BREAKING NEWS | ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಚೇತೇಶ್ವರ ಪೂಜಾರ

Date:

Advertisements

ಟೆಸ್ಟ್ ಕ್ರಿಕೆಟ್‌ ದಿಗ್ಗಜರಲ್ಲಿ ಒಬ್ಬರಾದ ಚೇತೇಶ್ವರ ಪೂಜಾರ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಭಾನುವಾರ ನಿವೃತ್ತಿ ಘೋಷಿಸಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಿರಿಯ ಆಟಗಾರರನ್ನು ಟೆಸ್ಟ್‌ ಕ್ರಿಕೆಟ್‌ಗೆ ಆಯ್ಕೆ ಮಾಡುತ್ತಿರುವ ಹಿನ್ನೆಲೆ ದೀರ್ಘಕಾಲದಿಂದ ಟೆಸ್ಟ್‌ನಲ್ಲಿ ಕಾಣಿಸಿಕೊಳ್ಳದ ಪೂಜಾರ ಭಾವನಾತ್ಮಕ ಪೋಸ್ಟ್ ಒಂದು ಮಾಡಿ ನಿವೃತ್ತಿ ಘೋಷಿಸಿದ್ದಾರೆ.

ಟೆಸ್ಟ್ ಕ್ರಿಕೆಟ್‌ ದಿಗ್ಗಜರಲ್ಲಿ ಒಬ್ಬರಾದ ಚೇತೇಶ್ವರ ಪೂಜಾರ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಭಾನುವಾರ ನಿವೃತ್ತಿ ಘೋಷಿಸಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಿರಿಯ ಆಟಗಾರರನ್ನು ಟೆಸ್ಟ್‌ ಕ್ರಿಕೆಟ್‌ಗೆ ಆಯ್ಕೆ ಮಾಡುತ್ತಿರುವ ಹಿನ್ನೆಲೆ ದೀರ್ಘಕಾಲದಿಂದ ಟೆಸ್ಟ್‌ನಲ್ಲಿ ಕಾಣಿಸಿಕೊಳ್ಳದ ಪೂಜಾರ ಭಾವನಾತ್ಮಕ ಪೋಸ್ಟ್ ಒಂದು ಮಾಡಿ ನಿವೃತ್ತಿ ಘೋಷಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಹುಲ್‌ಗೆ ಹಿಂಬಡ್ತಿ; ಜಡೇಜಾಗೆ ‘ಎ+’ ಶ್ರೇಣಿಗೆ ಬಡ್ತಿ

Advertisements

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಪೂಜಾರ, “ಭಾರತೀಯ ಜೆರ್ಸಿ ಧರಿಸುವುದು, ರಾಷ್ಟ್ರಗೀತೆ ಹಾಡುವುದು ಮತ್ತು ನಾನು ಪ್ರತಿ ಬಾರಿ ಮೈದಾನಕ್ಕೆ ಕಾಲಿಟ್ಟಾಗಲೂ ನನ್ನ ಕೈಲಾದಷ್ಟು ಪ್ರಯತ್ನಿಸುವುದು – ಇವೆಲ್ಲವುದರ ನಿಜವಾದ ಅರ್ಥವನ್ನು ಪದಗಳಲ್ಲಿ ಹೇಳುವುದು ಅಸಾಧ್ಯ. ಆದರೆ ಅಪಾರ ಕೃತಜ್ಞತೆಯಿಂದ ನಾನು ಎಲ್ಲಾ ರೀತಿಯ ಭಾರತೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ಎಲ್ಲಾ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

“ನನ್ನ ಕ್ರಿಕೆಟ್ ವೃತ್ತಿಜೀವನದುದ್ದಕ್ಕೂ ಅವಕಾಶ ಮತ್ತು ಬೆಂಬಲ ನೀಡಿದ್ದಕ್ಕಾಗಿ ಬಿಸಿಸಿಐ ಮತ್ತು ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್‌ಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ವರ್ಷಗಳಲ್ಲಿ ನಾನು ಪ್ರತಿನಿಧಿಸಲು ಸಾಧ್ಯವಾದ ಎಲ್ಲಾ ತಂಡಗಳು, ಫ್ರಾಂಚೈಸಿಗಳು ಮತ್ತು ಕೌಂಟಿಗಳಿಗೂ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

“ನನ್ನ ಮಾರ್ಗದರ್ಶಕರು, ತರಬೇತುದಾರರು ಮತ್ತು ಆಧ್ಯಾತ್ಮಿಕ ಗುರುಗಳ ಅಮೂಲ್ಯ ಮಾರ್ಗದರ್ಶನವಿಲ್ಲದೆ ನಾನು ಇಷ್ಟು ದೂರ ತಲುಪಲು ಸಾಧ್ಯವಾಗುತ್ತಿರಲಿಲ್ಲ. ಅವರಿಗೆ ನಾನು ಯಾವಾಗಲೂ ಋಣಿಯಾಗಿರುತ್ತೇನೆ” ಎಂದು ಪೋಸ್ಟ್‌ನಲ್ಲಿ ಬರೆದಿದ್ದಾರೆ.

“ನನ್ನ ಎಲ್ಲಾ ತಂಡದ ಸದಸ್ಯರು, ಸಹಾಯಕ ಸಿಬ್ಬಂದಿ, ನೆಟ್ ಬೌಲರ್‌ಗಳು, ವಿಶ್ಲೇಷಕರು, ಲಾಜಿಸ್ಟಿಕ್ಸ್ ತಂಡ, ಅಂಪೈರ್‌ಗಳು, ಮೈದಾನದ ಸಿಬ್ಬಂದಿ, ಸ್ಕೋರರ್‌ಗಳು, ಮಾಧ್ಯಮ ಸಿಬ್ಬಂದಿ ಮತ್ತು ನಾವು ಪ್ರೀತಿಸುವ ಈ ಆಟವನ್ನು ಸ್ಪರ್ಧಿಸಲು ಮತ್ತು ಆಡಲು ಅನುವು ಮಾಡಿಕೊಡಲು ತೆರೆಮರೆಯಲ್ಲಿ ಅವಿಶ್ರಾಂತವಾಗಿ ಶ್ರಮಿಸುವ ಎಲ್ಲರಿಗೂ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರದೇಶದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: ಸಾಕ್ಷಿ ದೂರುದಾರನ ಬಂಧನ

ಧರ್ಮಸ್ಥಳ ಪ್ರದೇಶದಲ್ಲಿ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಲಾಗಿದೆ ಎಂಬ...

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

2025ರ ಏಕದಿನ ವಿಶ್ವಕಪ್ ಪಂದ್ಯಗಳು ಬೆಂಗಳೂರಿನಿಂದ ಸ್ಥಳಾಂತರ

2025 ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ವೇಳಾಪಟ್ಟಿಯಲ್ಲಿ ದೊಡ್ಡ ಬದಲಾವಣೆಯಾಗಿದೆ....

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X