ಐಪಿಎಲ್‌ 2023 | ಅಬ್ಬರಿಸಿದ ಋತುರಾಜ್, ಕಾನ್ವೆ; ಲಖನೌ ಗೆಲುವಿಗೆ ಸವಾಲಿನ ಮೊತ್ತ

Date:

ಆರಂಭಿಕ ಆಟಗಾರರಾದ ಋತುರಾಜ್‌ ಹಾಗೂ ಡಿವೋನ್‌ ಕಾನ್ವೆ ಅವರ ಭರ್ಜರಿ ಬ್ಯಾಟಿಂಗ್‌ನಿಂದ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಲಖನೌ ಸೂಪರ್‌ ಜೈಂಟ್ಸ್ ವಿರುದ್ಧ 7 ವಿಕೆಟ್ ನಷ್ಟಕ್ಕೆ 217 ರನ್‌ಗಳ ಭರ್ಜರಿ ಮೊತ್ತ ದಾಖಲಿಸಿದೆ.

ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ಲಖನೌ ವಿರುದ್ಧದ ಐಪಿಎಲ್‌ 16ನೇ ಆವೃತ್ತಿಯ ಆರನೇ ಪಂದ್ಯದಲ್ಲಿ ಋತುರಾಜ್‌ ಹಾಗೂ ಕಾನ್ವೆ ಎರಡನೇ ಓವರ್‌ನಿಂದಲೇ ಬ್ಯಾಟ್‌ ಬೀಸಲು ಶುರು ಮಾಡಿದರು. ಕಾನ್ವೆ, ಐದನೇ ಓವರ್‌ನಲ್ಲಂತೂ ಕೆ ಗೌತಮ್‌ ಬೌಲಿಂಗ್‌ನಲ್ಲಿ ಮೂರು ಸಿಕ್ಸರ್‌ ಸ್ಫೋಟಿಸಿದರು.

ಇವರಿಬ್ಬರ ಜೋಡಿ ಮಾರ್ಕ್‌ ವುಡ್‌ ಬೌಲಿಂಗ್‌ನಲ್ಲಿ ಆರನೇ ಓವರ್‌ನಲ್ಲಿ 19 ಹಾಗೂ ಎಂಟನೇ ಓವರ್‌ನಲ್ಲಿ 15 ರನ್‌ ಬಾರಿಸಿದರು. ಹತ್ತನೆ ಓವರ್‌ನಲ್ಲಿ ರವಿ ಬಿಷ್ಣೋಯಿ ಬೌಲಿಂಗ್‌ನಲ್ಲಿ ಔಟಾದ ಋತುರಾಜ್‌ 31 ಎಸೆತಗಳಲ್ಲಿ 4 ಭರ್ಜರಿ ಸಿಕ್ಸರ್ ಮೂರು ಬೌಂಡರಿಗಳೊಂದಿಗೆ 57 ರನ್‌ ಸಿಡಿಸಿದ್ದರು.

ಡಿವೋನ್‌ ಕಾನ್ವೆ ಕೂಡ ತಾವೇನು ಕಡಿಮೆಯಿಲ್ಲದಂತೆ 29 ಚಂಡುಗಳಲ್ಲಿ 5 ಬೌಂಡರಿ, 2 ಅಮೋಘ ಸಿಕ್ಸರ್‌ನೊಂದಿಗೆ 47 ರನ್‌ ಪೇರಿಸಿದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡಲು ಬಂದ ಶಿವಂ ದುಬೆ ಕೇವಲ 16 ಚಂಡುಗಳಲ್ಲಿ 3 ಸೊಗಸಾದ ಸಿಕ್ಸರ್ ಹಾಗೂ ಒಂದು ಬೌಂಡರಿಯೊಂದಿಗೆ 27 ರನ್‌ ಕಲೆ ಹಾಕಿದರು.

ಆರನೇ ಕ್ರಮಾಂಕದಲ್ಲಿ ಆಗಮಿಸಿದ ಅಂಬಾಟಿ ರಾಯುಡು 14 ಚಂಡುಗಳಲ್ಲಿ 2 ಸಿಕ್ಸರ್‌ ಹಾಗೂ 2 ಬೌಂಡರಿ ಮೂಲಕ 27 ರನ್‌ ಗಳಿಸಿ ಕೊನೆಯಲ್ಲಿ ಪ್ರೇಕ್ಷಕರಿಗೆ ರಸದೌತಣ ನೀಡಿದರು. ನಾಯಕ ಧೋನಿ ಕೂಡ 3 ಎಸೆತಗಳಲ್ಲಿ 2 ಸಿಕ್ಸರ್‌ ಮೂಲಕ 12 ರನ್‌ ಸ್ಪೋಟಿಸಿದರು.

ಲಖನೌ ಪರ ರವಿ ಬಿಷ್ಣೋಯಿ 28/3 ಗಳಿಸಿ ಯಶಸ್ವಿ ಬೌಲರ್‌ ಎನಿಸಿದರೆ, ಮಾರ್ಕ್‌ವುಡ್‌ ಹಾಗೂ ಆವೇಶ್‌ ಖಾನ್‌ ತಲಾ ಒಂದೊಂದು ವಿಕೆಟ್ ಕಬಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದೇವರು ಆತನಿಗೆ ಮರುಜನ್ಮ ನೀಡಿದ್ದಾನೆ’: ಪ್ರಾಣ ಉಳಿಸಿದ ನಂತರ ವಿಡಿಯೋ ಪೋಸ್ಟ್ ಮಾಡಿದ ಶಮಿ

ಇತ್ತೀಚಿಗೆ ನಡೆದ ಏಕದಿನ ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಭಾರತ...

ಟಿ20 | ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾಗೆ ರೋಚಕ ಗೆಲುವು: ಜೋಶ್ ಇಂಗ್ಲಿಸ್ ಶತಕ ವ್ಯರ್ಥ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 2 ವಿಕೆಟ್...

ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ 18.7 ಲಕ್ಷ ರೂ. ವಂಚನೆ, ದೂರು ದಾಖಲು

ಉತ್ತರ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ...

ಪಾಪಿಗಳು ಹಾಜರಾದ ಕಾರಣ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಸೋತಿದೆ: ಮಮತಾ ಬ್ಯಾನರ್ಜಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಂತರ ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ...