ಎಲಿಮಿನೇಟರ್ ಪಂದ್ಯ | ರಾಜಸ್ಥಾನ ಗೆಲುವಿಗೆ 173 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿದ ಆರ್‌ಸಿಬಿ

Date:

Advertisements

ಗುಜರಾತ್‌ನ ಅಹ್ಮದಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆಯುತ್ತಿರುವ ಐಪಿಎಲ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು, ರಾಜಸ್ಥಾನದ ಗೆಲುವಿಗೆ 173 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿದೆ.

ರಾಜಸ್ಥಾನ ತಂಡದ ಸಂಘಟಿತ ಬೌಲಿಂಗ್‌ಗೆ ರನ್ ಗಳಿಸಲು ಪರದಾಡಿದ ಆರ್‌ಸಿಬಿಯ ಬ್ಯಾಟರ್‌ಗಳು, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 172 ರನ್ ದಾಖಲಿಸಿದರು.

ಟಾಸ್ ಸೋತಿದ್ದ ಫಾಫ್ ಡು ಪ್ಲೆಸಿ ನೇತೃತ್ವದ ಬೆಂಗಳೂರು ತಂಡದ ಆರಂಭ ಉತ್ತಮವಾಗಿತ್ತು. ಕೊಹ್ಲಿ ಜೊತೆಗೆ ಇನ್ನಿಂಗ್ಸ್‌ ಆರಂಭಿಸಿದ್ದ ನಾಯಕ, ಮೊದಲ ವಿಕೆಟ್‌ಗೆ 37 ರನ್‌ಗಳ ಜೊತೆಯಾಟ ನಡೆಸಿದರು. 17 ರನ್ ಗಳಿಸಿದ್ದಾಗ ಟ್ರೆಂಟ್ ಬೌಲ್ಟ್‌ ಎಸೆತದಲ್ಲಿ ರೋವ್‌ಮೆನ್ ಪೊವೆಲ್‌ಗೆ ಕ್ಯಾಚಿತ್ತು ನಿರ್ಗಮಿಸಿದರು.

Advertisements

ರಜತ್ ಪಾಟೀದಾರ್ 34 ಹಾಗೂ ವಿರಾಟ್ ಕೊಹ್ಲಿ 33, ಲೋಮ್‌ರೋರ್ 32 ರನ್ ಗಳಿಸುವ ಮೂಲಕ ಆರ್‌ಸಿಬಿ ಪರ ಹೆಚ್ಚು ಸ್ಕೋರ್ ಗಳಿಸಿದ ಆಟಗಾರರೆನಿಸಿದರು. ಕ್ಯಾಮರೂನ್ ಗ್ರೀನ್ 27 ರನ್ ಗಳಿಸಿ ಔಟಾದರು.

ಫಾರ್ಮ್‌ ಕಳೆದುಕೊಂಡಿರುವ ಗ್ಲೆನ್ ಮ್ಯಾಕ್ಸ್‌ವೆಲ್ ಇಂದಿನ ನಿರ್ಣಾಯಕ ಪಂದ್ಯದಲ್ಲೂ ರನ್ ಗಳಿಸಲು ವಿಫಲರಾದರು. ಆರ್ ಅಶ್ವಿನ್ ಬೌಲಿಂಗ್‌ ವೇಳೆ ಕ್ರೀಸ್‌ಗೆ ಬಂದು ನಿಂತ ಮ್ಯಾಕ್ಸ್‌ವೆಲ್, ಮೊದಲ ಎಸೆತದಲ್ಲೇ ದೊಡ್ಡ ಹೊಡೆತಕ್ಕೆ ಯತ್ನಿಸಿ, ಕ್ಯಾಚಿತ್ತು ನಿರ್ಗಮಿಸಿದರು.

ಉಳಿದಂತೆ ದಿನೇಶ್ ಕಾರ್ತಿಕ್ 11 ರನ್ ಗಳಿಸಿ ಔಟಾದರು. ಸ್ವಪ್ನಿಲ್ ಸಿಂಗ್ 9 ರನ್ ಹಾಗೂ ಕರನ್ ಶರ್ಮಾ 5 ರನ್ ಗಳಿಸಿ, ಔಟಾಗದೇ ಉಳಿದರು. ಕೊನೆಯಲ್ಲಿ 8 ವಿಕೆಟ್ ಕಳೆದುಕೊಂಡು 172 ರನ್ ಗಳಿಸಲಷ್ಟೇ ಶಕ್ತವಾಯಿತು. ಫೀಲ್ಡಿಂಗ್‌ನಲ್ಲಿ ನಾಲ್ಕು ಉತ್ತಮ ಕ್ಯಾಚ್ ಪಡೆಯುವ ಮೂಲಕ ರೋವ್‌ಮೆನ್ ಪೊವೆಲ್‌ ಮಿಂಚಿದರು.

ರಾಜಸ್ಥಾನ ಪರ ಉತ್ತಮ ಬೌಲಿಂಗ್ ನಡೆಸಿದ ಆವೇಶ್ ಖಾನ್ 4 ಓವರ್‌ಗಳಲ್ಲಿ 44 ರನ್ ನೀಡಿದರೂ ಪ್ರಮುಖ 3 ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾದರು. ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 2 ವಿಕೆಟ್ ಗಳಿಸಿದರು. ಉಳಿದಂತೆ ಸಂಘಟಿತ ಬೌಲಿಂಗ್ ನಡೆಸಿದ ಟ್ರೆಂಟ್ ಬೌಲ್ಟ್‌, ಯುಜುವೇಂದ್ರ ಚಾಹಲ್, ಸಂದೀಪ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆಯುವ ಮೂಲಕ ಆರ್‌ಸಿಬಿಯ ರನ್‌ದಾಹಕ್ಕೆ ಕಡಿವಾಣ ಹಾಕುವಲ್ಲಿ ಯಶಸ್ವಿಯಾದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X