ಮಾಜಿ ಕ್ರಿಕೆಟಿಗ ಅನ್ಶುಮಾನ್ ಗಾಯಕ್ವಾಡ್ ಕ್ಯಾನ್ಸರ್ ಚಿಕಿತ್ಸೆಗೆ ಬಿಸಿಸಿಐ 1 ಕೋಟಿ ರೂ. ನೆರವು

Date:

Advertisements

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅನ್ಶುಮಾನ್‌ ಗಾಯಕ್ವಾಡ್ ಅವರ ಕ್ಯಾನ್ಸರ್‌ ಚಿಕಿತ್ಸೆಗೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ 1 ಕೋಟಿ ರೂ. ಪ್ರಕಟಿಸಿದ್ದಾರೆ. ಗಾಯಕ್ವಾಡ್‌ ಕುಟುಂಬದೊಂದಿಗೆ ಸ್ವತಃ ಮಾತನಾಡಿರುವ ಜಯ್‌ ಶಾ ಕಾಯಿಲೆಯಿಂದ ಚೇತರಿಸಿಕೊಳ್ಳಲು ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜಯ್‌ ಶಾ, ಗಾಯಕ್‌ವಾಡ್ ಅವರು ಈ ಕಷ್ಟದ ಸಮಯದಿಂದ ಹೊರಬರಲು ಅವರ ಕುಟುಂಬಕ್ಕೆ ಎಲ್ಲ ರೀತಿಯ ನೆರವಿನ ಜೊತೆ ಆತ್ಮವಿಶ್ವಾಸ ತುಂಬಲಾಗುವುದು ಎಂದು ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ಟಿಂ ಇಂಡಿಯಾ ಮಾಜಿ ಕ್ರಿಕೆಟಿಗ ಗಾಯಕ್ವಾಡ್‌ ಅವರ ಅನಾರೋಗ್ಯದ ಬಗ್ಗೆ ಮೊದಲ ಬಾರಿಗೆ ಮತ್ತೊಬ್ಬ ಮಾಜಿ ಕ್ರಿಕೆಟಿಗ ಸಂದೀಪ್‌ ಪಾಟೀಲ್‌ ಮಾತನಾಡಿದ್ದರು. ಲಂಡನ್‌ನಲ್ಲಿ ಅನ್ಶುಮಾನ್‌ ಗಾಯಕ್ವಾಡ್‌ ಅವರು ಕಳೆದ ಒಂದು ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.  ಅವರಿಗೆ ಹಣಕಾಸಿನ ನೆರವು ಅಗತ್ಯವಿದೆ ಎಂದು ತಿಳಿಸಿದ್ದರು.

Advertisements

ಮಾಜಿ ಆಟಗಾರ ದಿಲೀಪ್‌ ವೆಂಗಸರ್ಕರ್‌ ಕೂಡ ಬಿಸಿಸಿಐ ಖಜಾಂಜಿ ಅಶೀಸ್ ಸೆಲಾರ್‌ ಅವರಿಗೆ ಈ ವಿಷಯದ ಬಗ್ಗೆ ತಿಳಿಸಿ ನೆರವಿಗೆ ಮನವಿ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಚಾಂಪಿಯನ್ಸ್ ಟ್ರೋಫಿಯ ಪಾಕ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಯಾಣ ಅಸಂಭವ; ಹೈಬ್ರಿಡ್ ಮಾದರಿ ಸರಣಿ ಸಾಧ್ಯತೆ

ಇತ್ತೀಚಿಗೆ 1983ರ ಏಕದಿನ ವಿಶ್ವಕಪ್‌ ವಿಜೇತ ತಂಡದ ನಾಯಕರಾದ ಕಪಿಲ್‌ ದೇವ್‌ 71 ವರ್ಷದ ಗಾಯಕ್ವಾಡ್‌ ಅವರಿಗೆ ಆರ್ಥಿಕ ನೆರವು ನೀಡುವಂತೆ ಬಿಸಿಸಿಐಗೆ ಆಗ್ರಹಿಸಿದ್ದರು.

ಸೂಕ್ತ ನೆರವಿಲ್ಲದೆ ತೊಂದರೆ ಅನುಭವಿಸುತ್ತಿರುವ ಮಾಜಿ ಕ್ರಿಕೆಟಿಗರಿಗೆ ಬಿಸಿಸಿಐ ಸೂಕ್ತ ವ್ಯವಸ್ಥೆ ಒದಗಿಸಬೇಕು. ಬಿಸಿಸಿಐ ವಿಶ್ವದಲ್ಲಿಯೇ ಅತ್ಯಂತ ಶ್ರೀಮಂತ ಕ್ರಿಕೆಟ್ ಸಂಸ್ಥೆಯಾಗಿ ಹೊರಹೊಮ್ಮಿದೆ. ಪ್ರಸ್ತುತ ಆಟಗಾರರ ಜೊತೆ ಹಿಂದೆ ಸೇವೆ ಸಲ್ಲಿಸಿರುವ ಆಟಗಾರರತ್ತಲೂ ಗಮನಹರಿಸಬೇಕು ಎಂದು ಹೇಳಿದ್ದರು.

71 ವರ್ಷದ ಗಾಯಕ್ವಾಡ್ ಅವರು 70 ಹಾಗೂ 80ರ ದಶಕದ ಕ್ರಿಕೆಟಿಗರಾಗಿದ್ದು, 40 ಟೆಸ್ಟ್‌ಗಳಲ್ಲಿ 1985 ರನ್‌ ಪೇರಿಸಿದ್ದಾರೆ. ದ್ವಿಶಕದೊಂದಿಗೆ 2 ಶತಕ ಬಾರಿಸಿದ್ದು, ಅವರ ಅತ್ಯುತ್ತಮ ಸ್ಕೋರ್‌ 201 ಇದೆ. ಇದರ ಜೊತೆ 15 ಏಕದಿನ ಪಂದ್ಯಗಳನ್ನು ಗಾಯಕ್ವಾಡ್‌ ಆಡಿದ್ದಾರೆ. ಅಲ್ಲದೆ ಟೀಂ ಇಂಡಿಯಾಕ್ಕೆ ಎರಡು ಬಾರಿ ಹೆಡ್‌ ಕೋಚ್‌ ಆಗಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X