕ ಧೋನಿ ಕೂಡ 3 ಎಸೆತಗಳಲ್ಲಿ 2 ಸಿಕ್ಸರ್‌ ಮೂಲಕ 12 ರನ್‌ ಸ್ಪೋಟಿಸಿದರು.

ಲಖನೌ ಪರ ರವಿ ಬಿಷ್ಣೋಯಿ 28/3 ಗಳಿಸಿ ಯಶಸ್ವಿ ಬೌಲರ್‌ ಎನಿಸಿದರೆ, ಮಾರ್ಕ್‌ವುಡ್‌ ಹಾಗೂ ಆವೇಶ್‌ ಖಾನ್‌ ತಲಾ ಒಂದೊಂದು ವಿಕೆಟ್ ಕಬಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X