ಬ್ಯಾಡ್ಮಿಂಟನ್‌ | ಇತಿಹಾಸ ನಿರ್ಮಿಸಿದ ಸ್ವಾತಿಕ್‌-ಚಿರಾಗ್‌ ಜೋಡಿ

Date:

Advertisements
  • ದುಬೈನಲ್ಲಿ ನಡೆದ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್
  • ಡಬಲ್ಸ್‌ ವಿಭಾಗದಲ್ಲಿ ಪದಕ ಗೆದ್ದ ಮೊದಲ ಸ್ವಾತಿಕ್‌-ಚಿರಾಗ್‌ ಜೋಡಿ

ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್​ನಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇತಿಹಾಸ ನಿರ್ಮಿಸಿದ್ದಾರೆ. ಟೂರ್ನಿಯ ಇತಿಹಾಸದಲ್ಲೇ ಡಬಲ್ಸ್‌ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಜೋಡಿ ಎಂಬ ಕೀರ್ತಿಗೆ ಸ್ವಾತಿಕ್‌-ಚಿರಾಗ್‌ ಪಾತ್ರರಾಗಿದ್ದಾರೆ.

ದುಬೈನಲ್ಲಿ ನಡೆದ ಪುರುಷರ ಡಬಲ್ಸ್ ವಿಭಾಗದ ಫೈನಲ್‌ನಲ್ಲಿ ಮಲೇಷ್ಯಾದ ಎಂಟನೇ ಶ್ರೇಯಾಂಕದ ಯೂ ಸಿನ್ ಒಂಗ್ ಮತ್ತು ಈ ಯಿ ಟಿಯೊ ಜೋಡಿಯನ್ನು 2-1 ಸೆಟ್‌ಗಳ ಅಂತರದಲ್ಲಿ ಸ್ವಾತಿಕ್‌-ಚಿರಾಗ್‌ ಜೋಡಿ ಮಣಿಸಿದರು.

ಈ ಮೂಲಕ ಕೂಟದ ಇತಿಹಾಸದಲ್ಲಿ, 58 ವರ್ಷಗಳ ಬಳಿಕ  ಭಾರತಕ್ಕೆ ಎರಡನೇ ಚಿನ್ನದ ಪದಕ ತಂದುಕೊಟ್ಟರು.

Advertisements

ಮೊದಲ ಗೇಮ್‌ ಅನ್ನು 16-21 ಅಂತರದಲ್ಲಿ ಸೋತರೂ ಸಹ ಛಲ ಬಿಡದೆ ಹೋರಾಡಿದ ಸ್ವಾತಿಕ್‌-ಚಿರಾಗ್‌ ಜೋಡಿ ನಂತರದ ಎರಡು ಸೆಟ್‌ಗಳನ್ನು 21-17, 21-19 ಅಂತರದಲ್ಲಿ ಗೆದ್ದು ಚಿನ್ನದ ಪದಕಕ್ಕೆ ಕೊರಳೊಡ್ಡಿದರು.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಮೊಹಾಲಿಯಲ್ಲಿ ʻರನ್‌ ಹೊಳೆʼ; ಪಂಜಾಬ್ ವಿರುದ್ಧ‌ ರಾಹುಲ್ ಪಡೆಗೆ ಭರ್ಜರಿ ಜಯ

1965ರ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್​ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಚಾಂಪಿಯನ್‌ ಆಗುವ ಮೂಲಕ ದಿನೇಶ್ ಖನ್ನಾ ಅವರು, ಕೂಟದಲ್ಲಿ ಭಾರತಕ್ಕೆ ಚೊಚ್ಚಲ ಚಿನ್ನದ ತಂದುಕೊಟ್ಟಿದ್ದರು.

ಆದರೆ ಡಬಲ್ಸ್‌ ವಿಭಾಗದಲ್ಲಿ ಏಷ್ಯನ್ ಚಾಂಪಿಯನ್‌ಶಿಪ್‌ನ ಫೈನಲ್‌ ತಲುಪಿ, ಪದಕ ಮುಡಿಗೇರಿಸಿಕೊಂಡ  ಮೊದಲ ಭಾರತೀಯ ಜೋಡಿ ಎಂಬ ಕೀರ್ತಿಯೂ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರದ್ದಾಯಿತು.

ಟೋಕಿಯೊದಲ್ಲಿ ನಡೆದ 2022ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ಡಬಲ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಸ್ವಾತಿಕ್‌-ಚಿರಾಗ್‌ ಜೋಡಿ, ಏಷ್ಯನ್ ಟೀಮ್ ಚಾಂಪಿಯನ್‌ಶಿಪ್‌ನಲ್ಲಿ (2016, 2020) ಎರಡು ಕಂಚಿನ ಪದಕ ಸಾಧನೆ ಮಾಡಿದ್ದರು.

ಪ್ರಧಾನಿ ಮೋದಿ ಅಭಿನಂದನೆ

ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಗೆದ್ದ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿಯನ್ನು ಪ್ರಧಾನಿ ಮೋದಿ ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ. ಐತಿಹಾಸಿಕ ಸಾಧನೆ ಹೆಮ್ಮೆ ತಂದಿದೆ. ಅಭಿನಂದನೆಗಳು, ಮುಂದಿನ ಸ್ಪರ್ಧೆಗಳಿಗೂ ಶುಭ ಹಾರೈಕೆಗಳು ಎಂದು ಟ್ವೀಟ್‌ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X