ತವರಲ್ಲೇ ಆಸ್ಟ್ರೇಲಿಯಾ ಮಣಿಸಿದ ಪಾಕಿಸ್ತಾನ: 22 ವರ್ಷಗಳ ಬಳಿಕ ಸರಣಿ ಗೆಲುವು

Date:

Advertisements

ಕ್ಯಾನ್‌ಬೆರಾದ ಪರ್ತ್‌ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ 3ನೇ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ ತಂಡ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ತನ್ನದಾಗಿಸಿಕೊಂಡಿತು.

ಕಳೆದ 22 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪಾಕ್‌, ಆಸ್ಟ್ರೇಲಿಯಾದಲ್ಲಿ ಸರಣಿ ಗೆದ್ದ ಸಾಧನೆ ಮಾಡಿದೆ. ಇದು ನೂತನ ನಾಯಕ ಮೊಹಮ್ಮದ್‌ ರಿಜ್ವಾನ್‌ ಅವರ ನಾಯಕತ್ವದಲ್ಲಿ ಗೆದ್ದ ಮೊದಲ ಸರಣಿಯಾಗಿದೆ. ಕೊನೆಯದ್ದಾಗಿ 2002ರಲ್ಲಿ ಪಾಕ್‌ ಆಸೀಸ್‌ ನೆಲದಲ್ಲಿ ಸರಣಿ ಗೆದ್ದಿತ್ತು.

141 ರನ್‌ಗಳ ಸುಲಭ ಗುರಿ ಬೆನ್ನತ್ತಿದ್ದ ಪಾಕ್‌ ಬ್ಯಾಟರ್‌ಗಳು ಉತ್ತಮ ಆರಂಭ ಪಡೆಯುವಲ್ಲಿ ಯಶಸ್ವಿಯಾದರು. ಮೊದಲ ವಿಕೆಟ್‌ಗೆ ಪಾಕ್ ‌84 ರನ್‌ಗಳ ಜೊತೆಯಾಟ ನೀಡಿತ್ತು. ಆರಂಭಿಕರ ವಿಕೆಟ್‌ ಪತನವಾದ ಬಳಿಕ ಕ್ರೀಸ್‌ಗಿಳಿದ ನಾಯಕ ಮೊಹಮ್ಮದ್‌ ರಿಜ್ವಾನ್‌ ಮತ್ತು ಬಾಬರ್‌ ಆಜಂ ಜೋಡಿ ವಿಕೆಟ್‌ ಬಿಟ್ಟುಕೊಡದೇ ತಂಡವನ್ನು ಗೆಲುವಿನ ದಡ ಸೇರಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಹಣದ ಅಮಲು ಹಾಗೂ ಭಾರತೀಯ ಕ್ರಿಕೆಟ್ ತಂಡದ ಗರ್ವಭಂಗ

ಪಾಕ್‌ ಪರ ಸೈಮ್‌ ಅಯೂಬ್‌ 42 ರನ್‌, ಅಬ್ದುಲ್ಲಾ ಶಫಿಕ್‌ 37 ರನ್‌ ಗಳಿಸಿ ಅಜೇಯರಾಗಿ ಉಳಿದರೆ, ಮೊಹಮ್ಮದ್‌ ರಿಜ್ವಾನ್‌ 30 ರನ್‌ ಹಾಗೂ ಬಾಬರ್‌ ಆಜಂ 28 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದರು. ಇನ್ನೂ ಆಸ್ಟ್ರೇಲಿಯಾ ಪಾರ ಲ್ಯಾನ್ಸ್‌ ಮೊರಿಸ್‌ 6 ಓವರ್‌ಗಳಲ್ಲಿ 24 ರನ್‌ ಬಿಟ್ಟುಕೊಟ್ಟು 2 ವಿಕೆಟ್‌ ಕಿತ್ತರು.

ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆತಿಥೇಯ ಆಸೀಸ್‌ ತಂಡವು 31.5 ಓವರ್‌ಗಳಲ್ಲಿ ಕೇವಲ 140 ರನ್​ಗಳಿಗೆ ಆಲೌಟ್ ಆಯಿತು. ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಅಲ್ಪ ಮೊತ್ತಕ್ಕೆ ನೆಲಕಚ್ಚಿದರು. ಆದರೆ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಾನ್ ಅಬಾಟ್ 41 ಎಸೆತಗಳಲ್ಲಿ 30 ರನ್ ಬಾರಿಸಿದರು.

ಸಂಘಟಿತ ದಾಳಿಯೊಂದಿಗೆ ಆಸ್ಟ್ರೇಲಿಯನ್ನರ ಮೇಲೆ ಹಿಡಿತ ಸಾಧಿಸಿದ ಪಾಕ್ ಬೌಲರ್​ಗಳು ಅಂತಿಮವಾಗಿ ಆತಿಥೇಯರನ್ನು 31.5 ಓವರ್​ಗಳಲ್ಲಿ 140 ರನ್​ಗಳಿಗೆ ಆಲೌಟ್ ಮಾಡಿದರು. ಪಾಕಿಸ್ತಾನ ಪರ ಶಾಹೀನ್ ಶಾ ಅಫ್ರಿದಿ 32 ರನ್ ನೀಡಿ 3 ವಿಕೆಟ್ ಪಡೆದರೆ, ನಸೀಮ್ ಶಾ 54 ರನ್ ನೀಡಿ 3 ವಿಕೆಟ್ ಕಬಳಿಸಿದರು. ಇನ್ನು ಹ್ಯಾರಿಸ್ ರೌಫ್ 24 ರನ್​ಗಳಿಗೆ 2 ವಿಕೆಟ್ ಕಬಳಿಸಿ ಮಿಂಚಿದರು. ಇದರೊಂದಿಗೆ ಸರಣಿಯಲ್ಲಿ ಒಟ್ಟು 10 ವಿಕೆಟ್‌ ಪಡೆಯುವ ಮೂಲಕ ಪಂದ್ಯ ಶ್ರೇಷ್ಠ ಹಾಗೂ ಸರಣಿಶೇಷ್ಠ ಪ್ರಶಸ್ತಿಗೂ ಪಾತ್ರರಾದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X