ಐಪಿಎಲ್ | ಅಭಿಮಾನಿಗಳನ್ನು ಸತಾಯಿಸಿ ಗುಜರಾತ್ ವಿರುದ್ಧ ಜಯ ಪಡೆದ ಆರ್‌ಸಿಬಿ: ಪ್ಲೇ-ಆಫ್ ಆಸೆ ಜೀವಂತ?

Date:

Advertisements

ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 52ನೇ ಪಂದ್ಯದಲ್ಲಿ ಆತಿಥೇಯ ಆರ್‌ಸಿಬಿ ತಂಡವು ಗುಜರಾತ್ ಟೈಟನ್ಸ್ ವಿರುದ್ಧ 4 ವಿಕೆಟ್‌ಗಳ ಜಯ ದಾಖಲಿಸಿದೆ. ಆದರೆ, ಈ ಪಂದ್ಯವು ಹಲವು ನಾಟಕೀಯ ತಿರುವುಗಳಿಗೆ ಸಾಕ್ಷಿಯಾಗುವ ಮೂಲಕ ಅಭಿಮಾನಿಗಳನ್ನು ಆತಂಕಕ್ಕೆ ದೂಡಿದ ಪ್ರಸಂಗವೂ ನಡೆಯಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ಟೈಟನ್ಸ್ ತಂಡವು ಆರ್‌ಸಿಬಿ ತಂಡದ ಬಿಗಿ ಬೌಲಿಂಗ್ ದಾಳಿಗೆ ನಲುಗಿ 19.3 ಓವರ್‌ಗಳಲ್ಲಿ 147 ರನ್‌ಗಳಿಗೆ ಆಲೌಟ್ ಆಗುವ ಮೂಲಕ, 148 ರನ್‌ಗಳ ಗುರಿ ನೀಡಿತ್ತು.

ಈ ಗುರಿಯನ್ನು ಬೆನ್ನಟ್ಟಿದ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ಉತ್ತಮ ಆರಂಭ ಪಡೆದಿತ್ತು. ಮೊದಲ ಓವರ್‌ನಿಂದಲೇ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಆರಂಭಿಕರಾದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡು ಪ್ಲೆಸಿಸ್ 5.4 ಓವರ್‌ಗಳಲ್ಲಿ 92 ರನ್ ದಾಖಲಿಸಿದ್ದರು. ಆದರೆ ಫಾಫ್ ಡು ಪ್ಲೆಸಿಸ್ ಔಟಾದ ನಂತರ ನಡೆದ ದಿಢೀರ್ ಬೆಳವಣಿಗೆಯಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. 92 ರನ್ ವೇಳೆ ಯಾವುದೇ ವಿಕೆಟ್ ನೀಡದಿದ್ದ ಆರ್‌ಸಿಬಿ, 117 ರನ್ ಗಳಿಸುವಷ್ಟರಲ್ಲಿ ಜೋಶ್ ಲಿಟ್ಟಲ್ ಅವರ ಮಾರಕ ದಾಳಿಗೆ ಸಿಲುಕಿ 6 ವಿಕೆಟ್ ಕಳೆದುಕೊಂಡಿತು.

Advertisements

ಕೊನೆಯಲ್ಲಿ ಆಧಾರವಾಗಿ ನಿಂತ ದಿನೇಶ್ ಕಾರ್ತಿಕ್ ಹಾಗೂ ಸ್ವಪ್ನಿಲ್ ಸಿಂಗ್ ತಾಳ್ಮೆಯ ಆಟವಾಡಿ 13.4 ಓವರ್‌ಗಳಲ್ಲಿ 152 ರನ್ ಗಳಿಸಿ, ಇನ್ನೂ 38 ಎಸೆತಗಳು ಬಾಕಿ ಇರುವಾಗಲೇ ಗೆಲುವು ದಾಖಲಿಸಿತು.

ಕಳೆದ ಮೂರೂ ಪಂದ್ಯಗಳಲ್ಲಿ ಮೂರನ್ನೂ ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದ ಆರ್‌ಸಿಬಿ, 7ನೇ ಸ್ಥಾನಕ್ಕೆ ಬಂದು ನಿಂತಿದೆ. ಆ ಮೂಲಕ ಪ್ಲೇ-ಆಫ್ ಆಸೆಯನ್ನೂ ಇನ್ನೂ ಕೂಡ ಅಭಿಮಾನಿಗಳಲ್ಲಿ ಜೀವಂತವಾಗಿರಿಸಿದೆ.

92ಕ್ಕೆ ಶೂನ್ಯ ವಿಕೆಟ್; 117ಕ್ಕೆ ಆರು ವಿಕೆಟ್!

ಆರಂಭಿಕರಾದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡು ಪ್ಲೆಸಿಸ್ 5.4 ಓವರ್‌ಗಳಲ್ಲಿ 92 ರನ್‌ಗಳ ಜೊತೆಯಾಟ ನಡೆಸುವ ಮೂಲಕ ಸುಲಭ ಜಯ ನಿರೀಕ್ಷೆ ಹುಟ್ಟಿಸಿದ್ದರು.

