ಏಷ್ಯನ್ ಚಾಂಪಿಯನ್‌ಶಿಪ್ | ಕಂಚು ಗೆದ್ದ ಭವಾನಿ ದೇವಿ; ಫೆನ್ಸಿಂಗ್‌ನಲ್ಲಿ ಭಾರತಕ್ಕೆ ಮೊದಲ ಪದಕ

Date:

Advertisements

ಏಷ್ಯನ್ ಫೆನ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಭವಾನಿ ದೇವಿ ಕಂಚಿನ ಪದಕಕ್ಕೆ ಕೊರಳೊಡ್ಡುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.  

ಸೋಮವಾರ ಚೆನ್ನೈನಲ್ಲಿ ನಡೆದ ಕ್ವಾರ್ಟರ್‌ ಫೈನಲ್‌ನಲ್ಲಿ ಹಾಲಿ ವಿಶ್ವ ಚಾಂಪಿಯನ್ ಮಿಸಾಕಿ ಎಮುರಾ ಅವರನ್ನು ಭವಾನಿ ದೇವಿ 15-10 ಅಂಕಗಳ ಅಂತರದಲ್ಲಿ ಮಣಿಸಿ, ಸೆಮಿಫೈನಲ್‌ ಹಂತಕ್ಕೆ ಅರ್ಹತೆ ಪಡೆದರು. ಆ ಮೂಲಕ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಭಾರತಕ್ಕೆ ಮೊದಲ ಪದಕವನ್ನು ಖಚಿತಪಡಿಸಿದ್ದರು.

ಸೆಮಿಫೈನಲ್‌ನಲ್ಲಿ ಸೋಲು

Advertisements

ಹಾಲಿ ವಿಶ್ವ ಚಾಂಪಿಯನ್ ಮಿಸಾಕಿ ಎಮುರಾ ಅವರನ್ನು ಮಣಿಸಿದರೂ ಸಹ, ಸೆಮಿಫೈನಲ್‌ ಉಜ್ಬೇಕಿಸ್ತಾನ್‌ನ ಜೈನಾಬ್ ದೈಬೆಕೋವಾ ವಿರುದ್ಧ 15-14 ಅಂತರದಲ್ಲಿ  ಭವಾನಿ ರೋಚಕ ಸೋಲು ಕಂಡಿದ್ದಾರೆ. ಹೀಗಾಗಿ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

ಇದರೊಂದಿಗೆ ಏಷ್ಯನ್ ಫೆನ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ಕೀರ್ತಿಗೆ 29 ವರ್ಷ ವಯಸ್ಸಿನ ಭವಾನಿ ದೇವಿ ಪಾತ್ರರಾಗಿದ್ಧಾರೆ.

ವಿಶ್ವದ ನಂಬರ್ ಒನ್ ಆಟಗಾರ್ತಿ ಮಿಸಾಕಿ ವಿರುದ್ಧ ಭವಾನಿ ದೇವಿ ದಾಖಲಿಸಿದ ಮೊದಲ ಗೆಲುವು ಇದಾಗಿದೆ. ಮಿಸಾಕಿ ವಿರುದ್ಧದ ಈ ಹಿಂದಿನ ಮೂರೂ ಪಂದ್ಯಗಳಲ್ಲೂ ಭಾರತದ ಆಟಗಾರ್ತಿ ಸೋಲು ಕಂಡಿದ್ದರು.

ಫೆನ್ಸಿಂಗ್‌ನಲ್ಲಿ ಭಾರತದ ಹೆಮ್ಮೆ ಭವಾನಿ

ಫೆನ್ಸಿಂಗ್‌ ಕ್ರೀಡೆಯ ಇತಿಹಾಸದಲ್ಲೇ ಭಾರತಕ್ಕೆ ಮೊತ್ತ ಮೊದಲ ಪದಕ ಗೆದ್ದುಕೊಟ್ಟ ಕೀರ್ತಿ ಭವಾನಿ ದೇವಿ ಅವರದ್ದಾಗಿದೆ. 2017ರಲ್ಲಿ ಐಲ್ಯಾಂಡ್‌ನ ರೇಕ್‌ಜಾವಿಕ್‌ನಲ್ಲಿ ನಡೆದ ಟರ್ನೋಯ್ ಸ್ಯಾಟಲೈಟ್ ಫೆನ್ಸಿಂಗ್ ಚಾಂಪಿಯನ್‌ಶಿಪ್‌ನ ಫೈನಲ್‌ ಹಣಾಹಣಿಯಲ್ಲಿ ದೇವಿ ಅವರು, ಬ್ರಿಟನ್‌ನ ಸಾರಾ ಜೇನ್ ಹ್ಯಾಂಪ್ಸನ್ ಅವರನ್ನು 15-13 ಅಂಕಗಳಿಂದ ಸೋಲಿಸಿ ಚಿನ್ನದ ಪದಕವನ್ನು ಗೆದ್ದಿದ್ದರು.

ಇದಾದ ಬಳಿಕ ಕಾಮನ್‌ವೆಲ್ತ್‌ ಕೂಟದಲ್ಲಿ ಸತತ 2ನೇ ಬಾರಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ.  ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಭವಾನಿ ದೇವಿ, ಆ ಮೂಲಕ ಒಲಿಂಪಿಕ್ಸ್‌ನಲ್ಲಿ ಆಡಿದ ಭಾರತದ ಮೊದಲ ಫೆನ್ಸರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X