ನಕಲಿ ಜಾಲತಾಣಗಳಲ್ಲಿ ಐಪಿಎಲ್‌ ಪಂದ್ಯಾವಳಿ ಅಕ್ರಮ ಪ್ರಸಾರ ತಡೆಯುವಂತೆ ದೆಹಲಿ ಹೈಕೋರ್ಟ್‌ ಆದೇಶ

Date:

Advertisements

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್‌ ಪಂದ್ಯಾವಳಿಯನ್ನು ಅಕ್ರಮವಾಗಿ ಪ್ರಸಾರ ಮಾಡದಂತೆ ಕೆಲ ನಕಲಿ ಜಾಲತಾಣಗಳಿಗೆ ನಿರ್ಬಂಧ ವಿಧಿಸಿ ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಐಪಿಎಲ್ ಪಂದ್ಯಗಳನ್ನು ಅಕ್ರಮವಾಗಿ ಪ್ರಸಾರ ಮಾಡುವ ಹಲವಾರು ನಕಲಿ ಜಾಲತಾಣಗಳಿವೆ ಎಂದು ದೂರಿ ವಯಾಕಾಮ್ 18 ಮೀಡಿಯಾ ಪ್ರೈವೇಟ್ ಲಿಮಿಟೆಡ್ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್ ನರುಲಾ, ಐಪಿಎಲ್ ಪಂದ್ಯಾವಳಿಗಳು ಅಲ್ಪಾವಧಿಯದ್ದಾಗಿರುವುದರಿಂದ ನಕಲಿ ಜಾಲತಾಣಗಳ ಬಳಕೆ ನಿರ್ಬಂಧಿಸುವಲ್ಲಿ ಯಾವುದೇ ವಿಳಂಬ ಉಂಟು ಮಾಡಿದರೆ ಅದರಿಂದ ವಯಾಕಾಮ್ 18 ಗಮನಾರ್ಹ ಆರ್ಥಿಕ ನಷ್ಟ ಅನುಭವಿಸಲು ಕಾರಣವಾಗಬಹುದು ಎಂದು ಉಲ್ಲೇಖಿಸಿ, ನಕಲಿ ಜಾಲತಾಣಗಳಲ್ಲಿ ಐಪಿಎಲ್‌ ಪಂದ್ಯಾವಳಿ ಅಕ್ರಮ ಪ್ರಸಾರ ತಡೆಯುವಂತೆ ಆದೇಶದಲ್ಲಿ ತಿಳಿಸಿದೆ.

Advertisements

ಕೃತಿಸ್ವಾಮ್ಯ ಇರುವ ಕೃತಿಗಳಿಗೆ ಅವುಗಳು ಸೃಷ್ಟಿಯಾದ ಕೂಡಲೇ ರಕ್ಷಣೆ ನೀಡುವ ಸಲುವಾಗಿ ಜೊತೆಗೆ ಕೃತಿಕಾರರು ಮತ್ತು ಮಾಲೀಕರಿಗೆ ಯಾವುದೇ ಸರಿಪಡಿಸಲಾಗದಂತಹ ನಷ್ಟ ಉಂಟಾಗದಂತೆ ನೋಡಿಕೊಳ್ಳಲು ಡೈನಾಮಿಕ್‌ ಪ್ಲಸ್‌ ತಡೆಯಾಜ್ಞೆ ನೀಡಲಾಗುತ್ತದೆ.

ಪ್ರಸಾರ ಹಕ್ಕುಗಳಲ್ಲಿ ವಯಾಕಾಮ್‌ ಮಾಡಿರುವ ಹೂಡಿಕೆಗೆ ರಕ್ಷಣೆ ಒದಗಿಸಲು ಮತ್ತು ಅದರ ಕೃತಿಸ್ವಾಮ್ಯತ್ವ ಉಳಿಸಿಕೊಳ್ಳಲು ಅಂತಹ ಉಲ್ಲಂಘನೆಯನ್ನು ತ್ವರಿತವಾಗಿ ನಿರ್ಬಂಧಿಸುವುದು ನಿರ್ಣಾಯಕ ಎಂದು ನ್ಯಾಯಾಲಯ ಹೇಳಿದೆ. ಹೀಗಾಗಿ ವಯಾಕಾಮ್ 18ರ ಮೊಕದ್ದಮೆಯಲ್ಲಿ ಆಕ್ಷೇಪಿಸಲಾದ ಜಾಲತಾಣಗಳ ಬಳಕೆ ನಿರ್ಬಂಧಿಸಲು ವಿವಿಧ ಅಂತರ್ಜಾಲ ಸೇವಾ ಪೂರೈಕೆದಾರರಿಗೆ ಆದೇಶಿಸಲಾಗಿದೆ.

ನಕಲಿ ಜಾಲತಣಾಗಳನ್ನು ನಿರ್ಬಂಧಿಸಿ ಅವುಗಳ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸಲು ನ್ಯಾಯಾಲಯ ಡೊಮೇನ್ ಹೆಸರು ನೋಂದಣಿದಾರರಿಗೆ ಸೂಚಿಸಿದೆ.

ಇದನ್ನು ಓದಿದ್ದೀರಾ? ಅಮೇರಿಕ | 2.6 ಕಿ.ಮೀ ಉದ್ದದ ಬಾಲ್ಟಿಮೋರ್ ಸೇತುವೆಗೆ ಹಡಗು ಡಿಕ್ಕಿ: 7 ಮಂದಿ ನಾಪತ್ತೆ; ವಿಡಿಯೋ ವೈರಲ್

ವಯಾಕಾಮ್ 18 ಓವರ್-ದಿ-ಟಾಪ್ (ಒಟಿಟಿ) ವೇದಿಕೆ ಜಿಯೋ ಸಿನೆಮಾವನ್ನು ಹೊಂದಿದ್ದು, 2023ರಿಂದ 2027ರವರೆಗೆ ನಡೆಯುವ ಐಪಿಎಲ್‌ ಪಂದ್ಯಾವಳಿಗಳ ಪ್ರಸಾರಕ್ಕೆ ಸಂಬಂಧಿಸಿದಂತೆ ಭಾರತೀಯ ಉಪಖಂಡದ ವಿಶೇಷ ಡಿಜಿಟಲ್ ಮಾಧ್ಯಮ ಹಕ್ಕು ಮತ್ತು ಸಾಗರೋತ್ತರ ಟಿವಿ ಹಕ್ಕುಗಳನ್ನು ಪಡೆದುಕೊಂಡಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X