ಕ್ರಿಕೆಟ್ | ಮುಂಬೈ ತಂಡ ತೊರೆದು ಗೋವಾ ಸೇರುತ್ತೇನೆಂದ ಯಶಸ್ವಿ ಜೈಸ್ವಾಲ್

Date:

Advertisements

ಭಾರತೀಯ ಕ್ರಿಕೆಟ್‌ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅವರು ರಣಜಿಯಲ್ಲಿ ಮುಂಬೈ ತಂಡ ತೊರೆಯಲು ನಿರ್ಧರಿಸಿದ್ದಾರೆ. ಗೋವಾ ತಂಡ ಸೇರುವುದಾಗಿ ಹೇಳಿಕೊಂಡಿದ್ದಾರೆ.

ವೈಯಕ್ತಿಕ ಕಾರಣಗಳನ್ನು ಉಲ್ಲೆಖಿಸಿ ಜೈಸ್ವಾಲ್ ಅವರು ‘ಮುಂಬೈ ಕ್ರಿಕೆಟ್ ಅಸೋಸಿಯೇಷನ್‌’ಗೆ (ಎಂಸಿಎ) ಪತ್ರ ಬರೆದಿದ್ದಾರೆ. ತಮ್ಮನ್ನು ತಂಡದಿಂದ ಇಡುಗಡೆಗೊಳಿಸುವಂತೆ ವಿನಂತಿ ಮಾಡಿದ್ದಾರೆ. ಅಲ್ಲದೆ, 2025-26ನೇ ರಣಜಿ ಕ್ರಿಕೆಟ್ ಋತುವಿನಿಂದ ಗೋವಾ ತಂಡದಲ್ಲಿ ಆಡುವುದಾಗಿ ಹೇಳಿದ್ದಾರೆ.

ಈ ಬಗ್ಗೆ ಎಂಸಿಎ ಅಧಿಕಾರಿ ಕೂಡ ಖಾತ್ರಿ ಪಡಿಸಿದ್ದು, “ಜೈಸ್ವಾಲ್ ನಡೆ ಆಶ್ಚರ್ಯಕರವಾಗಿದೆ. ಅವರು ಈ ರೀತಿಯ ನಿರ್ಧಾರ ತೆಗೆದುಕೊಳ್ಳಲು ಪ್ರಮುಖ ಕಾರಣ ಇರಬಹುದು. ಮುಂಬೈ ತಂಡದಿಂದ ತಮ್ಮನ್ನು ಬಿಡುಗಡೆ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ. ಅವರ ವಿನಂತಿಯನ್ನು ನಾವು ಸ್ವೀಕರಿಸಿದ್ದೇವೆ” ಎಂದು ಹೇಳಿದ್ದಾರೆ.

Advertisements

ಗೋವಾ ಕ್ರಿಕೆಟ್ ಅಸೋಸಿಯೇಷನ್‌ನ ಕಾರ್ಯದರ್ಶಿ ಶಂಬಾ ದೇಸಾಯಿ ಕೂಡ ಪ್ರತಿಕ್ರಿಯಿಸಿದ್ದು, “”ಜೈಸ್ವಾಲ್ ನಮ್ಮ ತಂಡದಲ್ಲಿ ಆಡಲು ಬಯಸಿದ್ದಾರೆ. ಅವರನ್ನು ನಾವು ಸ್ವಾಗತಿಸುತ್ತೇವೆ. ಅವರು ಗೋವಾ ತಂಡವನ್ನು ಮುನ್ನಡೆಸಬಹುದು. ಆದಾಗ್ಯೂ, ತಂಡದಲ್ಲಿ ಅವರ ಲಭ್ಯತೆ ಯಾವ ರೀತಿಯಲ್ಲಿರುತ್ತದೆ ಎಂಬುದರ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ” ಎಂದು ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಐಪಿಎಲ್ ಕ್ರಿಕೆಟ್ | ಆಟಗಾರರು, ಅಭಿಮಾನಿಗಳು ಮತ್ತು ಸೋಷಿಯಲ್ ಮೀಡಿಯಾ ಎಂಬ ಕಿಂದರಿಜೋಗಿ

ಇತ್ತೀಚೆಗೆ, ಭಾರತೀಯ ಕ್ರಿಕೆಟ್‌ ತಂಡದಲ್ಲಿ ಇರುವ ಎಲ್ಲ ಆಟಗಾರರು ಕಡ್ಢಾಯವಾಗಿ ದೇಶಿಯ ಕ್ರಿಕೆಟ್ (ರಣಜಿ)ಯಲ್ಲಿ ಆಡಲೇಬೇಕೆಂದು ಬಿಸಿಸಿಐ ನಿಯಮ ರೂಪಿಸಿದೆ. ಈ ಹಿನ್ನೆಲೆಯಲ್ಲಿ ಜೈಸ್ವಾಲ್ 2024-25ನೇ ಋತುವಿನ ರಣಜಿ ಟೂರ್ನಿಯಲ್ಲಿ ಮುಂಬೈ ತಂಡದಲ್ಲಿ ಆಡಿದ್ದರು. ಇದೀಗ, ತಂಡ ತೊರೆಯಲು ನಿರ್ಧರಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X