ಸ್ಲಿಪ್​ನಲ್ಲಿ ವಿಕೆಟ್ ಕೀಪರ್ ನಿಂತಿದ್ದಕ್ಕೆ 5 ರನ್‌ ನೀಡಿದ ಅಂಪೈರ್; ಏನಿದು ಹೊಸ ನಿಯಮ?

Date:

Advertisements

ಬಾಂಗ್ಲಾದೇಶ ಎ ಹಾಗೂ ನ್ಯೂಜಿಲೆಂಡ್ ಎ ತಂಡಗಳ ನಡುವಿನ ಪಂದ್ಯದ ವೇಳೆ ವಿಕೆಟ್ ಕೀಪರ್ ಮಾಡಿದ ತಪ್ಪು ಈಗ ಎಲ್ಲಡೆ ವೈರಲ್‌ ಆಗುತ್ತಿದೆ.

ಬಾಂಗ್ಲಾದೇಶದ ಸಿಲ್ಹೆಟ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ಎ ತಂಡವು 50 ಓವರ್​ಗಳಲ್ಲಿ ಆಲೌಟ್‌ ಆಗಿ 226 ರನ್ ಕಲೆಹಾಕಿತು.

ಈ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ ಎ ತಂಡವು 4 ಓವರ್‌ಗಳಲ್ಲಿ 35 ರನ್ ಪೇರಿಸಿತ್ತು. 5ನೇ ಓವರ್​ನಲ್ಲಿ ಇಬಾದತ್ ಹೊಸೈನ್ ಬೌಲಿಂಗ್‌ ದಾಳಿಗೆ ಇಳಿದಿದ್ದರು. ಈ ವೇಳೆ ಬಾಂಗ್ಲಾದೇಶ ಎ ತಂಡದ ನಾಯಕ ಹಾಗೂ ವಿಕೆಟ್ ಕೀಪರ್ ನೂರುಲ್ ಹಸನ್ ವಿಕೆಟ್ ಹಿಂದೆ ನಿಲ್ಲುವುದು ಬಿಟ್ಟು ಮೊದಲ ಸ್ಲಿಪ್‌ನಲ್ಲಿ ನಿಂತಿದ್ದರು. ಆದರೆ ಅದಕ್ಕೂ ಮುನ್ನ ಅವರು ವಿಕೆಟ್ ಹಿಂದೆ ತಮ್ಮ ಹೆಲ್ಮೆಟ್ ಇರಿಸಿದ್ದರು.

Advertisements

ಇದನ್ನು ಓದಿದ್ದೀರಾ? ಒಂದೇ ಓವರ್‌ನಲ್ಲಿ 6 ಸಿಕ್ಸ್‌; ಇಂಗ್ಲೆಂಡ್‌ನಲ್ಲಿ ಭಾರತೀಯ ಮೂಲದ ಆಟಗಾರನ ಸಾಧನೆ

ಇಬಾದತ್ ಹೊಸೈನ್ ಎಸೆದ ಚೆಂಡನ್ನು ಡೇಲ್ ಫಿಲಿಪ್ಸ್ ಬಿಟ್ಟಿದ್ದಾರೆ. ಚೆಂಡು ವಿಕೆಟ್ ಹಿಂದೆ ಕೀಪರ್ ಇಲ್ಲದಿದ್ದರಿಂದ ನೇರವಾಗಿ ಹೋಗಿ ಹೆಲ್ಮೆಟ್​ಗೆ ಬಡಿದಿದೆ. ಐಸಿಸಿ ನಿಯಮದ ಪ್ರಕಾರ, ಮೈದಾನದಲ್ಲಿರುವ ಹೆಲ್ಮೆಟ್‌ಗೆ ಚೆಂಡು ತಗುಲಿದರೆ ಬ್ಯಾಟಿಂಗ್‌ ನಡೆಸುವ ತಂಡಕ್ಕೆ 5 ದಂಡದ ರನ್‌ಗಳನ್ನು ನೀಡಬೇಕು. ಅದರಂತೆ ನ್ಯೂಜಿಲೆಂಡ್ ತಂಡಕ್ಕೆ ಹೆಚ್ಚುವರಿಯಾಗಿ 5 ರನ್​ಗಳು ಲಭಿಸಿದೆ. ಈ ವಿಡಿಯೋ ವೈರಲ್ ಆಗಿದ್ದು, ಬಾಂಗ್ಲಾದೇಶದ ಎ ತಂಡದ ನಾಯಕ ನೂರಲ್ ಹಸನ್ ಟ್ರೋಲ್ ಆಗುತ್ತಿದ್ದಾರೆ.

ಈ ಪಂದ್ಯದಲ್ಲಿ 226 ರನ್‌ಗಳ​ ಗುರಿಯನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ಎ ತಂಡ 48.2 ಓವರ್​ಗಳಲ್ಲಿ 231 ರನ್ ಬಾರಿಸಿ 4 ವಿಕೆಟ್​ಗಳ ಅಂತರಲ್ಲಿ ಜಯ ಸಾಧಿಸಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X