IND vs AUS | ಆಸೀಸ್‌ 445ಕ್ಕೆ ಆಲ್ಔಟ್; ಭಾರತಕ್ಕೆ ಆರಂಭಿಕ ಆಘಾತ, ನಿರಾಶೆ ಮೂಡಿಸಿದ ಕೊಹ್ಲಿ

Date:

Advertisements

ಬ್ರಿಸ್ಬೇನ್‌ನ ಗಾಬಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಮೂರನೇ ಟೆಸ್ಟ್‌ನ ಮೂರನೇ ದಿನದಂದು ಆಸೀಸ್ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 445 ರನ್‌ಗಳನ್ನು ಪೇರಿಸಿ ಆಲೌಟ್ ಆಗಿದೆ.

ಬ್ಯಾಂಟಿಂಗಿಗೆ ಇಳಿದ ಭಾರತ, ಆರಂಭಿಕ ಆಘಾತ ಕಂಡು, ಸದ್ಯ 4 ವಿಕೆಟ್ ಕಳೆದುಕೊಂಡು ಕೇವಲ 48 ರನ್‌ಗಳನ್ನು ಪೇರಿಸುವಲ್ಲಿ ಪರದಾಡಿದೆ. ಮಳೆಯ ಕಾರಣ ಆಟಕ್ಕೆ ತಡೆ ಉಂಟಾಗಿದೆ. ಮೊದಲ ದಿನವು ಮಳೆಯಿಂದಾಗಿ ಆಟ ಸ್ಥಗಿತಗೊಂಡಿತ್ತು. ಎರಡನೇ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡವು ಭಾರತ ತಂಡದ ಬೆವರಿಳಿಸಿತ್ತು. ಆದರೆ ಬೂಮ್ರಾ ಭಾರತ ಪರವಾಗಿ ಏಕಾಂಗಿ ಹೋರಾಟ ನಡೆಸಿದ್ದರು.

ಇದನ್ನು ಓದಿದ್ದೀರಾ? IND vs AUS | ಬೂಮ್ರಾ ಅಬ್ಬರಕ್ಕೆ ಆಸ್ಟ್ರೇಲಿಯಾ ಬ್ಯಾಟರ್‌ಗಳು ತತ್ತರ

Advertisements

ಇನ್ನೊಂದೆಡೆ ಭಾರತದ ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ ಕ್ರಮವಾಗಿ 4, 1, 3 ರನ್‌ಗಳನ್ನು ಗಳಿಸಿ ತೀವ್ರ ನಿರಾಶೆ ಹುಟ್ಟು ಹಾಕಿದ್ದಾರೆ.

ಹಿಂದಿನ ದಿನ ಏಳು ವಿಕೆಟ್‌ಗೆ 405 ರನ್‌ಗಳನ್ನು ಗಳಿಸಿದ್ದ ಆಸೀಸ್ ಇಂದು ಬೆಳಗ್ಗೆ ಆಟ ಪುನರಾರಂಭಿಸಿ ಹೆಚ್ಚುವರಿ 40 ರನ್ ಗಳಿಸಿ ಒಟ್ಟು ರನ್‌ಗಳನ್ನು 445ಕ್ಕೆ ಏರಿಸಿತು. ಎರಡನೇ ದಿನದಲ್ಲಿ ಟ್ರಾವಿಸ್ ಹೆಡ್ ಮತ್ತು ಸ್ಟೀವ್ ಸ್ಮಿತ್ ಅವರ ಅವಳಿ ಶತಕ ಪಡೆದರೆ, ಅದರ ನಂತರ ಅಲೆಕ್ಸ್ ಕ್ಯಾರಿ 70 ರನ್ ಗಳಿಸಿ ಭಾರತದ ಬೌಲರ್‌ಗಳಿಗೆ ನೀರಿಳಿಸಿದರು.

ಆದರೆ ಭಾರತದ ಪರವಾಗಿ ಏಕಾಂಗಿಯಾಗಿ ಸೆಣಸಿದ ಬಲಗೈ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಆರು ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ ಆಸ್ಟ್ರೇಲಿಯಾದ ಎದುರಿನ ಪಂದ್ಯದಲ್ಲಿ ಒಟ್ಟು 50 ವಿಕೆಟ್‌ಗಳನ್ನು ಪಡೆದಿದ್ದಾರೆ. ಇನ್ನುಳಿದಂತೆ ಮೊಹಮ್ಮದ್ ಸಿರಾಜ್ ಎರಡು, ಆಕಾಶ್ ದೀಪ್ ಒಂದು ವಿಕೆಟ್ ಪಡೆದಿದ್ದಾರೆ. ಐದು ಪಂದ್ಯಗಳ ಸರಣಿ 1-1ರಲ್ಲಿ ಸಮಬಲಗೊಂಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X