ಐಪಿಎಲ್ | ‘ಮ್ಯಾಚ್ ವಿನ್ನರ್’ ಆದ ದಿನೇಶ್ ಕಾರ್ತಿಕ್: ಆರ್‌ಸಿಬಿಗೆ ರೋಚಕ ಜಯ

Date:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ರವರ ಭರ್ಜರಿ ಬ್ಯಾಟಿಂಗ್‌ನ ನೆರವಿನಿಂದ ಆರ್‌ಸಿಬಿ ರೋಚಕ ಗೆಲುವು ದಾಖಲಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಶಿಖರ್ ಧವನ್ ನೇತೃತ್ವದ ಪಂಜಾಬ್ ತಂಡವು ಆರ್‌ಸಿಬಿಗೆ ಗೆಲ್ಲಲು 177 ರನ್‌ಗಳ ಸವಾಲಿನ ಗುರಿ ನೀಡಿದೆ.

ಪಂಜಾಬ್ ನೀಡಿದ್ದ ಗುರಿ ಬೆನ್ನತ್ತಿದ ಆರ್‌ಸಿಬಿ, 19.2 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು ಗುರಿ ಮುಟ್ಟುವಲ್ಲಿ ಯಶಸ್ವಿಯಾಯಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದಿನೇಶ್ ಕಾರ್ತಿಕ್ ಹತ್ತು ಎಸೆತಗಳಲ್ಲಿ 28 ರನ್ ಬಾರಿಸುವ ಮೂಲಕ ಆರ್‌ಸಿಬಿ ಪಾಲಿಗೆ ಆಪತ್ಬಾಂಧವರಾದರು‌. ಈ ಗೆಲುವಿ‌ನ ಮೂಲಕ ತವರಿನಲ್ಲಿ ಆರ್‌ಸಿಬಿ ಈ ಬಾರಿಯ ಸೀಸನ್‌ನ ಮೊದಲ ಗೆಲುವು ದಾಖಲಿಸಿದ್ದು, ಅಭಿಮಾನಿಗಳಲ್ಲಿ ಸಂತಸ ಮೂಡಿಸಿತು.

ವಿರಾಟ್‌ ಕೊಹ್ಲಿ 49 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 11 ಆಕರ್ಷಕ ಬೌಂಡರಿಯ ನೆರವಿನಿಂದ 77 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದ ಲೋಂಬ್ ರೋರ್ 8 ಎಸೆತಗಳಲ್ಲಿ 1 ಸಿಕ್ಸ್, 2 ಬೌಂಡರಿಯ ನೆರವಿನಿಂದ 17 ರನ್ ದಾಖಲಿಸುವ ಮೂಲಕ ತಮ್ಮದೇ ಆದ ವಿಶಿಷ್ಟ ಕೊಡುಗೆ ನೀಡಿದರು.

ಈ ಚೆಲುವಿನೊಂದಿಗೆ ಆರ್‌ಸಿಬಿ ಈ ಸೀಸನ್‌ನ ಮೊದಲ ಗೆಲವು ಪಡೆದಿದೆ‌. ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ವಿರುದ್ಧ ಸೋಲನುಭವಿಸಿತ್ತು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ಪಂಜಾಬ್ ವಿರುದ್ಧ ಗುಜರಾತ್ ಟೈಟನ್ಸ್‌ಗೆ ಮೂರು ವಿಕೆಟ್‌ಗಳ ಜಯ

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌...

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...