ಖಾಸಗಿ ಸಂಭಾಷಣೆ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌ ವಿರುದ್ಧ ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ

Date:

Advertisements

ಐಪಿಎಲ್‌ ಬ್ರಾಡ್‌ಕಾಸ್ಟರ್‌ ಸ್ಟಾರ್‌ ಸ್ಪೋರ್ಟ್ಸ್‌ ವಿರುದ್ಧ ಆಕ್ರೋಶ ಹೊರಹಾಕಿರುವ ಟೀಮ್ ಇಂಡಿಯಾ ನಾಯಕ ಹಾಗೂ ಮುಂಬೈ ಇಂಡಿಯನ್ಸ್‌ ತಂಡ ಸ್ಟಾರ್ ಆಟಗಾರ ರೋಹಿತ್ ಶರ್ಮಾ, ಖಾಸಗಿ ಸಂಭಾಷಣೆ ಪ್ರಸಾರ ಮಾಡಿ ಗೌಪ್ಯತೆ ಉಲ್ಲಂಘಿಸಿದ್ದಾರೆ ಎಂದು ಆರೋಪ ಹೊರಿಸಿದ್ದಾರೆ.

ಎಕ್ಸ್‌ನಲ್ಲಿ ಈ ಬಗ್ಗೆ ಮೇ 19ರಂದು ಪೋಸ್ಟ್‌ ಹಾಕಿರುವ ರೋಹಿತ್‌ ಶರ್ಮಾ, “ಕ್ರಿಕೆಟಿಗರ ಜೀವನವು ಎಷ್ಟು ಕಷ್ಟಕರವಾಗಿದೆಯೆಂದರೆ, ಈಗ ನಾವು ನಮ್ಮ ಸ್ನೇಹಿತರು ಮತ್ತು ಸಹೋದ್ಯೋಗಿಗಳೊಂದಿಗೆ, ತರಬೇತಿ ಅಥವಾ ಪಂದ್ಯದ ದಿನಗಳಲ್ಲಿ ಗೌಪ್ಯವಾಗಿ ನಡೆಸುವ ಪ್ರತಿಯೊಂದು ಸಂಭಾಷಣೆಯನ್ನು ಕ್ಯಾಮೆರಾಗಳು ರೆಕಾರ್ಡ್ ಮಾಡುತ್ತಿವೆ” ಎಂದು ಬೇಸರ ಹೊರಹಾಕಿದ್ದಾರೆ.

“ನನ್ನ ಸಂಭಾಷಣೆಯನ್ನು ರೆಕಾರ್ಡ್ ಮಾಡಬೇಡಿ ಎಂದು ಸ್ಟಾರ್ ಸ್ಪೋರ್ಟ್ಸ್‌ಗೆ ಕೇಳಿಕೊಂಡರೂ, ಅದನ್ನು ಪ್ರಸಾರದಲ್ಲಿ ಪ್ಲೇ ಮಾಡಲಾಗಿತ್ತು. ಅದು ಗೌಪ್ಯತೆಯ ಉಲ್ಲಂಘನೆಯಾಗಿದೆ. ಎಕ್ಸ್‌ಕ್ಲೂಸಿವ್‌ ಕಂಟೆಂಟ್‌ ಹಾಗೂ ಚಾನೆಲ್‌ನ್ನು ಎಂಗೇಜ್‌ ಆಗಿ ಇಡುವುದು ಮತ್ತು ವೀವ್ಸ್‌ಗೆ ಗಮನ ಕೇಂದ್ರೀಕರಿಸುವುದು ಒಂದು ದಿನ ಅಭಿಮಾನಿಗಳು, ಕ್ರಿಕೆಟಿಗರು ಮತ್ತು ಕ್ರಿಕೆಟ್ ನಡುವಿನ ನಂಬಿಕೆಯನ್ನು ಮುರಿಯುತ್ತದೆ. ಉತ್ತಮ ಪ್ರಜ್ಞೆ ಮೇಲುಗೈ ಸಾಧಿಸಲಿ” ಎಂದು ಸ್ಟಾರ್‌ ಸ್ಪೋರ್ಟ್ಸ್‌ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Advertisements

STAR SPORTS imageonline.co merged

ರೋಹಿತ್‌ ಶರ್ಮಾ ಇತ್ತೀಚೆಗೆ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವ ಸಂಬಂಧ ಕೆಕೆಆರ್‌ ತಂಡದ ಸದಸ್ಯರೊಂದಿಗೆ ಸಂವಾದ ನಡೆಸುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಕ್ಯಾಮೆರಾಮನ್‌ ಸೆರೆ ಹಿಡಿದಿದ್ದರು. ಅದರಲ್ಲಿ ಖಾಸಗಿ ಸಂಭಾಷಣೆಗಳು ರೆಕಾರ್ಡ್‌ ಆಗಿದ್ದವು. ಇದು ಸೋಷಿಯಲ್ ಮೀಡಿಯಾಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿ, ರೋಹಿತ್ ಶರ್ಮಾರಿಗೆ ಇರಿಸುಮುರಿಸು ಉಂಟಾಗಿತ್ತು.

ಈ ನಡುವೆ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್‌ನ ಮಾಜಿ ಸಹ ಆಟಗಾರ ಧವಳ್ ಕುಲಕರ್ಣಿ ಅವರೊಂದಿಗೆ ಮಾತನಾಡುತ್ತಿದ್ದರು. ಈ ವೇಳೆ ಕ್ಯಾಮೆರಾಮೆನ್‌ ಸಂಭಾಷಣೆಯನ್ನು ರೆಕಾರ್ಡ್ ಮಾಡುತ್ತಿರುವುದು ಗಮನಿಸಿದ್ದಾರೆ. ಮತ್ತೊಮ್ಮೆ ಕ್ಯಾಮೆರಾಮೆನ್  ತನ್ನನ್ನು ಸೆರೆಹಿಡಿಯುತ್ತಿರುವುದನ್ನು ಕಂಡು ದೂರದಿಂದಲೇ ಕೈಮುಗಿದ ಹಿಟ್‌ ಮ್ಯಾನ್‌, ‘ದಯವಿಟ್ಟು ಮೈಕ್‌ ಆಫ್‌ ಮಾಡಿ’ ಎಂದು ಮನವಿ ಮಾಡಿದ್ದರು. ಆದರೂ ವೀಡಿಯೋ ಕೂಡ ಸೋಷಿಯಲ್‌ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇದರಿಂದ ಬೇಸರಗೊಂಡಿರುವ ರೋಹಿತ್‌ ಶರ್ಮಾ, ಟ್ವೀಟ್‌ ಮಾಡಿ ಅಸಮಾಧಾನ ಹೊರಹಾಕಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X