ಆ್ಯಶಸ್ ಸರಣಿ | ಅಂತಿಮ ದಿನದಾಟಕ್ಕೆ ಕೃಪೆ ತೋರದ ವರುಣ

Date:

Advertisements

ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಆ್ಯಶಸ್​  ಟೆಸ್ಟ್‌ ಸರಣಿಯ ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಸ್ಪಷ್ಟ ಮೇಲುಗೈ ಸಾಧಿಸಿದೆ. ಅಂತಿಮ ದಿನವಾದ ಮಂಗಳವಾರ ಪಂದ್ಯ ಗೆಲ್ಲಲು ಕಮ್ಮಿನ್ಸ್‌ ಪಡೆ 174 ರನ್‌‌ ಗಳಿಸಬೇಕಾಗಿದೆ. ಇಂಗ್ಲೆಂಡ್‌ ಗೆಲುವಿಗೆ 7 ವಿಕೆಟ್‌ಗಳ ಅಗತ್ಯವಿದೆ.

ದ್ವಿತೀಯ ಇನ್ನಿಂಗ್ಸ್‌ನಲ್ಲಿ ಗೆಲುವಿಗೆ 281 ರನ್‌ಗಳ ಗುರಿ ಪಡೆದಿರುವ ಡಬ್ಲ್ಯೂಟಿಸಿ ಚಾಂಪಿಯನ್‌ ಆಸ್ಟ್ರೇಲಿಯಾ, ನಾಲ್ಕನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್‌ ನಷ್ಟದಲ್ಲಿ 107 ರನ್‌ಗಳಿಸಿದೆ. ಪ್ರಥಮ ಇನ್ನಿಂಗ್ಸ್‌ನ ಶತಕ ವೀರ ಉಸ್ಮಾನ್‌ ಖ್ವಾಜಾ 34 ಮತ್ತು 13 ರನ್‌ಗಳೊಂದಿಗೆ ʻನೈಟ್‌ ವಾಚ್‌ಮೆನ್‌ʼ ಸ್ಕಾಟ್‌ ಬೋಲಂಡ್‌ ಕ್ರೀಸ್‌ನಲ್ಲಿದ್ದಾರೆ.

ಮಳೆ ಅಡ್ಡಿ

Advertisements

ಎಡ್ಜ್‌ಬಾಸ್ಟನ್‌ನಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಮಂಗಳವಾರ ಪಂದ್ಯ ಪ್ರಾರಂಭವಾಗುವುದು ತಡವಾಗಿದೆ. ಸೋಮವಾರವೂ ಕೆಲಕಾಲ ಮಳೆರಾಯ ಆಟಕ್ಕೆ ಅಡ್ಡಿಪಡಿಸಿದ್ದ. ಆದರೆ ಅಂತಿಮ ದಿನದಲ್ಲಿ ಸ್ಪಷ್ಟ ಫಲಿತಾಂಶದ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ವರುಣ ಅವಕೃಪೆ ತೋರುವ ಸಾಧ್ಯತೆಯಿದೆ.

ಎಡ್ಜ್‌ಬಾಸ್ಟನ್‌ ಮೈದಾನದಲ್ಲಿ ಇದುವರೆಗೂ ನಡೆದಿರುವ ಟೆಸ್ಟ್‌ ಪಂದ್ಯಗಳಲ್ಲಿ ಕೇವಲ ಮೂರು ತಂಡಗಳಷ್ಟೇ, ನಾಲ್ಕನೇ ಇನಿಂಗ್ಸ್‌ನಲ್ಲಿ 200ಕ್ಕೂ ಅಧಿಕ ಮೊತ್ತವನ್ನು ಚೇಸ್‌ ಮಾಡಿ ಗೆಲುವು ದಾಖಲಿಸಿದೆ. ಕಳೆದ ವರ್ಷ ಟೀಮ್‌ ಇಂಡಿಯಾ ವಿರುದ್ಧ ಆತಿಥೇಯ ಇಂಗ್ಲೆಂಡ್‌ ತಂಡ , 378 ರನ್‌ ಚೇಸ್‌ ಮಾಡಿರುವುದು ಅತ್ಯಧಿಕ ಮೊತ್ತದ ಚೇಸ್ ಎನಿಸಿದೆ.

ಎರಡು ವಿಕೆಟ್‌ ನಷ್ಟದಲ್ಲಿ 28 ರನ್‌ಗಳೊಂದಿಗೆ ನಾಲ್ಕನೇ ದಿನದಾಟ ಆರಂಭಿಸಿದ್ದ ಇಂಗ್ಲೆಂಡ್‌, ಚಹಾ ವಿರಾಮದ ವೇಳೆಗೆ 271 ರನ್‌ ಗಳಿಸುವಷ್ಟರಲ್ಲಿ ಸರ್ವಪತನ ಕಂಡಿತ್ತು.

ಆಸಿಸ್‌ ಪರ ನಾಯಕ ಪ್ಯಾಟ್‌ ಕಮಿನ್ಸ್‌ ಮತ್ತು ಸ್ಪಿನ್ನರ್‌ ನಥಾನ್‌ ಲಯನ್ ತಲಾ 4 ವಿಕೆಟ್‌ಗಳನ್ನು ಪಡೆಯುವ ಮೂಲಕ, ಬೆನ್‌ ಸ್ಟೋಕ್ಸ್‌ ಪಡೆಯ ರನ್‌ ಬೇಟೆಗೆ ತಡೆ ಒಡ್ಡಿದರು. ಜೊ ರೂಟ್‌ ಮತ್ತು ಹ್ಯಾರಿ ಬ್ರೂಕ್‌ ತಲಾ 46 ರನ್‌ ಗಳಿಸಿದರೆ, ನಾಯಕ ಬೆನ್‌ ಸ್ಟೋಕ್ಸ್‌ 43 ರನ್‌ ಗಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X