ಐಪಿಎಲ್ | ಚೆನ್ನೈಗೆ ಸುಲಭ ತುತ್ತಾದ ಕೆಕೆಆರ್: ಏಳು ವಿಕೆಟ್‌ಗಳ ಭರ್ಜರಿ ಗೆಲುವು

Date:

Advertisements

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸೋಮವಾರ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಏಳು ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು.

ಈ ಗೆಲುವಿನೊಂದಿಗೆ ಚೆನ್ನೈ ತಂಡ ತಮ್ಮ ತವರಿನ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಮಣಿಸಿ ಗೆಲುವಿನ ಟ್ರ್ಯಾಕ್‌ಗೆ ಮರಳಿದರೆ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಪ್ರಸಕ್ತ ಋತುವಿನಲ್ಲಿ ಮೊದಲ ಸೋಲುಂಡಿದೆ.

138 ರನ್‌ಗಳ ಸಾಧಾರಣ ಗುರಿ ಪಡೆದ ಸಿಎಸ್‌ಕೆ ತಂಡವು ನಾಯಕ ರುತುರಾಜ್ ಗಾಯಕ್ವಾಡ್ ಅವರ ಅಮೋಘ ಅರ್ಧಶತಕದ ನೆರವಿನಿಂದ 17.4 ಓವರ್‌ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು ಸುಲಭವಾಗಿ ಗೆಲುವಿನ ದಡ ಸೇರಿತು.

Advertisements

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟಿಂಗ್ ಆರಂಭಿಸಿದ ನಾಯಕ ರುತುರಾಜ್ ಗಾಯಕ್ವಾಡ್ ಮತ್ತು ರಚಿನ್ ರವೀಂದ್ರ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 3.2 ಓವರ್‌ಗಳಲ್ಲಿ 27 ರನ್‌ಗಳ ಜೊತೆಯಾಟ ನೀಡಿತು. ಈ ವೇಳೆ ರಚಿನ್ ರವೀಂದ್ರ 8 ಎಸೆತಗಳಲ್ಲಿ 3 ಬೌಂಡರಿ ಸಹಿತ 15 ರನ್ ಗಳಿಸಿ ಔಟಾದರು.

ನಂತರ ಬಂದ ಡೆರಿಲ್ ಮಿಚೆಲ್ 19 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 25 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಯುವ ಬ್ಯಾಟರ್ ಶಿವಂ ದುಬೆ ಸ್ಫೋಟಕ ಬ್ಯಾಟಿಂಗ್ ಮಾಡಿ 18 ಎಸೆತಗಳಲ್ಲಿ 1 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಮೇತ 28 ರನ್ ಗಳಿಸಿದರು.

ನಾಯಕ ರುತುರಾಜ್ ಗಾಯಕ್ವಾಡ್ ಕೊನೆಯವರೆಗೂ ಕ್ರೀಸ್‌ನಲ್ಲಿದ್ದು ಸಿಎಸ್‌ಕೆ ತಂಡವನ್ನು ಗೆಲುವಿನ ದಡ ತಲುಪಿಸಿದರು. ಗಾಯಕ್ವಾಡ್ 58 ಎಸೆತಗಳಲ್ಲಿ 9 ಬೌಂಡರಿಗಳ ನೆರವಿನಿಂದ 67 ರನ್ ಬಾರಿಸಿ ಅಜೇಯರಾಗುಳಿದರು. ಕೊನೆಯಲ್ಲಿ ಬಂದ ಮಾಜಿ ನಾಯಕ ಎಂಎಸ್ ಧೋನಿ ಔಟಾಗದೆ  1 ರನ್ ಗಳಿಸಿದರು.

ಕೆಕೆಆರ್ ಪರ ಬೌಲಿಂಗ್‌ನಲ್ಲಿ ವೈಭವ್ ಅರೋರಾ 2 ವಿಕೆಟ್ ಪಡೆದರೆ, ಸುನಿಲ್ ನರೇನ್ 1 ವಿಕೆಟ್ ತಮ್ಮದಾಗಿಸಿಕೊಂಡರು.

