ಐಪಿಎಲ್ 2025 | ಓಡಿದ್ದ 2 ರನ್‌ ಹಾಗೂ ಆ ಒಂದು ನಿರ್ಧಾರ ಚೆನ್ನೈ ಸೋಲಿಗೆ ಕಾರಣವಾಯಿತೆ?

Date:

Advertisements

ಈ ಬಾರಿಯ ಐಪಿಎಲ್‌ನಲ್ಲಿ ಅಂಪೈರ್‌ಗಳ ನಿರ್ಣಯಗಳು ಮತ್ತೊಮ್ಮೆ ವಿವಾದಕ್ಕೆ ಎಡೆಮಾಡಿಕೊಡುತ್ತಿವೆ. ಆರ್‌ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್‌ ನಡುವಣ ಪಂದ್ಯವೂ ಇದಕ್ಕೆ ಸಾಕ್ಷಿಯಾಗಿದೆ.

ಆರ್‌ಸಿಬಿ ನೀಡಿದ್ದ 214 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದಾಗ ಚೆನ್ನೈ ಸೂಪರ್‌ ಕಿಂಗ್ಸ್‌ ಪರ 16.2 ಓವರ್‌ನಲ್ಲಿ ಆಯುಷ್‌ ಮಾತ್ರೆ (94) ಔಟ್ ಆಗುತ್ತಿದ್ದಂತೆ, ಕ್ರೀಸ್‌ಗೆ ಡೆವಾಲ್ಡ್ ಬ್ರೆವಿಸ್ ಮೈದಾನಕ್ಕೆ ಬಂದರು. ಇವರು ಲುಂಗಿ ಎನ್‌ಗಿಡಿ ಅವರ ಎಸೆತದಲ್ಲಿ ಔಟ್ ಆದರು. ಆದರೆ ಇವರಿಗೆ ಡಿಆರ್‌ಎಸ್‌ ತೆಗೆದುಕೊಳ್ಳಲು ಆಗಲಿಲ್ಲ

ಡೆವಾಲ್ಡ್‌ ಬ್ರಾವಿಸ್‌ ಎಲ್‌ಬಿ ಔಟ್‌ ಆದಾಗ ದೊಡ್ಡ ಪರದೆಯ ಮೇಲೆ ಟೈಮರ್ ಕಾಣಿಸಿಕೊಳ್ಳದೇ ಸಮಸ್ಯೆಯನ್ನು ಸೃಷ್ಟಿಸಿತು. ಡೆವಾಲ್ಡ್‌ ಬ್ರಾವಿಸ್‌ ಔಟ್ ಎಂದು ತೀರ್ಪು ನೀಡುತ್ತಿದ್ದಂತೆ ಅದಕ್ಕೂ ತಲೆ ಕಡಿಸಿಕೊಳ್ಳದೆ ರನ್ ಓಡಲು ಮುಂದಾದರು. ಬಳಿಕ ರವೀಂದ್ರ ಜಡೇಜಾ ಅವರನ್ನು ಸಂಪರ್ಕಿಸಿ ಡಿಆರ್‌ಎಸ್‌ ಮೇಲ್ಮನವಿ ಸಲ್ಲಿಸಿದರು. ಆಗಲೇ ವಿವಾದ ಹುಟ್ಟಿಕೊಂಡಿತು. ಏಕೆಂದರೆ ಮನವಿ ಸಲ್ಲಿಸುವ ನಿಗದಿತ ಅವಧಿ ಮೀರಿತ್ತು.

Advertisements

ಐಪಿಎಲ್​ ನಿಯಮದ ಪ್ರಕಾರ, ಎಲ್​ಬಿಡಬ್ಲ್ಯೂ ಆದರೆ 15 ಸೆಕೆಂಡ್​ಗಳ ಒಳಗೆ ಡಿಆರ್​ಎಸ್​ಗೆ ಮನವಿ ಸಲ್ಲಿಸಬೇಕು. ಅದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ, ಮನವಿಯನ್ನು ತಿರಸ್ಕರಿಸಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? 2026ರ ಏಷ್ಯನ್ ಕ್ರೀಡಾಕೂಟದಲ್ಲಿ ಕ್ರಿಕೆಟ್‌ಗೆ ಸ್ಥಾನ; ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ ಒಪ್ಪಿಗೆ

ಆದರೆ ಈ ನಿಯಮದ ಬಗ್ಗೆ ಅರಿವಿಲ್ಲದೆ, ಡೆವಾಲ್ಡ್ ಬ್ರೆವಿಸ್ ಹಾಗೂ ರವೀಂದ್ರ ಜಡೇಜಾ 2 ರನ್ ಓಡಿದ್ದಾರೆ. ಅದರಲ್ಲೂ ಒಂದು ರನ್ ಕಲೆಹಾಕಿದ ಬಳಿಕ ಡಿಆರ್​ಎಸ್​ಗೆ ಮನವಿ ಸಲ್ಲಿಸಿದ್ದರೂ ಬ್ರೆವಿಸ್​ ಅವರಿಗೆ ರಿವ್ಯೂ ಲಭಿಸುತ್ತಿತ್ತು.

