ಟೀಮ್ ಇಂಡಿಯಾ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಬಂಧನಕ್ಕೆ ವಾರೆಂಟ್

Date:

Advertisements

ತಮ್ಮ ಕಂಪನಿಯ ಉದ್ಯೋಗಿಗಳಿಗೆ ಮತ್ತು ಸರ್ಕಾರಕ್ಕೆ ವಂಚಿಸಿದ ಆರೋಪದ ಮೇಲೆ ಟೀಮ್ ಇಂಡಿಯಾ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಅವರನ್ನು ಬಂಧಿಸಲು ‘ಅರೆಸ್ಟ್‌ ವಾರೆಂಟ್‌’ ಜಾರಿಗೊಳಿಸಲಾಗಿದೆ.

ರಾಬಿನ್ ಉತ್ತಪ್ಪ ಅವರು ಬೆಂಗಳೂರಿನಲ್ಲಿ ‘ಸೆಂಟಾರಸ್ ಲೈಫ್ ಸ್ಟೈಲ್ ಬ್ರಾಂಡ್ಸ್ ಪ್ರೈವೇಟ್ ಲಿಮಿಟೆಡ್’ ಕಂಪನಿ ನಡೆಸುತ್ತಿದ್ದಾರೆ. ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ಉತ್ತಪ್ಪ ಅವರು ಪಿಎಫ್‌ ಹಣ ಪಾವತಿಸಿಲ್ಲ. ಉದ್ಯೋಗಿಗಳ ಸಂಬಳದಲ್ಲಿ ಪಿಎಫ್‌ ಹಣ ಕಡಿತವಾಗಿದ್ದರೂ, ಅದನ್ನು ಪಿಎಫ್‌ ಖಾತೆಗೆ ಜಮೆ ಮಾಡಿಲ್ಲ. ಉದ್ಯೋಗಗಳಿಗೆ ಸುಮಾರು 23 ಲಕ್ಷ ರೂ. ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

image 33 1

ಉದ್ಯೋಗಿಗಳ ಖಾತೆಗೆ ಪಿಎಫ್‌ ಹಣವನ್ನು ಜಮೆ ಮಾಡದೇ ಇರುವುದನ್ನು ಪಿಎಫ್ಓ ರಿಜಿನಲ್ ಕಮಿಷನರ್ ಷಡಕ್ಷರ ಗೋಪಾಲ ರೆಡ್ಡಿ ಗಂಭೀರವಾಗಿ ಪರಿಗಣಿಸಿದ್ದಾರೆ. ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಪುಲಕೇಶಿ ನಗರ ಪೊಲೀಸರಿಗೆ ಡಿಸೆಂಬರ್ 4ರಂದು ಪತ್ರ ಬರೆದಿದ್ದಾರೆ.

Advertisements

ಪೊಲೀಸರು ರಾಬಿನ್ ಉತ್ತಪ್ಪ ಅವರ ಮನೆಗೆ ನೋಟಿಸ್‌ ಅಂಟಿಸಿದ್ದಾರೆ. ಆದರೆ, ರಾಬಿನ್ ಉತ್ತಪ್ಪ ಅವರು ಬೆಂಗಳೂರು ತೊರೆದು, ದುಬೈನಲ್ಲಿ ನೆಲೆಸಿದ್ದಾರೆ. ವಾರೆಂಟ್‌ ಜಾರಿಯಾಗಿರುವ ಹಿನ್ನೆಲೆ, ಅವರನ್ನು ಬೆಂಗಳೂರಿಗೆ ಕರೆಸಿಕೊಳ್ಳುವ ಸಾಧ್ಯತೆ ಇದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X