ಚೆಸ್ ವಿಶ್ವಕಪ್ | 2ನೇ ಪಂದ್ಯವೂ​ ಡ್ರಾ: ನಾಳೆ ಟೈಬ್ರೇಕರ್‌ನಲ್ಲಿ ವಿಜೇತರ ನಿರ್ಧಾರ

Date:

Advertisements

ಭಾರತದ ಆರ್​. ಪ್ರಜ್ಞಾನಂದ ಹಾಗೂ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸೆನ್ ನಡುವೆ ಅಝರ್​ಬೈಜಾನ್​ನಲ್ಲಿ ನಡೆಯುತ್ತಿರುವ ಚೆಸ್ ವಿಶ್ವಕಪ್ 2023ರ​ ಫೈನಲ್​ನ 2ನೇ ಪಂದ್ಯ ಕೂಡ ಡ್ರಾನಲ್ಲಿ ಅಂತ್ಯಗೊಂಡಿದೆ.

ಈ ಪಂದ್ಯದ ಮೊದಲ ಪಂದ್ಯ​ ಕೂಡ ಡ್ರಾ ಆಗಿತ್ತು. ಇದೀಗ ಫೈನಲ್ ಪಂದ್ಯದ 2ನೇ ಕ್ಲಾಸಿಕ್ ಆಟ ಕೂಡ ಸಮಬಲದೊಂದಿಗೆ 1-1 ಅಂತರದಿಂದ ಅಂತ್ಯವಾಗಿದೆ. ಹೀಗಾಗಿ ಬುಧವಾರ(ಆಗಸ್ಟ್‌ 24) ನಡೆಯಲಿರುವ ಟೈಬ್ರೇಕರ್ ಪಂದ್ಯದ​ ಮೂಲಕ ಅಂತಿಮ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ.

ಮಂಗಳವಾರ ನಡೆದ ಫೈನಲ್ ಪಂದ್ಯದ ಮೊದಲ ಗೇಮ್​ನಲ್ಲಿ ನಾರ್ವೆಯ ಕಾರ್ಲ್​ಸೆನ್ ಅವರನ್ನು ಆರಂಭದಲ್ಲೇ ಪ್ರಜ್ಞಾನಂದ ಅವರು ಒತ್ತಡಕ್ಕೆ ಸಿಲುಕಿಸುವಲ್ಲಿ ಯಶಸ್ವಿಯಾಗಿದ್ದರು. ಅಲ್ಲದೆ ಮೊದಲ ಸುತ್ತು 35 ನಡೆಗಳ ನಂತರ ಡ್ರಾದಲ್ಲಿ ಕೊನೆಗೊಂಡಿತ್ತು.

Advertisements

ಈ ಸುದ್ದಿ ಓದಿದ್ದೀರಾ? ಚೆಸ್‌ನಲ್ಲಿ ಮಿಂಚುತ್ತಿರುವ ತಮಿಳುನಾಡಿನ ಯುವಕ ಪ್ರಜ್ಞಾನಂದ ಬಗ್ಗೆ ನಿಮಗೆಷ್ಟು ಗೊತ್ತು?

ಬುಧವಾರ ನಡೆದ 2ನೇ ಪಂದ್ಯದಲ್ಲಿ ಕಪ್ಪು ಕಾಯಿಗಳೊಂದಿಗೆ ಆಟ ಆರಂಭಿಸಿದ್ದ ಪ್ರಜ್ಞಾನಂದ ಆರಂಭದಲ್ಲೇ ಸಮಬಲದ ಹೋರಾಟ ನಡೆಸಿದ್ದರು. ಕಾರ್ಲ್​ಸೆನ್ ಆಟಕ್ಕೆ ಅತ್ಯುತ್ತಮ ಚೆಕ್​ ನಡೆಗಳ ಮೂಲಕ ಪ್ರಜ್ಞಾನಂದ ಎದುರೇಟು ನೀಡಿದ್ದರು. ಅಂತಿಮವಾಗಿ 22 ನಡೆಗಳ ನಂತರ ಪಂದ್ಯವು ಸಮವಾಗಿತ್ತು. ಈ ಸಮಬಲವನ್ನು ಕಾಯ್ದುಕೊಳ್ಳುವಲ್ಲಿ ಇಬ್ಬರು ಆಟಗಾರರು ಯಶಸ್ವಿಯಾದರು. ಅಲ್ಲದೆ 30 ನಡೆಗಳ ನಂತರ ಪಂದ್ಯವನ್ನು ಡ್ರಾಗೊಳಿಸಲು ಇಬ್ಬರೂ ಆಟಗಾರರು ನಿರ್ಧರಿಸಿದರು.

ಟೈಬ್ರೇಕ್​​ರ್​ನಲ್ಲಿ ಫಲಿತಾಂಶ ಹೇಗೆ?

ಎರಡು ಕ್ಲಾಸಿಕ್ ಗೇಮ್​ಗಳಲ್ಲೂ ಫಲಿತಾಂಶ ಹೊರಬರದ ಕಾರಣ ಪಂದ್ಯವನ್ನು ಟೈಬ್ರೇಕರ್​ನತ್ತ ಕೊಂಡೊಯ್ಯಲಾಗಿದೆ. ಇಲ್ಲಿ ಇಬ್ಬರು ಆಟಗಾರರಿಗೂ 10-10 ನಿಮಿಷಗಳ ರ‍್ಯಾಪಿಡ್ ಗೇಮ್​ಗಳನ್ನು ಆಡಿಸಲಾಗುತ್ತದೆ. ಇದರಲ್ಲೂ ವಿಜೇತ ಯಾರೆಂದು ನಿರ್ಧಾರವಾಗದಿದ್ದರೆ 5 ನಿಮಿಷಗಳ ಎರಡು ರ್‍ಯಾಪಿಡ್​ ಗೇಮ್​ಗಳ ಅವಕಾಶ ನೀಡಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಏಷ್ಯಾ ಕಪ್‌ಗೆ ಭಾರತ ತಂಡ ಪ್ರಕಟ: 18ರ ಬಳಗದಲ್ಲಿ ಇಬ್ಬರು ಕನ್ನಡಿಗರಿಗೆ ಸ್ಥಾನ

ಇನ್ನು ರ‍್ಯಾಪಿಡ್​ ಗೇಮ್​ಗಳು ಕೂಡ ಡ್ರಾಗೊಂಡರೆ ಸಡನ್ ಡೆತ್ ಮೋಡ್‌ನಲ್ಲಿ ಒಂದೇ ಬ್ಲಿಟ್ಝ್ ಗೇಮ್​ ಆಡಲಾಗುತ್ತದೆ. ಇದರಲ್ಲಿ ಗೆದ್ದವರು ಚಾಂಪಿಯನ್ ಆಗಲಿದ್ದಾರೆ. ಹೀಗಾಗಿ ನಾಳಿನ ಪಂದ್ಯ ರೋಚಕತೆ ಪಡೆಯುವ ಸಾಧ್ಯತೆಯಿದೆ.

ಇದಕ್ಕೂ ಮುನ್ನ ವಿಶ್ವದ 3ನೇ ಚೆಸ್ ತಾರೆ ಫ್ಯಾಬಿಯಾನೊ ಕರುವಾನಾ ಅವರೊಂದಿಗೆ ನಡೆದ ಸೆಮಿಫೈನಲ್​ನಲ್ಲಿ ಪ್ರಜ್ಞಾನಂದ ಟೈಬ್ರೇಕರ್​ ಮೂಲಕವೇ ಗೆಲುವು ಸಾಧಿಸಿ ಫೈನಲ್‌ ಪ್ರವೇಶಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X