ಐಪಿಎಲ್ 2023 | ಸಿಎಸ್‌ಕೆ ಬ್ಯಾಟ್ಸ್‌ಮನ್‌ಗಳ ಅಬ್ಬರಕ್ಕೆ ನಲುಗಿದ ಕೋಲ್ಕತ್ತಾ; ಕೆಕೆಆರ್‌ಗೆ ಸತತ ನಾಲ್ಕನೇ ಸೋಲು

Date:

ಅಜಿಂಕ್ಯ ರಹಾನೆ, ಶಿವಂ ದುಬೆ, ಡೇವೋನ್ ಕಾನ್ವೇ ಹಾಗೂ ರುತುರಾಜ್ ಗಾಯಕ್ವಾಡ್ ಅವರ ಸ್ಪೋಟಕ ಬ್ಯಾಟಿಂಗ್‌ ಹಾಗೂ ಬೌಲರ್‌ಗಳ ಕರಾರುವಕ್ಕ್ ದಾಳಿಯಿಂದ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಕೋಲ್ಕತ್ತಾ ನೈಟ್‌ ರೈಡರ್ಸ್ ವಿರುದ್ಧ 49 ರನ್‌ಗಳಿಂದ ಜಯಗಳಿಸಿತು.

- Advertisement -

ಕೋಲ್ಕತ್ತಾದ ಈಡನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ಐಪಿಎಲ್‌ 16ನೇ ಆವೃತ್ತಿಯ 33ನೇ ಪಂದ್ಯದಲ್ಲಿ ಸಿಎಸ್‌ಕೆ ನೀಡಿದ್ದ 235 ರನ್‌ಗಳ ಸವಾಲನ್ನು ಬೆನ್ನಟ್ಟಿದ ಕೆಕೆಆರ್‌ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 53 ರನ್‌ಗಳಷ್ಟೆ ಗಳಿಸಲು ಶಕ್ತವಾಯಿತು. ಜೇಸನ್‌ ರಾಯ್‌ ಹಾಗೂ ರಿಂಕು ಸಿಂಗ್‌ ಅಬ್ಬರಿಸಿದರೂ ಗುರಿ ಮುಟ್ಟಲಾಗಲಿಲ್ಲ. ಇದರೊಂದಿಗೆ ಸಿಎಸ್‌ಕೆ ಟೂರ್ನಿಯಲ್ಲಿ 5ನೇ ಗೆಲುವು ದಾಖಲಿಸಿದರೆ, ಕೆಕೆಆರ್‌ ಸತತ ನಾಲ್ಕನೇ ಸೋಲು ಕಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಜೇಸನ್‌ ರಾಯ್‌ ಕೇವಲ 26 ಎಸೆತಗಳಲ್ಲಿ 5 ಸಿಕ್ಸರ್‌ ಹಾಗೂ 5 ಬೌಂಡರಿಯೊಂದಿಗೆ 61 ರನ್‌ ಚಚ್ಚಿದರು. ರಿಂಕು ಸಿಂಗ್‌ 32 ಚೆಂಡುಗಳಲ್ಲಿ 4 ಸಿಕ್ಸರ್ ಹಾಗೂ 3 ಬೌಂಡರಿಯೊಂದಿಗೆ ಅಜೇಯ 53 ರನ್‌ ಪೇರಿಸಿದರು. ಉಳಿದಂತೆ ಇತರ ಆಟಗಾರ್ಯಾರು ಉತ್ತಮ ಪ್ರದರ್ಶನ ತೋರಲಿಲ್ಲ.

ಸಿಎಸ್‌ಕೆ ಪರ ತುಷಾರ್‌ ದೇಶಪಾಂಡೆ 43/2, ಮಹೀಶ್ ತೀಕ್ಷಣಾ 32/2 ವಿಕೆಟ್ ಪಡೆದು ಯಶಸ್ವಿ ಬೌಲರ್‌ಗಳೆನಿಸಿದರು

ಇದಕ್ಕೂ ಮೊದಲು ಟಾಸ್‌ ಸೋತು ಬ್ಯಾಟಿಂಗ್‌ ಆರಂಭಿಸಿದ ಧೋನಿ ಸಾರಥ್ಯದ ಚೆನ್ನೈ ಸೂಪರ್‌ ಕಿಂಗ್ಸ್ ಮೊದಲ ಓವರ್‌ನಿಂದಲೇ ಬೌಂಡರಿ, ಸಿಕ್ಸರ್‌ ಬಾರಿಸತೊಡಗಿದರು. ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್ ಗಾಯಕ್ವಾಡ್ ಹಾಗೂ ಡೆವೋನ್ ಕಾನ್ವೆ ಜೋಡಿ ಮೊದಲ ವಿಕೆಟ್‌ಗೆ 73 ರನ್‌ಗಳ ಜೊತೆಯಾಟ ನೀಡಿ ಬೇರ್ಪಟ್ಟಿತು. ಋತುರಾಜ್ 20 ಎಸೆತಗಳಲ್ಲಿ 35 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ನಂತರ ಅರ್ಧ ಶಥಕ ಸಿಡಿಸಿದ ಕಾನ್ವೆ 40 ಎಸೆತಗಳಲ್ಲಿ 56 ರನ್‌ಗಳಿಸಿ ಔಟಾದರು. ನಂತರ ಜೊತೆಯಾಗಿದ್ದು ರಹಾನೆ ಹಾಗೂ ದುಬೆ ಜೋಡಿ.

ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಶಿವಂ ದುಬೆ ಕೇವಲ 21 ಎಸೆತಗಳಲ್ಲಿ 5 ಸಿಕ್ಸರ್ 2 ಬೌಂಡರಿಯೊಂದಿಗೆ 50 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಆದರೆ ಅಜಿಂಕ್ಯಾ ರಹಾನೆ ಕೊನೆಯವರೆಗೂ ವಿಕೆಟ್ ಕಳೆದುಕೊಳ್ಳದೆ ಅಬ್ಬರದ ಬ್ಯಾಟಿಂಗ್ ನಡೆಸಿದರು. ಕೇವಲ 29 ಎಸೆತಗಳಲ್ಲಿ ಅವರು 71 ರನ್‌ ಬಾರಿಸಿ ಅಜೇಯವಾಗುಳಿದರು. ಇವರ ಅಮೋಘ ಆಟದಲ್ಲಿ 5 ಸಿಕ್ಸರ್‌ ಹಾಗೂ 6 ಬೌಂಡರಿಗಳಿದ್ದವು.

ಇನ್ನು ಕೊನೆಯ ಕ್ಷಣದಲ್ಲಿ ರವೀಂದ್ರ ಜಡೇಜಾ 8 ಎಸೆತಗಳನ್ನು ಎದುರಿಸಿ 18 ರನ್ ಬಾರಿಸಿ ವಿಕೆಟ್ ಕಳೆದುಕೊಂಡರು. ಎಂಎಸ್ ಧೋನಿ 2 ರನ್‌ಗಳಿಸಿ ಅಜೇಯವಾಗುಳಿದರು. ಈ ಮೂಲಕ ಸಿಎಸ್‌ಕೆ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 235 ರನ್‌ಗಳಿಸಿದೆ.

ಇದು ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ದಾಖಲಿಸಿದ 3ನೇ ಅತೀದೊಡ್ಡ ಮೊತ್ತವಾಗಿದೆ. 2010ರಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಚೆನ್ನೈ 5 ವಿಕೆಟ್ ಕಳೆದುಕೊಂಡು 246 ರನ್ ಸಿಡಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನ ಕ್ರಿಕೆಟ್‌ಗೆ ಮತ್ತೆ ‘ಮ್ಯಾಚ್ ಫಿಕ್ಸಿಂಗ್’ ಕಳಂಕ: 7 ಮಂದಿ ತಂಡದಿಂದ ಔಟ್

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ನಡುವೆಯೇ ಪಾಕಿಸ್ತಾನ...

3 ಗಂಟೆಗಳ ರೋಚಕ ಹೋರಾಟ: ಯುಎಸ್ ಓಪನ್ ಮೊದಲ ಸುತ್ತಿನಲ್ಲೇ ವಿಲಿಯಮ್ಸ್ ಸಹೋದರಿಯರಿಗೆ ಸೋಲು

ಅಮೆರಿಕನ್ ಓಪನ್ ಟೆನಿಸ್ ಟೂರ್ನಿಯಲ್ಲಿ ವಿಸ್ಮಯಕಾರಿ ಪುನರಾಗಮನದ ನಿರೀಕ್ಷೆಯಲ್ಲಿದ್ದ ಲೆಜೆಂಡರಿ ಜೋಡಿ...

75ನೇ ವರ್ಷದ ಬಾಂಧವ್ಯ: ಭಾರತ-ಜಪಾನ್ ನಡುವೆ ಚೊಚ್ಚಲ ಟಿ20 ಕ್ರಿಕೆಟ್

ಭಾರತ ಹಾಗೂ ಜಪಾನ್ ನಡುವಿನ 75ನೇ ವರ್ಷದ ರಾಜತಾಂತ್ರಿಕ ಬಾಂಧವ್ಯದ ಸಂಭ್ರಮಾಚರಣೆಯ...

ಏಷ್ಯನ್ ಗೇಮ್ಸ್ | ಟೀಂ ಇಂಡಿಯಾಗೆ ‘ವೆರಿ ವೆರಿ ಸ್ಪೆಷಲ್’; ವಿವಿಎಸ್‌ ಲಕ್ಷ್ಮಣ್ ಹೆಡ್‌ ಕೋಚ್!

ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ, ಶ್ರೇಯಸ್ ಅಯ್ಯರ್ ಹಾಗೂ...