ಇದಕ್ಕೂ ಮುನ್ನ ಬ್ಯಾಟಿಂಗ್ ನಡೆಸಿದ್ದ ಕೆಕೆಆರ್, ಉತ್ತಮ ರನ್ ಕಲೆ ಹಾಕುವಲ್ಲಿ ವಿಫಲವಾಯಿತು. ಇನ್ನಿಂಗ್ಸ್ ಆರಂಭಿಸಿದ ಫಿಲ್ ಸಾಲ್ಟ್ ಮತ್ತು ಸುನಿಲ್ ನರೇನ್ ಉತ್ತಮ ಆರಂಭ ನೀಡಲಿಲ್ಲ.

ಫಿಲ್ ಸಾಲ್ಟ್ ಮೊದಲ ಓವರ್‌ ಎಸೆದ ದೇಶಪಾಂಡೆಯ ಮೊದಲ ಎಸೆತದಲ್ಲೇ ಜಡೇಜಾಗೆ ಕ್ಯಾಚಿತ್ತು ವಿಕೆಟ್ ಒಪ್ಪಿಸಿದರು. ಸುನಿಲ್ ನರೇನ್ 20 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಮೇತ 27 ರನ್ ಗಳಿಸಿ ಔಟಾದರು.

ಬಳಿಕ ಬಂದ ರಘುವಂಶಿ 18 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 24 ರನ್ ಗಳಿಸಿದರೆ, ನಾಯಕ ಶ್ರೇಯಸ್ ಅಯ್ಯರ್ 32 ಎಸೆತಗಳಲ್ಲಿ 3 ಬೌಂಡರಿ ನೆರವಿನಿಂದ 34 ರನ್ ಗಳಿಸಿದರು.

ಉಳಿದಂತೆ ವೆಂಕಟೇಶ್ ಅಯ್ಯರ್ 3 ರನ್, ರಮಣದೀಪ್ ಸಿಂಗ್ 13 ರನ್, ರಿಂಕು ಸಿಂಗ್ 9 ರನ್, ಆಂಡ್ರೆ ರಸೆಲ್ 10 ರನ್, ಅನುಕೂಲ್ ರಾಯ್ 3 ರನ್ ಮಾತ್ರ ಗಳಿಸಿ ತಂಡದ ಮೊತ್ತವನ್ನು 130ರ ಗಡಿ ದಾಟಿಸಿದರು.

ಬೌಲಿಂಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ರವೀಂದ್ರ ಜಡೇಜಾ 4 ಓವರ್‌ಗಳಲ್ಲಿ 18 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ತುಷಾರ್ ದೇಶಪಾಂಡೆ 4 ಓವರ್‌ಗಳಲ್ಲಿ 33 ರನ್ ನೀಡಿ 3 ವಿಕೆಟ್ ಪಡೆದರು. ಮುಸ್ತಾಫಿಜುರ್ ರಹಮಾನ್ 4 ಓವರ್‌ಗಳಲ್ಲಿ 22 ರನ್ ನೀಡಿ 2 ವಿಕೆಟ್ ಕಬಳಿಸಿದರು. ಮಹೇಶ ತೀಕ್ಷಣ ಒಂದು ವಿಕೆಟ್ ಪಡೆದರು.

ಎರಡು ಕ್ಯಾಚ್ ಹಾಗೂ ಮೂರು ವಿಕೆಟ್ ಪಡೆದಿದ್ದ ಆಲ್‌ರೌಂಡರ್ ಆಟಗಾರ ರವೀಂದ್ರ ಜಡೇಜಾ ಪಂದ್ಯಶ್ರೇಷ್ಢ ಪ್ರಶಸ್ತಿಗೆ ಪಾತ್ರರಾದರು.

ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆಡಿದ ಐದು ಪಂದ್ಯಗಳಲ್ಲಿ ಮೂರು ಗೆಲುವು ಮತ್ತು ಎರಡು ಸೋಲಿನೊಂದಿಗೆ 2024ರ ಐಪಿಎಲ್‌ನ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದರೆ, ಒಂದು ಸೋಲಿನೊಂದಿಗೆ ಕೆಕೆಆರ್ ತಂಡವು ಎರಡನೇ ಸ್ಥಾನದಲ್ಲಿ ಮುಂದುವರೆದಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X