ಇದರ ಪರಿಕಲ್ಪನೆಯೇ ಇಲ್ಲದೆ, ರವೀಂದ್ರ ಜಡೇಜಾ ಡೆವಾಲ್ಡ್ ಬ್ರೆವಿಸ್ ಅವರನ್ನು 2ನೇ ರನ್​ಗಾಗಿ ಕರೆದಿದ್ದಾರೆ. ಇತ್ತ ಕಡೆಯಿಂದ ಸ್ಟ್ರೈಕ್​ನತ್ತ ಓಡಿದ ಬ್ರೆವಿಸ್ ಆ ಬಳಿಕ ಜಡೇಜಾ ಜೊತೆ ಚರ್ಚಿಸಿ ಡಿಆರ್​ಎಸ್​ಗೆ ಮನವಿ ಸಲ್ಲಿಸಿದ್ದಾರೆ.

ಅಷ್ಟರಲ್ಲಾಗಲೇ ಟೈಮರ್ 25 ಸೆಕೆಂಡ್​ಗಳನ್ನು ದಾಟಿತ್ತು. ಅಂದರೆ 15 ಸೆಕೆಂಡ್​ಗಳಲ್ಲಿ ತೆಗೆದುಕೊಳ್ಳಬೇಕಾದ ರಿವ್ಯೂ ಅನ್ನು ಬ್ರೆವಿಸ್ 25 ಸೆಕೆಂಡ್​ಗಳ ಬಳಿಕ ತೆಗೆದುಕೊಂಡಿದ್ದಾರೆ. ಹೀಗಾಗಿ ಅಂಪೈರ್ ಮನವಿಯನ್ನು ತಿರಸ್ಕರಿಸಿದರು.

ಇದರಿಂದಾಗಿ ಡೆವಾಲ್ಡ್ ಬ್ರೆವಿಸ್ ಮೇಲ್ಮನವಿ ಇಲ್ಲದೆ ಪೆವಿಲಿಯನ್​ಗೆ ಹಿಂತಿರುಗಬೇಕಾಯಿತು. ಕುತೂಹಲಕಾರಿ ವಿಷಯ ಎಂದರೆ ಅದು ನಾಟೌಟ್ ಆಗಿತ್ತು. ಅಂದರೆ ರಿಪ್ಲೇ ವಿಡಿಯೋದಲ್ಲಿ ಡೆವಾಲ್ಡ್ ಬ್ರೆವಿಸ್ ಕಾಲಿಗೆ ತಾಗಿದ ಚೆಂಡು ವಿಕೆಟ್​ನಿಂದ ದೂರ ಸಾಗುತ್ತಿರುವುದು ಕಂಡು ಬಂದಿದೆ.

ಈ ಒಂದೇ ಓವರ್‌ನಲ್ಲಿ ಬ್ಯಾಕ್‌ ಟು ಬ್ಯಾಕ್‌ ಎರಡು ವಿಕೆಟ್‌ಗಳನ್ನು ಪಡೆದ ಲುಂಗಿ ಎನ್‌ಗಿಡಿ ಅಬ್ಬರಿಸಿದರು. ಅಲ್ಲದೆ ಆರ್‌ಸಿಬಿ ಪಂದ್ಯದಲ್ಲಿ ಭರ್ಜರಿ ವಾಪಸಾತಿ ಮಾಡುವಲ್ಲಿ ತಮ್ಮದೇ ಆದ ಕಾಣಿಕೆ ನೀಡಿದರು. ರೆವ್ಯೂ ತೆಗೆದುಕೊಂಡು ಓಡಿದ 2 ರನ್‌ ಲೆಕ್ಕಕ್ಕಿದ್ದರೆ ಸಿಎಸ್​ಕೆ ತಂಡಕ್ಕೆ ಗೆಲ್ಲುವ ಅವಕಾಶವಿರುತ್ತಿತ್ತು. ಕೊನೆಗೆ 2 ರನ್‌ನಿಂದಲೇ ಸೋಲು ಅನುಬೇಕಾಯಿತು.

ಪಂದ್ಯ ಫಲಿತಾಂಶ ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 213 ರನ್‌ ಗಳಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 211 ರನ್‌ ಸೇರಿಸಿ ಸೋಲು ಕಂಡಿತು. ಈ ಪಂದ್ಯದಲ್ಲಿ ಮಹತ್ವದ 2 ಅಂಕ ಕಲೆ ಹಾಕುತ್ತಿದ್ದಂತೆ ಆರ್‌ಸಿಬಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X