ಧರ್ಮಶಾಲಾದಲ್ಲಿ ಆಸ್ಟ್ರೇಲಿಯಾ ಭರ್ಜರಿ ಬ್ಯಾಟಿಂಗ್: ನ್ಯೂಝಿಲ್ಯಾಂಡ್‌ಗೆ ಗೆಲುವಿಗೆ 389 ರನ್‌ಗಳ ಗುರಿ

Date:

Advertisements

ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಕೂಟದ 27ನೇ ಪಂದ್ಯದಲ್ಲಿ ನ್ಯೂಝಿಲ್ಯಾಂಡ್‌ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾ, ಗೆಲ್ಲಲು ನ್ಯೂಝಿಲ್ಯಾಂಡ್ 389 ರನ್‌ಗಳ ಬೃಹತ್ ಗುರಿ ನೀಡಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಆಸೀಸ್, ನಿಗದಿತ 49.2 ಓವರ್‌ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 388 ರನ್ ದಾಖಲಿಸಿತು.

ಮೊದಲ ವಿಕೆಟ್‌ಗೆ ಬೃಹತ್ ಜೊತೆಯಾಟ ನಡೆಸಿದ ಡೇವಿಡ್ ವಾರ್ನರ್ ಹಾಗೂ ಟ್ರಾವಿಸ್ ಹೆಡ್ ಜೋಡಿ, 19.1 ಓವರ್‌ಗಳಲ್ಲಿ 175 ರನ್‌ಗಳ ಬೃಹತ್ ಜೊತೆಯಾಟ ನಡೆಸಿದರು. ಡೇವಿಡ್ ವಾರ್ನರ್ ಅವರನ್ನು ಔಟ್ ಮಾಡುವ ಮೂಲಕ ಈ ಜೋಡಿಯನ್ನು ಗ್ಲೆನ್ ಫಿಲಿಫ್ಸ್ ಬೇರ್ಪಡಿಸಿದರು.

Advertisements

ವಿಶ್ವಕಪ್‌ನ ಮೊದಲ ಪಂದ್ಯವನ್ನಾಡುತ್ತಿರುವ ಟ್ರಾವಿಸ್ ಹೆಡ್, ಶತಕ ಬಾರಿಸುವ ಮೂಲಕ ಮಿಂಚಿದರು. 67 ಎಸೆತಗಳನ್ನು ಎದುರಿಸಿದ ಹೆಡ್ 10 ಬೌಂಡರಿಗಳು ಮತ್ತು 7 ಸಿಕ್ಸರ್‌ಗಳೊಂದಿಗೆ 109 ರನ್ ಗಳಿಸಿದರು.

ಬಳಿಕ ಬಂದ ಮ್ಯಾಕ್ಸ್‌ವೆಲ್ 41 ರನ್ (24 ಎಸೆತ). ಇಂಗ್ಲಿಸ್ 38(28 ಎಸೆತ). ಕಮ್ಮಿನ್ಸ್ 37ರನ್ (14 ಎಸೆತ) ರನ್‌ಗಳ ನೆರವಿನಿಂದ ನ್ಯೂಝಿಲ್ಯಾಂಡ್ ವಿರುದ್ಧ ಆಸ್ಟ್ರೇಲಿಯಾ 388 ರನ್‌ಗಳಿಗೆ ಆಲೌಟ್ ಆಯಿತು. 387ಕ್ಕೆ 6 ವಿಕೆಟ್ ಕಳೆದುಕೊಂಡಿದ್ದ ಆಸ್ಟ್ರೇಲಿಯಾ, 388 ರನ್ ಗಳಿಸುವ ವೇಳೆ ಆಲೌಟ್ ಆಯಿತು.

ನ್ಯೂಝಿಲ್ಯಾಂಡ್ ಪರ ಬೌಲಿಂಗ್‌ನಲ್ಲಿ ಗ್ಲೆನ್ ಫಿಲಿಫ್ಸ್ 37ಕ್ಕೆ 3, ಟ್ರೆಂಟ್ ಬೌಲ್ಟ್ 77ಕ್ಕೆ 3, ಮಿಚೆಲ್ ಸ್ಯಾಂಟನರ್ 80ಕ್ಕೆ 2, ಜಿಮ್ಮಿ ನೀಶಮ್ ಮತ್ತು ಮ್ಯಾಟ್ ಹೆನ್ರಿ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.

ವಿಶ್ವಕಪ್‌ನ ಆರಂಭಿಕ ಎರಡು ಪಂದ್ಯಗಳಲ್ಲಿ ಸೋಲನುಭವಿಸಿದ್ದ ಆಸ್ಟ್ರೇಲಿಯಾ ಸೆಮಿಫೈನಲ್‌ಗೇರುವುದೋ ಎಂಬ ಅನುಮಾನವಿತ್ತು. ಆ ಬಳಿಕ ಚೇತರಿಸಿಕೊಂಡ ಕಮ್ಮಿನ್ಸ್ ಪಡೆ, ಸತತ ಮೂರು ಪಂದ್ಯಗಳಲ್ಲಿ 350ಕ್ಕೂ ಹೆಚ್ಚು ರನ್ ಗಳಿಸಿ, ಗೆಲ್ಲುವ ಮೂಲಕ ದಾಖಲೆ ನಿರ್ಮಿಸಿದೆ.

ಸದ್ಯದವರೆಗೆ ಪಾಯಿಂಟ್ಸ್‌ ಟೇಬಲ್‌ನಲ್ಲಿ ನ್ಯೂಝಿಲ್ಯಾಂಡ್ ಐದು ಪಂದ್ಯಗಳಲ್ಲಿ 4 ಗೆಲುವು, 1 ಸೋಲಿನೊಂದಿಗೆ 8 ಅಂಕದೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ಐದು ಪಂದ್ಯಗಳಲ್ಲಿ 3 ಗೆಲುವು, 2 ಸೋಲಿನೊಂದಿಗೆ 6 ಅಂಕದೊಂದಿಗೆ ನಾಲ್ಕನೇಯ ಸ್ಥಾನದಲ್ಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X