IPL-2025 | ತವರಲ್ಲಿಯೇ ಮತ್ತೆ ಸೋತ ಆರ್‌ಸಿಬಿ: ರಾಹುಲ್‌ ಆಕರ್ಷಕ ಆಟದಿಂದ ಗೆದ್ದ ಡೆಲ್ಲಿ

Date:

Advertisements

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಆರ್‌ಸಿಬಿ ತಂಡವು 6 ವಿಕೆಟ್‌ಗಳಿಂದ ಸೋಲೊಪ್ಪಿಕೊಂಡಿದೆ. ಆ ಮೂಲಕ ತವರಲ್ಲಿ ಸೋಲಿನ ಸುಳಿಯಿಂದ ಪಾರಾಗುವಲ್ಲಿ ವಿಫಲವಾಗಿದೆ.

ಗೆಲ್ಲಲು ಕೇವಲ 164 ರನ್‌ಗಳ ಗುರಿಯನ್ನು ಪಡೆದಿದ್ದ ಡೆಲ್ಲಿ ಕ್ಯಾಪಿಟಲ್ಸ್, ಕೆ ಎಲ್ ರಾಹುಲ್‌ ಅವರ ಆಕರ್ಷಕ ಅರ್ಧಶತಕ (93 ರನ್) ನೆರವಿನಿಂದ 4 ವಿಕೆಟ್‌ಗಳಿಂದ ಗೆದ್ದು ಬೀಗಿತು.

ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ್ದ ಆರ್‌ಸಿಬಿ ದಿಢೀರ್ ಕುಸಿತದ ಪರಿಣಾಮವಾಗಿ ಕೇವಲ 164 ರನ್‌ಗಳನ್ನು ಕಲೆ ಹಾಕಿತ್ತು. ಇನ್ನೂ 13 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ತಲುಪಿತು. ಆರ್‌ಸಿಬಿ ತಂಡವು ತನ್ನ ತವರಲ್ಲೇ ಎರಡನೇ ಸೋಲು ಅನುಭವಿಸಿತು.

Advertisements

ವಿಶೇಷವೆಂದರೆ, ಆರ್‌ಸಿಬಿ vs ಡಿಸಿ ಪಂದ್ಯದಲ್ಲಿ ಕೆಎಲ್‌ ರಾಹುಲ್‌ ಅವರು ಬರೋಬ್ಬರಿ 9 ವರ್ಷಗಳ ನಂತರ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅರ್ಧ ಶತಕ ಬಾರಿಸಿದ್ದಾರೆ. ಹೌದು, ಕನ್ನಡದ ಈ ಹುಡುಗ ಬೆಂಗಳೂರಿನಲ್ಲಿ 9 ವರ್ಷಗಳ ಬಳಿಕ ಅರ್ಧ ಶತಕವೊಂದನ್ನು ದಾಖಲಿಸಿದ್ದು, ಈ ಅರ್ಧ ಶತಕ ಆರ್‌ಸಿಬಿ ವಿರುದ್ಧ ಬಂದಿರುವುದು ವಿಶೇಷ.

ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಕೆಎಲ್‌ ರಾಹುಲ್ ಕೇವಲ 53 ಎಸೆತಗಳಲ್ಲಿ ಅಜೇಯ 93 ರನ್ ಗಳಿಸಿ ಮಿಂಚಿದರು. ಅವರ ಈ ಅದ್ಭುತ ಆಟದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆರು ವಿಕೆಟ್ ಗಳಿಂದ ಜಯ ಸಾಧಿಸಿತು. ರಾಹುಲ್ ಅವರ ಈ ಇನ್ನಿಂಗ್ಸ್ ವಿಶೇಷವಾಗಿತ್ತು. ಏಕೆಂದರೆ ಇದು ಒಂಬತ್ತು ವರ್ಷಗಳ ನಂತರ ಬೆಂಗಳೂರಿನಲ್ಲಿ ಅವರು ಗಳಿಸಿದ ಮೊದಲ ಅರ್ಧ ಶತಕವಾಗಿತ್ತು.

ಈ ಹಿಂದೆ ಕೆಎಲ್‌ ರಾಹುಲ್ ಅವರು ಮುಂಬೈ ಇಂಡಿಯನ್ಸ್ (ಎಂಐ) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್‌) ವಿರುದ್ಧ 50+ ರನ್ ಗಳಿಸಿದ್ದರು. ಆದರೆ, ತವರಿನ ಅಂಗಳದಲ್ಲಿ ಅವರಿಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಈ ಬಾರಿ ಅವರು ಅದ್ಭುತ ಫಾರ್ಮ್‌ನಲ್ಲಿದ್ದು, ಡೆಲ್ಲಿ ತಂಡವು ಈ ಸೀಸನ್‌ನಲ್ಲಿ ನಾಲ್ಕನೇ ಗೆಲುವು ಸಾಧಿಸಲು ಪ್ರಮುಖ ಕಾರಣರಾದರು.

ಆರ್‌ಸಿಬಿ ನೀಡಿದ್ದ 164 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ, ಆರಂಭದಲ್ಲೇ ಆಘಾತ ಎದುರಾಯಿತು. ಫಾಫ್ ಡು ಪ್ಲೆಸಿಸ್, ಜೇಕ್ ಫ್ರೇಸರ್-ಮೆಕ್‌ಗುರ್ಕ್ ಮತ್ತು ಅಭಿಷೇಕ್ ಪೊರೆಲ್ ಬೇಗನೆ ಔಟಾದರು. ನಂತರ ಕೆಎಲ್‌ ರಾಹುಲ್‌ ಅವರು ಜವಾಬ್ದಾರಿಯನ್ನು ತೆಗೆದುಕೊಂಡು, ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಟ್ರಿಸ್ಟಾನ್ ಸ್ಟಬ್ಸ್ ಮಧ್ಯಮ ಕ್ರಮಾಂಕದಲ್ಲಿ ಕೆಎಲ್‌ ರಾಹುಲ್‌ ಅವರಿಗೆ ಉತ್ತಮ ಬೆಂಬಲ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X