ಮಹಿಳಾ ಅಂಡರ್‌-19 ವಿಶ್ವಕಪ್: ಕನ್ನಡತಿ ನೇತೃತ್ವದಲ್ಲಿ ಟೀಂ ಇಂಡಿಯಾ ಚಾಂಪಿಯನ್

Date:

Advertisements

ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಮಹಿಳೆಯರ ತಂಡ ಭರ್ಜರಿ ಗೆಲುವು ಸಾಧಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಕ್ವಾಲಾಲಂಪುರದ ಬೇಯುಮಾಸ್ ಓವಲ್‌ನ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 9 ವಿಕೆಟ್‌ಗಳ ಅಮೋಘ ಗೆಲುವನ್ನು ದಾಖಲಿಸಿಕೊಂಡು, ಎರಡನೇ ಬಾರಿಯು ಅಂಡರ್-19 ಟಿ20 ವಿಶ್ವಕಪ್ ತನ್ನಲ್ಲೇ ಉಳಿಸಿಕೊಂಡಿದೆ.

ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಭಾರತ ಅಜೇಯ ತಂಡಗಳಾಗಿ ಫೈನಲ್ ಪ್ರವೇಶ ಮಾಡಿದ್ದವು. ಅಂತಿಮ ಹಣಾಹಣಿಯಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ಭಾರತೀಯರ ಬೌಲಿಂಗ್ ದಾಳಿಗೆ ತತ್ತರಿಸಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾದ ಆಟಗಾರ್ತಿಯರು ನಿರೀಕ್ಷೆಗೆ ತಕ್ಕಂತೆ ಬ್ಯಾಟ್ ಬೀಸುವಲ್ಲಿ ವಿಫಲರಾದರು. ಬ್ಯಾಟರ್‌ಗಳಾದ ಗೊಂಗಡಿ ತ್ರಿಷಾ, ವೈಷ್ಣವಿ ಶರ್ಮಾ, ಆಯುಷಿ ಶುಕ್ಲಾ ಹಾಗೂ ಪರುಣಿಕಾ ಸಿಸೋಡಿಯಾ ಅವರ ಮಾರಕ ಬೌಲಿಂಗ್ ದಾಳಿಗೆ ಹೆಚ್ಚು ಕಾಲ ಕ್ರಿಸ್‌ನಲ್ಲಿ ನಿಲ್ಲದೆ ಪೆವಿಲಿಯನ್‌ನತ್ತ ಮುಖ ಮಾಡಿದರು.

Advertisements

ಈ ಸುದ್ದಿ ಓದಿದ್ದೀರಾ? ಟೀಂ ಇಂಡಿಯಾ ಸೋತರೂ ವರುಣ್ ಚಕ್ರವರ್ತಿಯಿಂದ ವಿನೂತನ ದಾಖಲೆ

ಮೈಕೆ ವ್ಯಾನ್ ವೂರ್ಸ್ಟ್ ದಾಖಲಿಸಿದ 23 ರನ್ ಹೊರತುಪಡಿಸಿದರೆ ಉಳಿದ ಆಟಗಾರರು ರನ್ಗಳಿಸಲು ಪರದಾಡಿದರು. ಒಂದಾದ
ಮೇಲೊಂದು ವಿಕೆಟ್ ಒಪ್ಪಿಸಿದರು.

20 ಓವರ್‌ನಲ್ಲಿ ಎಲ್ಲ ವಿಕೆಟ್ ಕಳೆದುಕೊಂಡ ದಕ್ಷಿಣ ಆಫ್ರಿಕಾ ಕೇವಲ 82 ರನ್ ಪೇರಿಸಿ, ಭಾರತ ತಂಡಕ್ಕೆ ಸುಲಭ ಗುರಿಯನ್ನು
ಬಿಟ್ಟುಕೊಟ್ಟಿತು.

ಎರಡನೇ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ, ಆರಂಭದಲ್ಲಿ ಜಿ ಕಮಲಿನಿ ಅವರ ವಿಕೆಟ್ ಕಳೆದುಕೊಂಡಿತು. ಆ ಬಳಿಕ ಗೊಂಗಡಿ
ತ್ರಿಷಾ (44 ರನ್), ಸಾನಿಕಾ ಚಲ್ಕೆ (26 ರನ್) ಜತೆಗೂಡಿ 11.2 ಓವರ್‌ನಲ್ಲಿ 84 ರನ್ ಪೇರಿಸಿ ಗೆಲುವಿನ ದಡ ಸೇರಿಸಿದರು.

ಭಾರತದ ಪರ ಗೊಂಗಡಿ ತ್ರಿಷಾ ಪ್ರಮುಖ 3 ವಿಕೆಟ್ ಪಡೆದರು. ವೈಷ್ಣವಿ ಶರ್ಮಾ, ಆಯುಷಿ ಶುಕ್ಲಾ ಹಾಗೂ ಪರುಣಿಕಾ ಸಿಸೋಡಿಯಾ 2 ವಿಕೆಟ್ ಪಡೆದು ಮಿಂಚಿದರು. ಶಬ್ನಮ್ ಶಕೀಲ್ 1 ವಿಕೆಟ್ ಪಡೆದರು.

ಈ ಬಾರಿ ಭಾರತ ತಂಡವನ್ನು ಕರ್ನಾಟಕದ ನಿಕ್ಕಿ ಪ್ರಸಾದ್ ಮುನ್ನಡೆಸಿದ್ದರು. 19 ವರ್ಷದೊಳಗಿನವರ ಮಹಿಳಾ ಏಷ್ಯಾಕಪ್‌ನಲ್ಲಿ ಸಹ ಭಾರತ ತಂಡದ ನಾಯಕತ್ವ ವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X