ಕೊನೆಯ ಟಿ20 | ಚಿನ್ನಸ್ವಾಮಿಯಲ್ಲಿ ಹರ್ಷ್‌ದೀಪ್ ಸಿಂಗ್ ಸಾಹಸ: ಟೀಮ್ ಇಂಡಿಯಾಕ್ಕೆ ರೋಚಕ ಜಯ

Date:

Advertisements

ಆಸ್ಟ್ರೇಲಿಯಾ ವಿರುದ್ಧ ಇಂದು ನಡೆದ ಕೊನೆಯ ಹಾಗೂ 5ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 6 ರನ್‌ಗಳ ರೋಚಕ ಜಯ ದಾಖಲಿಸಿದೆ.

ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ 161 ರನ್ ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ, 20 ಓವರ್‌ಗಳಲ್ಲಿ 154/8 ರನ್ ಗಳಿಸಿತು. ಆಸ್ಟ್ರೇಲಿಯಾಕ್ಕೆ ಗೆಲ್ಲಲು ಕೊನೆಯ ಓವರ್‌ನಲ್ಲಿ 10 ರನ್‌ಗಳ ಅವಶ್ಯಕತೆ ಇತ್ತು.

ಟೀಮ್ ಇಂಡಿಯಾ ಪರವಾಗಿ ಕೊನೆಯ ಓವರ್‌ ಎಸೆದ ಯುವ ಬೌಲರ್ ಹರ್ಷ್‌ದೀಪ್ ಸಿಂಗ್, ಕೇವಲ 3 ರನ್‌ಗಳನ್ನಷ್ಟೇ ಬಿಟ್ಟು ಕೊಡುವ ಮೂಲಕ ಟೀಮ್ ಇಂಡಿಯಾ 6 ರನ್‌ಗಳ ರೋಚಕ ಜಯ ದಾಖಲಿಸುವಂತಾಗಲು ನೆರವಾದರು.

Advertisements

ಆಸ್ಟ್ರೇಲಿಯಾ ಪರ ಮೆಕ್ ಡರ್ಮೊಟ್ (54) ಅರ್ಧಶತಕ ಸಿಡಿಸಿದರೆ, ಹೆಡ್ (28), ನಾಯಕ ವೇಡ್ 22 ರನ್ ಹೊಡೆದರು. ಮುಕೇಶ್ ಕುಮಾರ್ 3, ಅರ್ಶ್‌ದೀಪ್, ಬಿಷ್ಟೋಯ್ ತಲಾ 2, ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು. ಈ ಪಂದ್ಯವನ್ನು 6 ರನ್‌ಗಳಿಂದ ಗೆಲ್ಲುವ ಮೂಲಕ ಭಾರತ, ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡಿತು. ಸರಣಿಯ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ರೋಚಕವಾಗಿ ಗೆದ್ದಿತ್ತು.

161 ರನ್‌ಗಳ ಸವಾಲಿನ ಗುರಿ ನೀಡಿದ್ದ ಟೀಮ್ ಇಂಡಿಯಾ

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಸೂರ್ಯಕುಮಾರ್ ನೇತೃತ್ವದ ಯುವ ಭಾರತ ತಂಡ, ಶ್ರೇಯಸ್ ಅಯ್ಯರ್ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 160 ರನ್‌ಗಳನ್ನು ಕಲೆಹಾಕಿತ್ತು.

ಶ್ರೇಯಸ್ ಅಯ್ಯರ್ 37 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಮೂಲಕ 53 ರನ್ ಬಾರಿಸಿ ತಂಡದ ಮೊತ್ತವನ್ನು 150ರ ಗಡಿ ದಾಟುವಂತೆ ನೋಡಿಕೊಂಡರು.

ಬೌಲಿಂಗ್‌ನಲ್ಲಿ ಆಸ್ಟ್ರೇಲಿಯಾ ತಂಡದ ಪರ ಬೆನ್ ದ್ವಾರ್ಶುಯಿಸ್ ಮತ್ತು ಜೇಸನ್ ಬೆಹ್ರೆಂಡಾರ್ಫ್ ತಲಾ ಎರಡು ವಿಕೆಟ್ ಕಬಲಿಸಿದರೆ, ಆರನ್ ಹಾರ್ಡಿ, ತನ್ವೀರ್ ಸಂಘ ಮತ್ತು ನಾಥನ್ ಎಲ್ಲಿಸ್ ತಲಾ ಒಂದೊಂದು ವಿಕೆಟ್ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X