ಐಪಿಎಲ್ 2023 | ಕಾಯುವಿಕೆಗೆ ಅಂತ್ಯ; ಅರ್ಜುನ್ ತೆಂಡೂಲ್ಕರ್ ಐಪಿಎಲ್ ಪದಾರ್ಪಣೆ

Date:

Advertisements

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಕೊನೆಗೂ ಐಪಿಎಲ್ ಟೂರ್ನಿಗೆ ಪದಾರ್ಪಣೆ ಮಾಡಿದ್ದಾರೆ.

ಕಳೆದ ಕೆಲ ವರ್ಷಗಳಿದ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಭಾಗವಾಗಿದ್ದ ಅರ್ಜುನ್, ಭಾನುವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೊಚ್ಚಲ ಪಂದ್ಯವನ್ನಾಡುವ ಅವಕಾಶ ಪಡೆದಿದ್ದಾರೆ.

ಮುಂಬೈನ ವಾಂಖೆಡೆ ಮೈದಾನದಲ್ಲಿ ನಾಯಕ ರೋಹಿತ್​ ಶರ್ಮಾ, ಕ್ಯಾಪ್​ ನೀಡುವ ಮೂಲಕ ಅರ್ಜುನ್’ರನ್ನು ಮೊದಲ ಬಾರಿಗೆ ಆಡುವ ಹನ್ನೊಂದರ ಬಳಗಕ್ಕೆ ಬರಮಾಡಿಕೊಂಡರು. ಈ ವೇಳೆ ಸಹೋದರಿ ಸಾರಾ ತೆಂಡೂಲ್ಕರ್​ ಚಪ್ಪಾಳೆ ತಟ್ಟುವ ಮೂಲಕ ಅಭಿನಂದಿಸಿದರು.

Advertisements

ಈ ಸುದ್ದಿ ಓದಿದ್ದೀರಾ?: ಐಪಿಎಲ್ 2023 | ಮಹಿಳಾ ಚಾಂಪಿಯನ್ ತಂಡದ ಜೆರ್ಸಿ ಧರಿಸಲಿರುವ ಮುಂಬೈ ಇಂಡಿಯನ್ಸ್

ಕಾಕತಾಳೀಯವೆಂದರೆ ಸಚಿನ್ ತೆಂಡೂಲ್ಕರ್ ಅವರು ಮುಂಬೈ ಇಂಡಿಯನ್ಸ್ ಪರ‌ ಆಡುತ್ತಿದ್ದ ವೇಳೆ, ಐಪಿಎಲ್‌ನಲ್ಲಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಮೊದಲ ಬಾರಿಗೆ ಬೌಲಿಂಗ್ ಮಾಡಿದ್ದರು. ತಮ್ಮ ಚೊಚ್ಚಲ ಓವರ್‌ನಲ್ಲಿ ಸಚಿನ್ 5 ರನ್ ಬಿಟ್ಟು ಕೊಟ್ಟಿದ್ದರು. ಭಾನುವಾರದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಮೊದಲ ಓವರ್ ಎಸೆದ ಅರ್ಜುನ್ ತೆಂಡೂಲ್ಕರ್ 5 ರನ್ ಬಿಟ್ಟುಕೊಟ್ಟರು.

2022ರ ಐಪಿಎಲ್ ಮೆಗಾ ಹರಾಜಿನಲ್ಲಿ ₹30 ಲಕ್ಷಕ್ಕೆ ಬಿಡ್ ಮಾಡುವ ಮೂಲಕ ಅರ್ಜುನ್ ತೆಂಡೂಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ ತಂಡ ತನ್ನಲ್ಲೇ ಉಳಿಸಿಕೊಂಡಿತ್ತು.

ಇದಕ್ಕೂ ಮೊದಲು 2021ರಲ್ಲಿ ಮುಂಬೈ ತಂಡವು ಅವರನ್ನು ₹20 ಲಕ್ಷ ಮೂಲ ಬೆಲೆಗೆ ಖರೀದಿಸಿತ್ತು.

ಕಳೆದ ಆವೃತ್ತಿಯ ರಣಜಿ ಟ್ರೋಫಿಯಲ್ಲಿ ಅರ್ಜುನ್ ತೆಂಡೂಲ್ಕರ್ ಗೋವಾ ಪರ ಪದಾರ್ಪಣ ಪಂದ್ಯದಲ್ಲೇ ಶತಕ ಬಾರಿಸುವ ಮೂಲಕ ತಂದೆ ಸಚಿನ್​ ಅವರ ದಾಖಲೆ ಸರಿಗಟ್ಟಿದ್ದರು.

ಇದುವರೆಗೆ 7 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವ ಅರ್ಜುನ್ 12 ವಿಕೆಟ್ ಪಡೆದಿದ್ದು,‌ ಬ್ಯಾಟಿಂಗ್‌ನಲ್ಲಿ 233 ರನ್ ಗಳಿಸಿದ್ದಾರೆ.

​ಕೆಕೆಆರ್ ವಿರುದ್ಧದ ಭಾನುವಾರದ ಪಂದ್ಯದಲ್ಲಿ ಟಾಸ್​ ಗೆದ್ದ ಮುಂಬೈ ಇಂಡಿಯನ್ಸ್​ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ.

ತಂಡದ ಖಾಯಂ ನಾಯಕ ರೋಹಿತ್​ ಶರ್ಮ ಕ್ಷೇತ್ರ ರಕ್ಷಣೆ ಸಂದರ್ಭ ಮೈದಾನಕ್ಕೆ ಇಳಿಯದ ಕಾರಣ ಸೂರ್ಯಕುಮಾರ್​ ಯಾದವ್​ ತಂಡವನ್ನು ಮುನ್ನಡೆಸಿದರು.

ಮುಂಬೈ vs ಕೆಕೆಆರ್

ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಆವೃತ್ತಿಯ 22ನೇ ಪಂದ್ಯ ಅಭಿಮಾನಿಗಳಿಗೆ ವಿಶೇಷ ಅನುಭವ ನೀಡಲಿದೆ.

ಹೆಣ್ಣು ಮಕ್ಕಳಿಗೆ ವಿಶೇಷ ಗೌರವ ನೀಡುವ ಉದ್ದೇಶದಿಂದ, ಇತ್ತೀಚೆಗಷ್ಟೇ ಮುಕ್ತಾಯ ಕಂಡ ಚೊಚ್ಚಲ ಪ್ರೀಮಿಯರ್‌ ಲೀಗ್‌‌ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟವನ್ನೇರಿರುವ ಮುಂಬೈ ಇಂಡಿಯನ್ಸ್ ಮಹಿಳಾ ತಂಡದ ಜೆರ್ಸಿಯನ್ನು ಧರಿಸಿ ಭಾನುವಾರ ರೋಹಿತ್ ಶರ್ಮಾ ಪಡೆ ವಾಂಖೆಡೆಯಲ್ಲಿ ಕಣಕ್ಕಿಳಿದಿದೆ.

ಮುಂಬೈ ಇಂಡಿಯನ್ಸ್ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಜೊತೆ ಟಾಸ್‌ನಲ್ಲಿ ಭಾಗವಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X