ಬಿಸಿಸಿಐ ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ನೇಮಕ

Date:

Advertisements

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೂತನ ಕಾರ್ಯದರ್ಶಿಯಾಗಿ ಅಸ್ಸಾಂನ ಮಾಜಿ ಕ್ರಿಕೆಟಿಗ ದೇವಜಿತ್ ಸೈಕಿಯಾ ನೇಮಕವಾಗಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ ಅಧ್ಯಕ್ಷರಾಗಿ ಜಯ್‌ ಶಾ ಆಯ್ಕೆಯಾದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಒಂದು ತಿಂಗಳ ಬಳಿಕ ಸೈಕಿಯಾ ನೇಮಕಗೊಂಡಿದ್ದಾರೆ ಎಂದು ವರದಿಯಾಗಿದೆ. 

ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಇಂದು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ , ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಹಾಗೂ ಕೋಚ್‌ ಗೌತಮ್‌ ಗಂಭೀರ್‌ ಅವರೊಂದಿಗೆ ಸಭೆಯಲ್ಲಿ ಪಾಲ್ಗೊಂಡಿದ್ದರು.

Advertisements

ಸಭೆಯಲ್ಲಿ ಇತ್ತೀಚಿನ ಬಾರ್ಡರ್‌ ಗವಾಸ್ಕರ್‌ ಟ್ರೋಫಿಯಲ್ಲಿ ಟೀಂ ಇಂಡೀಯಾ ಸೋಲಿಗೆ ಕಾರಣಗಳನ್ನು ಆತ್ಮಾವಲೋಕನ ಮಾಡಿಕೊಳ್ಳಲಾಯಿತು. ಅಲ್ಲದೇ ಇತ್ತೀಚಿನ ದಿನಗಳಲ್ಲಿ ಏಕದಿನ ಮತ್ತು ಟೆಸ್ಟ್‌ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಕಳಪೆ ಪ್ರದರ್ಶನಕ್ಕೆ ಕಾರಣಗಳೇನೆಂಬುದನ್ನು ಚರ್ಚಿಸಲಾಯಿತು. ಜೊತೆಗೆ ಮುಂದಿನ ಸವಾಲುಗಳ ಬಗ್ಗೆ ರೂಪುರೇಷೆಗಳನ್ನು ಸಿದ್ಧಪಡಿಸುವ ಬಗ್ಗೆಯೂ ಮಾತುಕತೆ ನಡೆಸಲಾಯಿತು.

ಈ ಸುದ್ದಿ ಓದಿದ್ದೀರಾ? ಕ್ರಿಕೆಟ್ | ಟೀಂ ಇಂಡಿಯಾ ನಿದ್ದೆಗೆಡಿಸಿದ ಕ್ಯಾಪ್ಟನ್ ಪ್ಯಾಟ್ ಕಮಿನ್ಸ್!

ಸೈಕಿಯಾ ಅಸ್ಸಾಂ ಮೂಲದ ಮಾಜಿ ಕ್ರಿಕೆಟರ್‌. 1990 – 1991ರ ನಡುವೆ‌ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 4 ಪಂದ್ಯಗಳನ್ನಾಡಿದ್ದ ಸೈಕಿಯಾ ವಿಕೆಟ್‌ ಕೀಪರ್‌ ಆಗಿದ್ದರು. ಈ ಪಂದ್ಯದಲ್ಲಿ 53 ರನ್‌ ಗಳಿಸಿದ್ದ ಅವರು 9 ವಿಕೆಟ್‌ ಪಡೆದಿದ್ದರು. ಬಳಿಕ ಕಾನೂನು ವೃತ್ತಿಯಲ್ಲಿ ಮುಂದುವರಿಯಲು ಪ್ರಾರಂಭಿಸಿದರು. 28ನೇ ವಯಸ್ಸಿನಲ್ಲಿ ಗುವಾಹಟಿ ಹೈಕೋರ್ಟ್‌ ವಕೀಲರಾಗಿ ಅಭ್ಯಾಸ ಆರಂಭಿಸಿದರು. ಇದಕ್ಕೂ ಮುನ್ನ ಸ್ಪೋರ್ಟ್ಸ್‌ ಕೋಟಾ ಮೂಲಕ ಉತ್ತರ ಗಡಿನಾಡು ರೈಲ್ವೆ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸಿದ್ದರು.

ನಂತರ 2019ರಲ್ಲಿ ಮತ್ತೆ ಕ್ರೀಡಾಲೋಕಕ್ಕೆ ಮರಳಿದರು. ಅಸ್ಸಾಂ ಕ್ರಿಕೆಟ್ ಅಸೋಸಿಯೇಷನ್‌ನ ಆರು ಉಪಾಧ್ಯಕ್ಷರಲ್ಲಿ ಒಬ್ಬರಾಗಿದ್ದರು. 2019ರಲ್ಲಿ ಅಸ್ಸಾಂ ಕ್ರಿಕೆಟ್‌ ಅಸೋಸಿಯೇಷನ್‌ ಕಾರ್ಯದರ್ಶಿಯಾಗಿ ಬಳಿಕ 2022ರಲ್ಲಿ ಬಿಸಿಸಿಐ ಹಂಟಿ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು. ಇದೀಗ ಬಿಸಿಸಿಐ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X