ಕ್ಯಾಪ್ಟನ್​​​ ಫಾಫ್​ ಡುಪ್ಲೆಸಿಸ್​​ ಭರ್ಜರಿ ಬ್ಯಾಟಿಂಗ್​ ಮಾಡಿ, ವಲ 23 ಬಾಲ್​ನಲ್ಲಿ ಸಿಡಿಲಬ್ಬರದ ಅರ್ಧಶತಕ ಸಿಡಿಸಿದರು. ಬರೋಬ್ಬರಿ 3 ಸಿಕ್ಸರ್​​, 10 ಬೌಂಡರಿ  ಸಮೇತ 64 ರನ್​ ಸಿಡಿಸಿದರು. ಬಳಿಕ ಬಂದ ಬ್ಯಾಟರ್‌ಗಳಾದ ವಿಲ್ ಜಾಕ್ಸ್‌(1 ರನ್), ರಜತ್ ಪಾಟೀದಾರ್(2 ರನ್), ಗ್ಲೆನ್ ಮ್ಯಾಕ್ಸ್‌ವೆಲ್ (4), ಕ್ಯಾಮರೂನ್ ಗ್ರೀನ್(1 ರನ್) ಪೆವಿಲಿಯನ್ ಪರೇಡ್ ನಡೆಸಿದರು. 42 ರನ್( ಗಳಿಸಿ ಆಸರೆಯಾಗುತ್ತಿದ್ದ ವಿರಾಟ್ ಕೊಹ್ಲಿ ಕೂಡ ಕ್ಯಾಚಿತ್ತು ನಿರ್ಗಮಿಸಿದರು.

ಜೋಶ್ ಲಿಟ್ಟಲ್ ಹಾಗೂ ನೂರ್ ಅಹ್ಮದ್ ಅವರ ಕರಾರುವಾಕ್ಕಾದ ಮಾರಕ ದಾಳಿಗೆ ಸಿಲುಕಿದ ಆರ್‌ಸಿಬಿ, 117ಕ್ಕೆ ಆರು ವಿಕೆಟ್ ಕಳೆದುಕೊಳ್ಳುವ ಮೂಲಕ ಅಭಿಮಾನಿಗಳ ಎದೆಯಲ್ಲಿ ಸೋಲಿನ ಆತಂಕ ಮೂಡಿಸುವ ಮೂಲಕ ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಯಿತು.

ಕೊನೆಯಲ್ಲಿ ದಿನೇಶ್ ಕಾರ್ತಿಕ್ ಹಾಗೂ ಸ್ವಪ್ನಿಲ್ ಸಿಂಗ್ ತಾಳ್ಮೆಯ ಆಟವಾಡಿದ್ದರಿಂದ 13.4 ಓವರ್‌ಗಳಲ್ಲಿ ಗೆಲುವಿನ ದಡ ತಲುಪಿಸಿದರು. ಮೊದಲು ಅಭಿಮಾನಿಗಳೆಲ್ಲರಿಗೂ ಖುಷಿ ನೀಡಿ, ಆ ಬಳಿಕ ಭಾರೀ ಭಯ ಹುಟ್ಟಿಸಿ, ಕೊನೆಯಲ್ಲಿ ಬಳಿಕ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಯಿತು.

ದಿನೇಶ್ ಕಾರ್ತಿಕ್ 12 ಎಸೆತಗಳಲ್ಲಿ 3 ಬೌಂಡರಿಯ ನೆರವಿನಿಂದ 21 ರನ್ ಗಳಿಸಿದರೆ, ಸ್ವಪ್ನಿಲ್ ಸಿಂಗ್ 9 ಎಸೆತಗಳಲ್ಲಿ 1 ಸಿಕ್ಸರ್ ಹಾಗೂ 2 ಬೌಂಡರಿಯ ನೆರವಿನಿಂದ 15 ರನ್ ಬಾರಿಸಿದರು.

ಗುಜರಾತ್ ಪರ ಉತ್ತಮ ಬೌಲಿಂಗ್ ನಡೆಸಿದ ಐರ್ಲೆಂಡ್‌ನ ಯುವ ಬೌಲರ್ ಜೋಶ್ ಲಿಟ್ಟಲ್ 4 ಓವರ್‌ಗಳಲ್ಲಿ 45 ರನ್ ನೀಡಿದರೂ 4 ವಿಕೆಟ್ ಕಬಳಿಸಿ ಮಿಂಚಿದರೆ, ಅಫ್ಘಾನಿಸ್ತಾನ ಮೂಲದ ಸ್ಪಿನ್ನರ್ ನೂರ್ ಅಹ್ಮದ್ 23ಕ್ಕೆ 2 ವಿಕೆಟ್ ಪಡೆದುಕೊಂಡರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X