ಬಾರ್ಡರ್-ಗವಾಸ್ಕರ್ ಟ್ರೋಫಿ | ಟೀಮ್ ಇಂಡಿಯಾಕ್ಕೆ ಸೋಲು; ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಕನಸು ಭಗ್ನ

Date:

Advertisements

ಟೀಮ್ ಇಂಡಿಯಾ ವಿರುದ್ಧ ಸಿಡ್ನಿಯಲ್ಲಿ ಇಂದು ಮುಕ್ತಾಯ ಕಂಡ ಬಾರ್ಡರ್-ಗವಾಸ್ಕರ್ ಟ್ರೋಫಿಯ ಅಂತಿಮ ಟೆಸ್ಟ್‌ ಪಂದ್ಯವನ್ನು ಆಸ್ಟ್ರೇಲಿಯಾ ಗೆಲ್ಲುವುದರೊಂದಿಗೆ 5 ಟೆಸ್ಟ್ ಪಂದ್ಯಗಳ ಟೆಸ್ಟ್ ಸರಣಿಯನ್ನು 3-1 ರಿಂದ ವಶಪಡಿಸಿಕೊಂಡಿದೆ. ಜೊತೆಗೆ, ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್ ತಲುಪುವಲ್ಲಿ ಯಶಸ್ವಿಯಾಗಿದ್ದು, ರೋಹಿತ್ ಶರ್ಮಾ ಬಳಗದ ಕನಸು ಭಗ್ನಗೊಂಡಿದೆ.

ಭಾರತ ವಿರುದ್ಧದ ಐದನೇ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ 6 ವಿಕೆಟ್‌ಗಳಿಂದ ಗೆದ್ದುಕೊಂಡಿದೆ. ಇದರೊಂದಿಗೆ ಕಾಂಗರೂ ಪಡೆ ಸುದೀರ್ಘ ಹತ್ತು ವರ್ಷಗಳ ಬಳಿಕ ಭಾರತ ವಿರುದ್ಧ ಟೆಸ್ಟ್ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಆಸೀಸ್ 2014-15ರ ನಂತರ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಗೆದ್ದು ದಾಖಲೆ ಬರೆದಿದೆ. ಇದರೊಂದಿಗೆ ಆಸ್ಟ್ರೇಲಿಯಾ ಎದುರು ಟೀಮ್ ಇಂಡಿಯಾ ದಶಕಗಳ ನಂತರ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಕಳೆದುಕೊಂಡಿದ್ದು, ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದೆ.

Advertisements

ಈ ಐತಿಹಾಸಿಕ ಗೆಲುವಿನೊಂದಿಗೆ ಪ್ಯಾಟ್ ಕಮ್ಮಿನ್ಸ್ ಬಳಗವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ (ಡಬ್ಲ್ಯೂಟಿಸಿ) ಫೈನಲ್‌ಗೆ ಲಗ್ಗೆ ಇಟ್ಟಿದ್ದು, ಜೂನ್‌ನಲ್ಲಿ ಇಂಗ್ಲೆಂಡ್‌ನ ಲಾರ್ಡ್ಸ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಆಸ್ಟ್ರೇಲಿಯಾ ಎದುರಿಸಲಿದೆ.

ಸಿಡ್ನಿ ಟೆಸ್ಟ್ ಪಂದ್ಯದ ಮೂರನೇ ದಿನವಾದ ಭಾನುವಾರ ಭಾರೀ ಕುತೂಹಲ ಮೂಡಿಸಿತ್ತು. 4 ರನ್‌ಗಳ ಮುನ್ನಡೆಯೊಂದಿಗೆ ಎರಡನೇ ದಿನ ಎರಡನೇ ಇನ್ನಿಂಗ್ಸ್‌ ಆರಂಭಿಸಿದ್ದ ಟೀಮ್ ಇಂಡಿಯಾ, ರಿಷಭ್ ಪಂತ್ ಅವರ ಅರ್ಧಶತಕ(61 ರನ್)ದ ನೆರವಿನಿಂದ ಮೂರನೇ ದಿನ 157 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗಿತ್ತು. ಆ ಮೂಲಕ ಆಸ್ಟ್ರೇಲಿಯಾ ಗೆಲುವಿಗೆ 162 ರನ್‌ಗಳ ಗುರಿ ನೀಡಿತ್ತು. ಈ ಗುರಿಯನ್ನು ಆತಿಥೇಯರು, 27 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಮುಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನು ಓದಿದ್ದೀರಾ? 150 ಕಿ.ಮೀ ಈಜಿ ದಾಖಲೆ ಬರೆದ 52 ವರ್ಷದ ಮಹಿಳೆ; ಸಿಎಂ ಶ್ಲಾಘನೆ!

ಈ ಪಂದ್ಯಕ್ಕೆ ಭಾರತ ತಂಡದ ಹಂಗಾಮಿ ನಾಯಕ ಜಸ್ಪ್ರೀತ್ ಬುಮ್ರಾ ಅವರು ಬ್ಯಾಟಿಂಗ್ ಮಾಡಿದ್ದಾರಾದರೂ, ಬೆನ್ನುನೋವಿನಿಂದಾಗಿ ಬೌಲಿಂಗ್‌ ಮಾಡಲು ಸಾಧ್ಯವಾಗಲಿಲ್ಲ. ಸರಣಿಯಲ್ಲಿ 32 ವಿಕೆಟ್ ಪಡೆದಿದ್ದ ಬುಮ್ರಾ ವಿಶ್ರಾಂತಿ ಪಡೆದುಕೊಳ್ಳಬೇಕಾಯಿತು. ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಭಾರತ ತಂಡ ಸೋಲನುಭವಿಸಬೇಕಾಯಿತು.

ಸರಣಿಯ 9 ಇನ್ನಿಂಗ್ಸ್‌ನಲ್ಲಿ 32 ವಿಕೆಟ್ ಪಡೆದಿದ್ದ ಜಸ್ಪ್ರೀತ್ ಬುಮ್ರಾ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರೆ, ಸಿಡ್ನಿಯ ಪಂದ್ಯದಲ್ಲಿ 10 ವಿಕೆಟ್ ಪಡೆದಿದ್ದ ಆಸ್ಟ್ರೇಲಿಯಾ ಬೌಲರ್ ಸ್ಕಾಟ್ ಬೋಲ್ಯಾಂಡ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X