ಕರ್ನಾಟಕ ರಣಜಿ ಗೆದ್ದಾಗ ಆರ್‌ಸಿಬಿ ಅಭಿಮಾನಿಗಳು ಹೀಗೆ ಬರುತ್ತಾರೆಯೇ: ಕ್ರಿಕೆಟರ್‌ ಸೈಯದ್‌ ಕಿರ್ಮಾನಿ ಪ್ರಶ್ನೆ

Date:

Advertisements

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಆಯೋಜಿಸಿದ್ದ ವಿಜಯೋತ್ಸವ ಕಾರ್ಯಕ್ರಮ ವೇಳೆ ಉಂಟಾದ ಕಾಲ್ತುಳಿತದಲ್ಲಿ11 ಅಭಿಮಾನಿಗಳು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿರುವ ದುರಂತದ ಬಗ್ಗೆ ಮಾಜಿ ಕ್ರಿಕೆಟರ್‌ ಸೈಯದ್‌ ಕಿರ್ಮಾನಿ ಬೇಸರ ವ್ಯಕ್ತಪಡಿಸಿದ್ದಾರೆ.

“ಚಾಂಪಿಯನ್‌ಗಳಿಗೆ ಇದೊಂದು ಡೆಡ್ಲಿ ವೆಲ್‌ಕಮ್. ಒಂದು ಕಪ್ ಪಡೆಯಲು 18 ವರ್ಷ ಕಾದರು. ಆದರೆ, ಹರ್ಷೋತ್ಸವ ಮಾಡಲು ಇನ್ನೊಂದೆರಡು ದಿನ ಕಾಯಬಹುದಿತ್ತು. ವ್ಯವಸ್ಥಿತ ಕಾರ್ಯಕ್ರಮ ಆಯೋಜಿಸಿ ಆರ್‌ಸಿಬಿ ಹಿರೋಗಳನ್ನು ಸ್ವಾಗತಿಸಬಹುದಿತ್ತು” ಎಂದು ಹೇಳಿದ್ದಾರೆ.

“ಸಾಕಷ್ಟು ಮುಂಜಾಗ್ರತೆ ವಹಿಸಿದ್ದರೆ ಭಾರಿ ದುರ್ಘಟನೆಯನ್ನು ತಡೆಯಬಹುದಿತ್ತು. ಸಮಯ ಹೊಂದಾಣಿಕೆ ಮಾಡಿಕೊಂಡು ಕಾರ್ಯಕ್ರಮ ಆಯೋಜನೆ ಮಾಡಿದ್ದರೆ ಅಮಾಯಕರ ಜೀವ ಉಳಿಯುತ್ತಿದ್ದವು” ಎಂದಿದ್ದಾರೆ.

Advertisements

“ಆರ್‌ಸಿಬಿ ಅಭಿಮಾನಿಗಳ ಅಭಿಮಾನ ಹುಚ್ಚುತನಕ್ಕೆ ತಿರುಗಿರುವುದು ಸ್ಪಷ್ಟವಾಗಿದೆ. ಆರ್‌ಸಿಬಿ ಕಪ್ ಗೆದ್ದಾಗ ಬಂದಿರುವ ಅಭಿಮಾನಿಗಳು ಕರ್ನಾಟಕ ತಂಡ ರಣಜಿ ಟ್ರೋಪಿ ಗೆದ್ದಾಗ ಬರುತ್ತಾರೆಯೇ? ನಮ್ಮ ಕಾಲದಲ್ಲಿ ಕ್ರಿಕೆಟ್‌ನ ಹುಚ್ಚು ಅಭಿಮಾನಿಗಳನ್ನು ನೋಡಲು ಸಾಧ್ಯವಿರಲಿಲ್ಲ. ಅದೂ ಸಹ ಇಂದಿನ ಐಪಿಎಲ್ ಅಭಿಮಾನಿಗಳ ಹುಚ್ಚು ವಿಪರೀತ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಇಂತಹದ್ದೆಲ್ಲ ಆಗುತ್ತೆ ಎನ್ನುವುದನ್ನು ನೋಡಿದರೆ ನಮ್ಮ ಕಾಲದಲ್ಲಿ ಆಗ ಯಾವುದೇ ಟಿ.ವಿ ಮಾಧ್ಯಮಗಳ ಚೀತ್ಕಾರಗಳಿರಲಿಲ್ಲ, ಸಮೂಹ ಸನ್ನಿಗಳಿರಲಿಲ್ಲ. ಅದಕ್ಕೆ ಇಂತಹ ಘಟನೆಗಳು ನಡೆಯುತ್ತಿರಲಿಲ್ಲ” ಎಂದು ಪರೋಕ್ಷವಾಗಿ ಮಾಧ್ಯಮಗಳ ವಿರುದ್ಧವೂ ಹರಿಹಾಯ್ದಿದ್ದಾರೆ.

1983ರಲ್ಲಿ ಭಾರತ ವಿಶ್ವಕಪ್ ಗೆದ್ದಾಗ ಸೈಯದ್ ಕಿರ್ಮಾನಿ ತಂಡದ ಸದಸ್ಯರಾಗಿದ್ದರು. ರಣಜಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X