ಸೇರಿ ಒಂದೇ ವಾರಕ್ಕೆ ವೈಎಸ್ಆರ್‌ಸಿಪಿ ಪಕ್ಷ ಬಿಟ್ಟ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು

Date:

Advertisements

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ವೈಎಸ್‌ಆರ್‌ ಕಾಂಗ್ರೆಸ್ ಪಕ್ಷ ತ್ಯಜಿಸಿದ್ದಾರೆ. ಡಿ.28ರಂದು ಆಂಧ್ರ ಮುಖ್ಯಮಂತ್ರಿ ವೈಎಸ್‌ಆರ್‌ ಜಗನ್‌ ನೇತೃತ್ವದಲ್ಲಿ ಪಕ್ಷಕ್ಕೆ ಸೇರಿದ್ದರು.

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ರಾಯುಡು, “ನಾನು ವೈಎಸ್‌ಆರ್‌ಸಿಪಿ ಪಕ್ಷ ತ್ಯಜಿಸಲು ನಿರ್ಧರಿಸಿರುವುದಾಗಿ ಎಲ್ಲರಿಗೂ ತಿಳಿಸುತ್ತಿದ್ದೇನೆ. ರಾಜಕೀಯದಿಂದ ಸ್ವಲ್ಪ ಸಮಯ ದೂರವುಳಿಯಲಿದ್ದು, ಸೂಕ್ತ ಸಮಯದಲ್ಲಿ ಮುಂದಿನ ಕ್ರಮಗಳ ಬಗ್ಗೆ ತಿಳಿಸುತ್ತೇನೆ” ಎಂದು ತಿಳಿಸಿದ್ದಾರೆ.

ಗಂಟೂರು ಮೂಲದವರಾದ ರಾಯುಡು, ಟೀಂ ಇಂಡಿಯಾ, ಐಪಿಎಲ್‌ನ ಸಿಎಸ್‌ಕೆ, ಮುಂಬೈ ಇಂಡಿಯನ್ಸ್‌ ಪರ ಮಧ್ಯಮ ಕ್ರಮಾಂಕದ ಆಟಗಾರನಾಗಿ ಹಲವು ಪಂದ್ಯಗಳನ್ನು ಆಡಿದ್ದರು.

Advertisements

2019ರ ಜುಲೈನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಹಾಗೂ 2023ರ ಮೇನಲ್ಲಿ ಐಪಿಎಲ್‌ಗೆ ನಿವೃತ್ತಿ ಘೋಷಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

ಅಂಬಟಿ ಮೊದಲಿನಿಂದಲೂ ಆಂಧ್ರದಲ್ಲಿ ವೈಎಸ್‌ಆರ್‌ಸಿಪಿ ಪರ ನಿಂತಿದ್ದರು. ಸರಕಾರ ಕೈಗೊಂಡ ಕೆಲವು ಕಾರ್ಯಕ್ರಮಗಳಲ್ಲೂ ಭಾಗವಹಿಸಿದ್ದರು. ಪಕ್ಷದ ಅಭಿವೃದ್ಧಿ, ಕಲ್ಯಾಣ ಕಾರ್ಯಕ್ರಮಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ಎಂದಿದ್ದರು. ರಾಯುಡು ಅವರು ಆಂಧ್ರದ ಶಾಸಕ ಅಥವಾ ಸಂಸದ ಸ್ಥಾನಕ್ಕೆ ಸ್ಪರ್ಧಿಸುತ್ತಾರೆ ಎಂಬ ಪ್ರಚಾರ ಕೂಡ ಎಲ್ಲಡೆ ಹರಿದಾಡುತ್ತಿತ್ತು.

ಆದರೆ, ಅವರು ಗುಂಟೂರು ಸಂಸದ ಸ್ಥಾನಕ್ಕೆ ಸ್ಪರ್ಧಿಸಲು ಆಸಕ್ತಿ ತೋರಿದ್ದು, ಈ ಬಗ್ಗೆ ವೈಎಸ್‌ಆರ್‌ಸಿಪಿ ಹೈಕಮಾಂಡ್‌ನಿಂದ ಸ್ಪಷ್ಟ ಭರವಸೆ ಸಿಗದ ಕಾರಣ ಪಕ್ಷ ಬಿಟ್ಟಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X